AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ-ಅಮ್ಮನಿಂದಲೇ ಇನ್ನಿಲ್ಲದ ಕಿರುಕುಳ; ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡ ಮಗ, ಡೆತ್​ನೋಟ್​​ನಲ್ಲಿ ಬಯಲಾಯ್ತು ಸತ್ಯ

ರಾಜು ಮತ್ತು ದೇವಮಣಿ ದಂಪತಿ ಒಂದು ಚೆಂದನೆಯ ಮನೆಯಲ್ಲಿ ಇದ್ದರು. ಆದರೆ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮಗ-ಸೊಸೆಯನ್ನು ಕೊಟ್ಟಿಗೆಯಲ್ಲಿ ಇಟ್ಟಿದ್ದರು. ಹಾಗೇ, ಆಸ್ತಿಯನ್ನೂ ಕೊಟ್ಟಿರಲಿಲ್ಲ.

ಅಪ್ಪ-ಅಮ್ಮನಿಂದಲೇ ಇನ್ನಿಲ್ಲದ ಕಿರುಕುಳ; ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡ ಮಗ, ಡೆತ್​ನೋಟ್​​ನಲ್ಲಿ ಬಯಲಾಯ್ತು ಸತ್ಯ
ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಗಿರೀಶ್​
TV9 Web
| Edited By: |

Updated on:Sep 09, 2021 | 11:41 AM

Share

ಮಂಡ್ಯ: ಹೆತ್ತವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಡೆತ್​ ನೋಟ್​  (Death Note) ಬರೆದಿಟ್ಟ ಮಗ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ನಡೆದಿದೆ. 32 ವರ್ಷದ ಗಿರೀಶ್​ ಆತ್ಮಹತ್ಯೆ ಮಾಡಿಕೊಂಡವರು.  ‘ನನ್ನ ಸಾವಿಗೆ ಅಪ್ಪ ರಾಜು..ಅಮ್ಮ ದೇವಮಣಿಯೇ ಕಾರಣ’ ಎಂದು ಸ್ಪಷ್ಟವಾಗಿ ಡೆತ್​ ನೋಟ್​ ಬರೆದಿದ್ದಾರೆ. ಹಾಗೇ, ತಮಗೆ ತಂದೆ-ತಾಯಿ ಹೇಗೆ ಕಿರುಕುಳ ನೀಡಿದ್ದರು ಎಂಬುದನ್ನೂ ಡೆತ್​ ನೋಟ್​ನಲ್ಲಿ ವಿವರಿಸಿದ್ದಾರೆ. 

ಗಿರೀಶ್​ ತಂದೆ  ಸರ್ಕಾರಿ ಶಾಲೆ ನಿವೃತ್ತ ಶಿಕ್ಷಕರಾಗಿದ್ದಾರೆ. ಹಾಗೇ ತಾಯಿ ದೇವಮಣಿ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿ. ಗಿರೀಶ್​ಗೆ ಮದುವೆಯಾಗಿ 11 ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಹೀಗಾಗಿ ರಾಜು ಮತ್ತು ದೇವಮಣಿ ಇಬ್ಬರೂ ಮಗನಿಗೆ ಮಾನಸಿಕ ಹಿಂಸೆ ನೀಡುತ್ತಿದ್ದರು. ಪದೇಪದೆ ಮಗ-ಸೊಸೆಯನ್ನು ಹಂಗಿಸುತ್ತಿದ್ದರು ಎಂದು ಹೇಳಲಾಗಿದೆ.  ಇದೆಲ್ಲ ಗಿರೀಶ್ ಬರೆದಿಟ್ಟಿರುವ ಡೆತ್​ನೋಟ್​​ನಲ್ಲೇ ಉಲ್ಲೇಖವಾಗಿದೆ.

ರಾಜು ಮತ್ತು ದೇವಮಣಿ ದಂಪತಿ ಒಂದು ಚೆಂದನೆಯ ಮನೆಯಲ್ಲಿ ಇದ್ದರು. ಆದರೆ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮಗ-ಸೊಸೆಯನ್ನು ಕೊಟ್ಟಿಗೆಯಲ್ಲಿ ಇಟ್ಟಿದ್ದರು. ಹಾಗೇ, ಆಸ್ತಿಯನ್ನೂ ಕೊಟ್ಟಿರಲಿಲ್ಲ. ಗಿರೀಶ್​ ಬಳಿ ಜೀವನೋಪಾಯಕ್ಕೆ ಇದ್ದಿದ್ದ ಒಂದು ಟ್ರ್ಯಾಕ್ಟರ್​ನ್ನೂ ಕೂಡ ಕಸಿದುಕೊಂಡಿದ್ದರು. ಜಮೀನು, ಮನೆ, ಆಸ್ತಿ ಏನೂ ಇಲ್ಲದೆ ಗಿರೀಶ್​ ತೀರ ಕಷ್ಟಪಡುತ್ತಿದ್ದರು. ಇದೆಲ್ಲದರಿಂದ ಮನನೊಂದ ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾನು-ಪತ್ನಿಯೊಂದಿಗೆ ವಾಸವಾಗಿದ್ದ ಕೊಟ್ಟಿಗೆ ಗೋಡೆ ಮೇಲೆಲ್ಲ, ‘ನನ್ನ ಸಾವಿಗೆ ಅಪ್ಪ-ಅಮ್ಮನೇ ಕಾರಣ, ಹೆತ್ತವರ ಕಿರುಕುಳವೇ ಕಾರಣ’ ಎಂದು ಬರೆದಿಟ್ಟಿದ್ದಾರೆ. ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಗಿರೀಶ್​ ಹೆತ್ತವರಾದ ರಾಜು ಮತ್ತು ದೇವಮಣಿ ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ: Farmers Protest ಕರ್ನಾಲ್ ಮಾಜಿ ಎಸ್‌ಡಿಎಮ್ ವಿರುದ್ಧ ಕ್ರಮದ ಕುರಿತು ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಸಿದ ರೈತರು

CM Bommai Interview LIVE: ಟಿವಿ9 ಸ್ಟುಡಿಯೋದಲ್ಲಿ ಸಿಎಂ ಬೊಮ್ಮಾಯಿ; ಕಾಮನ್​ಮ್ಯಾನ್ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

Published On - 11:40 am, Thu, 9 September 21

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು