Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಹೆದ್ದಾರಿ ದುರಸ್ತಿ ಮಾಡುವಂತೆ ಸಂಸದ ಪ್ರತಾಪ್ ಸಿಂಹಾಗೆ ಗಡುವು

ಬೆಂಗಳೂರು-ಮೈಸೂರು ಹೆದ್ದಾರಿ ವಿಚಾರವಾಗಿ ಮಾತನಾಡಿದ ಜೆಡಿಎಸ್ ಶಾಸಕ ಪುಟ್ಟರಾಜು, ಮೇಲುಕೋಟೆ ವ್ಯಾಪ್ತಿಯಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತಿ ಮಾಡಲು ಸಂಸದ ಪ್ರತಾಪ್ ಸಿಂಹ ಅವರಿಗೆ ಗಡುವು ನೀಡಿದ್ದಾರೆ. ಗಡುವು ಮೀರಿದರೆ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿ ದುರಸ್ತಿ ಮಾಡುವಂತೆ ಸಂಸದ ಪ್ರತಾಪ್ ಸಿಂಹಾಗೆ ಗಡುವು
ಬೆಂಗಳೂರು-ಮೈಸೂರು ಹೆದ್ದಾರಿ ದುರಸ್ತಿಗೆ ಸಂಸದ ಪ್ರತಾಪ್ ಸಿಂಹಾಗೆ ಗಡುವು
Follow us
TV9 Web
| Updated By: Rakesh Nayak Manchi

Updated on:Nov 19, 2022 | 11:25 AM

ಮಂಡ್ಯ: ಮೇಲುಕೋಟೆ ತಾಲೂಕಿನ ಬಹುತೇಕ ರಸ್ತೆಗಳು ಹದಗೆಟ್ಟಿವೆ. ಭಾರೀ ಗಾತ್ರದ ವಾಹನಗಳು ಸಂಚರಿಸುತ್ತಿರುವುದರಿಂದ ಮೇಲುಕೋಟೆ ಕ್ಷೇತ್ರದ ಹೆದ್ದಾರಿ ವ್ಯಾಪ್ತಿಯಲ್ಲಿನ ಬಹುತೇಕ ರಸ್ತೆಗಳು ಗುಂಡಿಗಳು ಬಿದ್ದು ಹಾಳಾಗಿವೆ. ಹೀಗಾಗಿ ಳನ್ನು ದುರಸ್ತಿ ಮಾಡುವಂತೆ ಆಗ್ರಹಗಳು ಕೇಳಿಬರುತ್ತಿದೆ. ಆದಷ್ಟು ಬೇಗ ಹೆದ್ದಾರಿಯನ್ನು ದುರಸ್ತಿ ಮಾಡಬೇಕು ಎಂದು ಮೇಲುಕೋಟೆ ಕ್ಷೇತ್ರದ ಜೆಡಿಎಸ್​ ಶಾಸಕ ಸಿ.ಎಸ್.ಪುಟ್ಟರಾಜು (C.S.Puttaraju) ಅವರು ಸಂಸದ ಪ್ರತಾಪ್ ಸಿಂಹ (Pratap Simha) ಅವರಿಗೆ ಗಡುವು ನೀಡಿದ್ದಾರೆ. ಹೆದ್ದಾರಿ ಕೆಲಸ ಮುಗಿದ ಬಳಿಕ ರಸ್ತೆ ದುರಸ್ಥಿ ಮಾಡಿಸಿ ಕೊಡುವುದಾಗಿ ಸಂಸದ ಪ್ರತಾಪ್ ಸಿಂಹ ಅವರು ಮಾತುಕೊಟ್ಟಿದ್ದರು. ಸದ್ಯ ಬೆಂಗಳೂರು ಮೈಸೂರು ಹೆದ್ದಾರಿ ಕಾಮಗಾರಿ ಬಹುತೇಕ ಅಂತ್ಯಗೊಂಡಿದೆ. ಹೀಗಾಗಿ ಸಂಸದ ಪ್ರತಾಪ್ ಸಿಂಹ ಮಾತು ಉಳಿಸಿಕೊಳ್ಳದೆ ಹೋದರೆ ಪ್ರತಿಭಟನೆ ನಡೆಸುವುದಾಗಿ ಶಾಸಕರು ಎಚ್ಚರಿಕೆ ನೀಡಿದ್ದಾರೆ.

ಹೆದ್ದಾರಿ ಕಾಮಗಾರಿ ಅವೈಜ್ಞಾನವಾಗಿದೆ, ಸಾವಿರಾರು ಜನರ ಅನ್ನ ಕಿತ್ತುಕೊಂಡಿದೆ. ಪ್ರತಾಪ್ ಸಿಂಹ ಕಾಂಟ್ರ್ಯಾಕ್ಟರ್ ಮೇಲೆ ಈತನೊಬ್ಬ ಕಾಂಟ್ರ್ಯಾಕ್ಟರ್. ರಸ್ತೆಗಳನ್ನು ಗಮನಿಸಿದಾಗ ಕಳಪೆ ಕಾಮಗಾರಿ ಅನ್ನೋದು ಬಟಾ ಬಯಲಾಗಿದೆ. ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಬೇಕು. ಮಾತು ತಪ್ಪಿದರೆ ನಿಮ್ಮ ಮನೆ ಮುಂದೆ ಧರಣಿ ಕುಳಿತು ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕರು ಎಚ್ಚರಿಕೆ ನೀಡಿದರು. ಕೆ.ಆರ್.ಎಸ್ ಬೃಂದಾವನಕ್ಕೆ ಚಿರತೆ ನುಗ್ಗಿ ಆತಂಕ ಸೃಷ್ಠಿಸಿದ್ದ ವಿಚಾರವಾಗಿ ಪ್ರತಿಕ್ರಿಯಿಸಿ, ಕಳೆದ 15 ದಿನಗಳಿಂದ ಪ್ರವಾಸಿಗರಿಗೆ ನಿರ್ಭಂದ ಹೇರಲಾಗಿದೆ. ಸರ್ಕಾರಕ್ಕೆ ಮತ್ತು ಅರಣ್ಯ ಇಲಾಖೆಯವರಿಗೆ ಮಾನ ಮರ್ಯಾದೆ ಇಲ್ಲ, ಕೇಲವ ಸಮಯ ವ್ಯರ್ಥ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: Bengaluru Metro: 2025ರ ವೇಳೆಗೆ ಬೆಂಗಳೂರು 314 ಕಿಮೀ ಮೆಟ್ರೋ ರೈಲು ಸಂಪರ್ಕವನ್ನು ಹೊಂದಲಿದೆ

ವಿಧಾನಸಭೆ ಚುನಾವಣೆ ವಿಚಾರವಾಗಿ ಪಾಂಡವಪುರದಲ್ಲಿ ಮಾತನಾಡಿದ ಶಾಸಕರು, ಮಂಡ್ಯ ಜೆಡಿಎಸ್ ಭದ್ರಕೋಟೆಯಲ್ಲಿ 7ಕ್ಕೆ 7 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ. ಹೋದ ಬಾರಿ ಕಾಂಚಾಣದ (ಹಣ) ಬಲದಿಂದ ಚುನಾವಣೆಯನ್ನ ಕೆ.ಆರ್ ಪೇಟೆಯಲ್ಲಿ ಗೆದ್ದಿದ್ದರು. ಆದರೆ ಈ ಬಾರಿ ಹಾಗೆ ಆಗುವುದಿಲ್ಲ. ಕೆ.ಆರ್ ಪೇಟೆಯಲ್ಲಿ ಸಮರ್ಥ ಅಭ್ಯರ್ಥಿ ಇದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಗ್ರಾಮಕ್ಕೆ ರಸ್ತೆ ಸರಿಪಡಿಸುವಂತೆ ಮನವಿ ಸಲ್ಲಿಸಿ ಸುಸ್ತಾದ ಗ್ರಾಮಸ್ಥರು

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಸಾಸಲುಕುಂಟೆ ಗ್ರಾಮದ ರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆ ಸರಿಪಡಿಸುವಂತೆ ಮನವಿ ಸಲ್ಲಿಸಿ ಗ್ರಾಮಸ್ಥರು ಸುಸ್ತಾಗಿದ್ದಾರೆ. ಸಾಸಲುಕುಂಟೆ ಗ್ರಾಮದಿಂದ ಪೆನ್ನೋಬನಹಳ್ಳಿ, ಲಿಂಗದಹಳ್ಳಿಗೆ ಹೋಗುವ ಮುಖ್ಯ ರಸ್ತೆಯ ಸಂಪೂರ್ಣ ಹದಗೆಟ್ಟಿದ್ದು, ಸುಮಾರು 30 ವರ್ಷಗಳಿಂದ ಡಾಂಬರನ್ನೇ ನೋಡದ ರಸ್ತೆ ಇದಾಗಿದೆ. ಡಾಂಬರು ಹಾಕಿಸುವಂತೆ ಜನಪ್ರತಿನಿಧಿಗಳಿಗೆ ಗ್ರಾಮಸ್ಥರು ಮನವಿ ಮಾಡುತ್ತಲೇ ಬಂದಿದ್ದಾರೆ. ಹೀಗಾಗಿ ವಿಧಿ ಇಲ್ಲದೆ ಗ್ರಾಮಸ್ಥರೇ ಚಂದಾ ವಸೂಲಿ‌ ಮಾಡಿ ಮಣ್ಣು ಹಾಕಿಸಿದ್ದಾರೆ.

ರಸ್ತೆ ದುರಸ್ತಿಗೆ ಹಣ ಸಂಗ್ರಹ ಮಾಡಿದ ಜನರು ಜೆಸಿಬಿ ಹಾಗೂ ಟ್ರಾಕ್ಟರ್ ಮೂಲಕ ಗುಂಡಿಗಳಿಗೆ ಮಣ್ಣು ಹಾಕಿದ್ದಾರೆ. ಗಡಿಭಾಗದಲ್ಲಿರುವ ನಮ್ಮನ್ನು ಕೇಳುವವರಿಲ್ಲ ಎನ್ನುವಂತಾಗಿದೆ. ರಸ್ತೆ ಸರಿ ಇಲ್ಲದ ಹಿನ್ನೆಲೆ ತಮ್ಮ ಗ್ರಾಮಕ್ಕೆ ನೆಂಟರೂ ಕೂಡ ಬರುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:25 am, Sat, 19 November 22

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ