AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ಹೈವೇಗೆ ಹೆಸರಿಡಲು ಸಂಸದರ ನಡುವೆ ಪೈಪೋಟಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣವಾಗಿದ್ದು, ಹೈವೆಗೆ ಹೆಸರಿಡುವ ವಿಚಾರವಾಗಿ ಮೈಸೂರು ಮಂಡ್ಯ ಸಂಸದರ ನಡುವೆ ಪೈಪೋಟಿ ಶುರುವಾಗಿದೆ.

Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​ ಹೈವೇಗೆ ಹೆಸರಿಡಲು ಸಂಸದರ ನಡುವೆ ಪೈಪೋಟಿ
ಸಂಸದರಾದ ಪ್ರತಾಪ್​ ಸಿಂಹ, ಸುಮಲತಾ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 11, 2023 | 9:31 AM

Share

ಮಂಡ್ಯ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ದಶಪಥ ಹೈವೆಗೆ ಹೆಸರಿಡುವ ವಿಚಾರವಾಗಿ ಇದೀಗ ಸಂಸದರ ನಡುವೆ ಪೈಪೋಟಿ ಶುರುವಾಗಿದೆ. ಕಾವೇರಿ ಮತ್ತು ಕೃಷ್ಣರಾಜ ಒಡೆಯರ್ ಹೆಸರಿಡಿಸಲು ಮೈಸೂರು ಮಂಡ್ಯ ಸಂಸದರ ಪೈಪೋಟಿ ನಡೆಯುತ್ತಿದೆ. ಕಾವೇರಿ ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ(Pratap Simha) ಒತ್ತಾಯ ಮಾಡುತ್ತಿದ್ದರೆ. ಇತ್ತ ನಾಲ್ವಡಿ ಹೆಸರಿಡುವಂತೆ ಮಂಡ್ಯ ಸಂಸದೆ ಸುಮಲತಾ(Sumalatha) ಸಿಎಂಗೆ ಪತ್ರ ಬರೆದಿದ್ದಾರೆ. ಇದಕ್ಕೆ ಎಂಎಲ್​ಸಿ ದಿನೇಶ್ ಗೂಳಿಗೌಡ ಸಹಮತ ನೀಡಿದ್ದಾರೆ. ಕಾವೇರಿ ಅಥವಾ ಒಡೆಯರ್​ ಯಾವ ಹೆಸರಿಡಬೇಕು ಎಂಬ ಗೊಂದಲದಲ್ಲಿ ಸಿ.ಎಂ. ಬೊಮ್ಮಾಯಿ ಇದ್ದಾರೆ.

ಇನ್ನು ಈ ವರ್ಷ ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇ ಲೋಕಾರ್ಪಣೆಯಾಗಲಿದೆ. ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ಅಥವಾ ರಾಷ್ಟ್ರಪತಿಗಳನ್ನು ಆಹ್ವಾನಿಸುತ್ತೇವೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವೆಡೆ ಇನ್ನೂ ಕೆಲಸಗಳು ಬಾಕಿ ಉಳಿದಿವೆ.

ಇದನ್ನೂ ಓದಿ:Bengaluru-Mysuru Expressway ಫೆಬ್ರವರಿ ಅಂತ್ಯಕ್ಕೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇ ಉದ್ಘಾಟನೆ: ಗಡ್ಕರಿ ಘೋಷಣೆ

4,473 ಕೋಟಿ ರೂ. ವೆಚ್ಚದಲ್ಲಿ ಒಟ್ಟು 118 ಕಿ.ಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಮೊದಲ ಹಂತದ ಕಾಮಗಾರಿಯು ಬೆಂಗಳೂರಿನ ಪಂಚಮುಖಿ ಆಂಜನೇಯ ದೇವಾಲಯದಿಂದ ಹಿಡಿದು ನಿಡಘಟ್ಟದವರೆಗೆ ಹಾಗೂ ನಿಡಘಟ್ಟದಿಂದ ಮೈಸೂರಿನವರೆಗೂ ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ. ಕೆಂಗೇರಿಯಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ವೇ ಪ್ರಸ್ತುತ 3.5 ಗಂಟೆಗಳ ಪ್ರಯಾಣವನ್ನು ಕೇವಲ 1.5 ಗಂಟೆಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ