AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ತಪ್ಪಿಸಲು ಕಳ್ಳಾಟ: ಜೀವದ ಜೊತೆ ಚೆಲ್ಲಾಟ!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೆಲ ಚಾಲಕರು ಶ್ರೀರಂಗಪಟ್ಟಣ ಟೋಲ್ ತಪ್ಪಿಸಲು ಎಕ್ಸಿಟ್‌ಗಳಲ್ಲಿ ಎಂಟ್ರಿ ಪಡೆಯುತ್ತಾ ಅಪಾಯಕಾರಿ ಕಳ್ಳಾಟವಾಡುತ್ತಿದ್ದಾರೆ. ಇತ್ತೀಚೆಗೆ ಉಮ್ಮಡಹಳ್ಳಿ ಗೇಟ್ ಬಳಿ ಕಾರೊಂದು ಫ್ಲೈಓವರ್‌ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ದುರಂತದ ಬಳಿಕವೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ತಪ್ಪಿಸಲು ಕಳ್ಳಾಟ: ಜೀವದ ಜೊತೆ ಚೆಲ್ಲಾಟ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ತಪ್ಪಿಸಲು ಚಾಲಕರಿಂದ ರಾಂಗ್ ರೂಟ್ ಕಳ್ಳಾಟ.
ದಿಲೀಪ್​, ಚೌಡಹಳ್ಳಿ
| Edited By: |

Updated on:Sep 20, 2026 | 8:53 AM

Share

ಮುಖ್ಯಾಂಶಗಳು

  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ತಪ್ಪಿಸಲು ಚಾಲಕರಿಂದ ರಾಂಗ್ ರೂಟ್ ಕಳ್ಳಾಟ.
  • ಎಕ್ಸಿಟ್‌ಗಳಲ್ಲಿ ಎಂಟ್ರಿ ಪಡೆಯುವುದರಿಂದ ಹೆಚ್ಚಿದ ಅಪಘಾತಗಳು, NHAI ಅಧಿಕಾರಿಗಳ ನಿರ್ಲಕ್ಷ್ಯ.
  • ಉಮ್ಮಡಹಳ್ಳಿ ಗೇಟ್ ಬಳಿ ಫ್ಲೈಓವರ್‌ನಿಂದ ಬಿದ್ದು ಮಹಿಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದರು.

ಮಂಡ್ಯ, ಸೆಪ್ಟೆಂಬರ್ 20: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ವಾಹನ ಸವಾರರ ಬೇಜವಾಬ್ದಾರಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪ್ರಾಣಸಂಕಟ ಎದುರಾಗಿದೆ. ಕೇವಲ ನೂರಾರು ರೂಪಾಯಿ ಟೋಲ್ ಹಣ ಉಳಿಸಲು ಕೆಲ ಚಾಲಕರು ನಿಯಮ ಗಾಳಿಗೆ ತೂರಿ ರಾಂಗ್ ರೂಟ್‌ನಲ್ಲಿ ಸಂಚರಿಸುತ್ತಿದ್ದಾರೆ. ಈ ಹಿಂದೆ ವೇಗವಾಗಿ ಬಂದ ಕಾರೊಂದು ಫ್ಲೈಓವರ್ ಮೇಲಿಂದ ಕೆಳಕ್ಕೆ ಬಿದ್ದು ಮಹಿಳೆಯೊಬ್ಬರು ದುರಂತ ಅಂತ್ಯ ಕಂಡಿರುವ ಘಟನೆ ಮಂಡ್ಯ ಸಮೀಪ ಸಂಭವಿಸಿತ್ತು.

ಎಕ್ಸಿಟ್ ಭಾಗದಲ್ಲೇ ರಿವರ್ಸ್!

ಶ್ರೀರಂಗಪಟ್ಟಣ ಟೋಲ್ ಪಾವತಿಯನ್ನು ತಪ್ಪಿಸಲು ದೊಡ್ಡ ದೊಡ್ಡ ಟ್ರಕ್‌ಗಳು, ಬಸ್‌ಗಳು ಹಾಗೂ ಕಾರು ಚಾಲಕರು ಅಪಾಯಕಾರಿ ಕಳ್ಳಾಟಕ್ಕೆ ಇಳಿದಿದ್ದಾರೆ. ಸರ್ವೀಸ್ ರಸ್ತೆಯಲ್ಲಿ ಬಂದು ಎಕ್ಸ್‌ಪ್ರೆಸ್ ವೇ ಎಕ್ಸಿಟ್ ಭಾಗದಲ್ಲೇ ರಿವರ್ಸ್ ಎಂಟ್ರಿ ಪಡೆದುಕೊಳ್ಳುತ್ತಿದ್ದಾರೆ. ಎಂಟ್ರಿಯಲ್ಲಿ ಎಕ್ಸಿಟ್, ಎಕ್ಸಿಟ್‌ನಲ್ಲಿ ಎಂಟ್ರಿ ಪಡೆಯುತ್ತಿರುವ ಈ ಚಾಲಕರ ಬೇಜವಾಬ್ದಾರಿಯಿಂದ ದಿನಂಪ್ರತಿ ಅಪಘಾತಗಳು ಸಂಭವಿಸುತ್ತಿದ್ದು, ಸ್ಥಳೀಯರು ಹಾಗೂ ಇತರ ಸವಾರರು ಹೈರಾಣಾಗಿದ್ದಾರೆ. ಸರಣಿ ದೂರುಗಳು ಬಂದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಫ್ಲೈಓವರ್‌ನಿಂದ ಬಿದ್ದಿದ್ದ ಕಾರು: ಚಿಕಿತ್ಸೆಗೆ ಸ್ಪಂದಿಸದೆ ಮಹಿಳೆ ದುರಂತ ಅಂತ್ಯ!

ಮಂಡ್ಯ ಸಮೀಪದ ಉಮ್ಮಡಹಳ್ಳಿ ಗೇಟ್ ಬಳಿ ಕೆಲ ದಿನಗಳ ಹಿಂದೆ ಭೀಕರ ಅಪಘಾತವೊಂದು ಸಂಭವಿಸಿತ್ತು. ಎಕ್ಸ್‌ಪ್ರೆಸ್‌ ವೇ ಫ್ಲೈಓವರ್ ಮೇಲೆ ಅತಿ ವೇಗವಾಗಿ ಬಂದಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಕಾರು ಫ್ಲೈಓವರ್ ಮೇಲಿಂದ ನೇರವಾಗಿ ಕೆಳಗೆ ಬಿದ್ದಿತ್ತು.

ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಜನಾ (32) ಎಂಬುವವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದರು. ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 am, Sun, 20 September 26

Follow Us
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ