Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಬಿ ಬೆಟ್ಟ ಆಸ್ತಿ ಮೈಸೂರು ಅರಮನೆಗೆ ಸೇರಿದ್ದು, ನಮ್ಮ ಅನುಮತಿ ಪಡೆಯದೆ ಟ್ರಯಲ್ ಬ್ಲಾಸ್ಟ್ ನಡೆಸಬೇಡಿ -ರಾಜಮಾತೆ ಪ್ರಮೋದಾದೇವಿ

ಬೇಬಿ ಬೆಟ್ಟ ಆಸ್ತಿ ಮೈಸೂರು ಅರಮನೆಗೆ ಸೇರಿದ್ದು. ನಮ್ಮ ಅನುಮತಿ ಪಡೆಯದೆ ಟ್ರಯಲ್ ಬ್ಲಾಸ್ಟ್ ನಡೆಸಬೇಡಿ ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ರಾಜಮಾತೆ ಪ್ರಮೋದಾದೇವಿ ಪತ್ರ ಬರೆದಿದ್ದಾರೆ. KRS ಡ್ಯಾಂ ಸಮೀಪವಿರುವ ನಮ್ಮ ಖಾಸಗಿ ಜಮೀನಿನಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುವ ಹಕ್ಕು ಯಾರಿಗೂ ಇಲ್ಲ ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ಪತ್ರ ಬರೆದು ರಾಜಮಾತೆ ಎಚ್ಚರಿಕೆ ನೀಡಿದ್ದಾರೆ.

ಬೇಬಿ ಬೆಟ್ಟ ಆಸ್ತಿ ಮೈಸೂರು ಅರಮನೆಗೆ ಸೇರಿದ್ದು, ನಮ್ಮ ಅನುಮತಿ ಪಡೆಯದೆ ಟ್ರಯಲ್ ಬ್ಲಾಸ್ಟ್ ನಡೆಸಬೇಡಿ -ರಾಜಮಾತೆ ಪ್ರಮೋದಾದೇವಿ
ರಾಜಮಾತೆ ಪ್ರಮೋದಾದೇವಿ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on:Jul 17, 2024 | 9:35 AM

ಮಂಡ್ಯ, ಜುಲೈ.16: ಮಂಡ್ಯದ ಬೇಬಿ ಬೆಟ್ಟದಲ್ಲಿ (Mandya Bebi Betta) ಅಕ್ರಮ ಗಣಿಗಾರಿಕೆಯಿಂದ ಸಾವಿರಾರು ಕೋಟಿ ನಷ್ಟವಾಗಿರುವುದರ ಜೊತೆಗೆ ಕೆಆರ್​ಎಸ್ (KRS Dam) ಜಲಾಶಯಕ್ಕೆ ಅಪಾಯದ ಭೀತಿ ಇದೆ. ಇದರ ನಡುವೆ ಇದೀಗ ವಿರೋಧದ ನಡುವೆಯೂ ಮತ್ತೆ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್​​ಗೆ ಸರ್ಕಾರ ಮುಂದಾಗಿದೆ. ಸದ್ಯ ಈಗ ಈ ವಿವಾದದಲ್ಲಿ ರಾಜಮಾತೆ ಪ್ರಮೋದಾದೇವಿ (Pramoda Devi Wadiyar) ಮಧ್ಯಪ್ರವೇಶ ಮಾಡಿದ್ದು ನಮ್ಮ ಅನುಮತಿ ಪಡೆಯದೆ ಟ್ರಯಲ್ ಬ್ಲಾಸ್ಟ್ ನಡೆಸದಂತೆ ಪತ್ರ ಬರೆದಿದ್ದಾರೆ.

ಬೇಬಿ ಬೆಟ್ಟ ಆಸ್ತಿ ಮೈಸೂರು ಅರಮನೆಗೆ ಸೇರಿದ್ದು. ನಮ್ಮ ಅನುಮತಿ ಪಡೆಯದೆ ಟ್ರಯಲ್ ಬ್ಲಾಸ್ಟ್ ನಡೆಸಬೇಡಿ ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ರಾಜಮಾತೆ ಪ್ರಮೋದಾದೇವಿ ಪತ್ರ ಬರೆದಿದ್ದಾರೆ. ಬೇಬಿ ಬೆಟ್ಟದ ಅಮೃತಮಹಲ್ ಕಾವಲ್‌ನ ಸರ್ವೆ ನಂ.1ರ 1623 ಎಕರೆ ಅರಮನೆಗೆ ಸೇರಿದ ಆಸ್ತಿ. ಈ ಆಸ್ತಿಯನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕಂದಾಯ ಇಲಾಖೆಗೆ ಹಲವು ಬಾರಿ ಪತ್ರ ಬರೆಯಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಆಗಿಲ್ಲ. KRS ಡ್ಯಾಂ ಸಮೀಪವಿರುವ ನಮ್ಮ ಖಾಸಗಿ ಜಮೀನಿನಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುವ ಹಕ್ಕು ಯಾರಿಗೂ ಇಲ್ಲ ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ಪತ್ರ ಬರೆದು ರಾಜಮಾತೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಾಸನ: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ ಆತಂಕ

ಕೃಷ್ಣರಾಜಸಾಗರ ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್ ಬ್ಲಾಸ್ಟ್‌ಗೆ ಅವಕಾಶ ನೀಡಬಾರದು. ಮೈಸೂರು ಸಂಸ್ಥಾನವಿದ್ದ ಸಮಯದಲ್ಲೇ ಭಾರತ ಸರ್ಕಾರ ಈ ಆಸ್ತಿಯನ್ನು ನನ್ನ ಪತಿ ಶ್ರೀ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ತಂದೆಗೆ ನೀಡಿದ್ದು, ನನ್ನ ಪತಿ 2013ರ ಡಿಸೆಂಬರ್ 10ರಂದು ನಿಧನರಾಗಿದ್ದು, ಆನಂತರ ಈ ಆಸ್ತಿಗೆ ನಾನು ವಾರಸುದಾರಳಾಗಿದ್ದೇನೆ. ಈ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕಂದಾಯ ಇಲಾಖೆಯವರಿಗೆ ಅರ್ಜಿ ಸಲ್ಲಿಸಿದ್ದರೂ, ನಾನಾ ಕಾರಣಗಳನ್ನು ಹೇಳುತ್ತಲೇ ಇದುವರೆಗೂ ನನ್ನ ಹೆಸರಿಗೆ ಖಾತೆ ಮಾಡಿಕೊಟ್ಟಿಲ್ಲ. ಅದಕ್ಕಾಗಿ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿ ಬೇಬಿಬೆಟ್ಟ ಕಾವಲ್‌ನ ಸರ್ವೇ ನಂ.1ರ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕೋರಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:57 am, Tue, 16 July 24

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ