AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬಿಜೆಪಿ ಸರ್ವನಾಶ ಮಾಡಿದೆ: ರಾಹುಲ್​ ಗಾಂಧಿ

ಬಿಜೆಪಿಯವರು 2 ಇಂಡಿಯಾ ನಿರ್ಮಾಣ ಮಾಡುತ್ತಿದ್ದಾರೆ. ಒಂದು ಶ್ರೀಮಂತರ ಇಂಡಿಯಾ ಮತ್ತೊಂದು ಇನ್ನೊಂದು ಕೋಟ್ಯಂತರ ಬಡವರ ಬಡ ಇಂಡಿಯಾ ಎಂದು ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

Bharat Jodo Yatra: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬಿಜೆಪಿ ಸರ್ವನಾಶ ಮಾಡಿದೆ: ರಾಹುಲ್​ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: |

Updated on: Oct 07, 2022 | 8:17 PM

Share

ಮಂಡ್ಯ: ಬಿಜೆಪಿಯವರು 2 ಇಂಡಿಯಾ ನಿರ್ಮಾಣ ಮಾಡುತ್ತಿದ್ದಾರೆ. ಒಂದು ಶ್ರೀಮಂತರ ಇಂಡಿಯಾ ಮತ್ತೊಂದು ಇನ್ನೊಂದು ಕೋಟ್ಯಂತರ ಬಡವರ ಬಡ ಇಂಡಿಯಾ ಎಂದು ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ (Rahul Gandhi) ಬಿಜೆಪಿ (BJP) ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಾಗಮಂಗಲ ತಾಲೂಕಿನ ಬೆಳ್ಳೂರು ನಿಲ್ದಾಣ ಬೆಳ್ಳೂರು ಬಸ್ ನಿಲ್ದಾಣದಲ್ಲಿ ಭಾರತ್​ ಜೋಡೋ ಸಮಾವೇಶದಲ್ಲಿ (Bharat Jodo Yatra) ಮಾತನಾಡಿದ ಅವರು ನಾವು ಎರಡು ಇಂಡಿಯಾ ಒಪ್ಪಿಕೊಳ್ಳುವುದಿಲ್ಲ. ಬಿಜೆಪಿ ಮಾಡಲು ಹೊರಟಿರುವ ದ್ವೇಷದ ಇಂಡಿಯಾ ಒಪ್ಪಿಕೊಳ್ಳಲ್ಲ. ಜನರ ಜೇಬಿನಿಂದ ಹಣ ವಿಶ್ವದ 2ನೇ ಶ್ರೀಮಂತ ವ್ಯಕ್ತಿಗೆ ಹೋಗುತ್ತಿದೆ ಎಂದು ಹೇಳಿದರು.

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ನಮ್ಮ ಭಾರತದಲ್ಲಿದ್ದಾರೆ. ಜನರ ಪಾಕೆಟ್‌ನ ದುಡ್ಡು ಅವರನ್ನು ಶ್ರೀಮಂತರನ್ನಾಗಿಸುತ್ತಿದೆ. ರಾಕೆಟ್‌ ವೇಗದಲ್ಲಿ ಶ್ರೀಮಂತರನ್ನಾಗಿ ಮಾಡಿದೆ. ಅವರಿಗೆ ಏರ್‌ಪೋರ್ಟ್‌, ಬಂದರು ಬೇಕು, ಕೃಷಿ, ಕೈಗಾರಿಕೆ ಬೇಕು. ಆದರೆ ನಿಮ್ಮ ಮಕ್ಕಳು ಮಾತ್ರ ನಿರುದ್ಯೋಗಿಗಳಾಗುತ್ತಿದ್ದಾರೆ ನಿಮ್ಮ ಮಕ್ಕಳನ್ನು ನೀವು ಒಳ್ಳೇ ಶಾಲಾ, ಕಾಲೇಜಿಗೆ ಕಳಿಸಲೂ ಕಷ್ಟ ಪಡಬೇಕು. ಪದವಿ ಸರ್ಟಿಫಿಕೆಟ್‌ ಯಾವುದೇ ಕೆಲಸಕ್ಕೆ ಬರಲ್ಲ. ಅವರಿಗೆ ಕರ್ನಾಟಕದಲ್ಲಿ ಅಥವಾ ಭಾರತದಲ್ಲಿ ಉದ್ಯೋಗ ಸಿಗುವುದಿಲ್ಲ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಬಿಜೆಪಿ ಸರ್ವನಾಶ ಮಾಡಿದೆ ಎಂದು ಕಿಡಿಕಾರಿದರು.

ಸಮಾವೇಶ ಬಳಿಕ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ‘ಕೈ’ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಕಾಲಭೈರವೇಶ್ವರನ ದರ್ಶನ ಪಡೆದರು. ರಾಹುಲ್​ ಗಾಂಧಿಗೆ ಮಂಗಳ ವಾದ್ಯದ ಜೊತೆ ರಾಹುಲ್ ಗಾಂಧಿ​ಗೆ ಪೂರ್ಣಕುಂಭ ಮೂಲಕ ಮಠಕ್ಕೆ ಸ್ವಾಗತ ಮಾಡಿಕೊಂಡರು. ಶ್ರೀಮಠದ ಕಾರ್ಯದರ್ಶಿಯಾಗಿರುವ ಪ್ರಸನ್ನನಾಥ ಸ್ವಾಮೀಜಿ ರಾಹುಲ್​ ಗಾಂಧಿಗೆ ಹಾರ ಹಾಕಿ ಬರಮಾಡಿಕೊಂಡರು. ಬಳಿಕ ರಾಹುಲ್​ ಗಾಂಧಿ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾದರು.

ಶ್ರೀಗಳ ಆಶೀರ್ವಾದ ಪಡೆದ ನಂತರ ರಾಹಲ್​ ಮಠದ ಮಕ್ಕಳ ಜತೆ ಭಜನೆ ಮಾಡಿದರು. ಭಜನೆ ನಂತರ ಇಂದಿನ ಭಾರತ್​ ಜೋಡೋ ಪಾದಯಾತ್ರೆ ಅಂತ್ಯ ಮಾಡಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ, ರಣದೀಪ್ ಸುರ್ಜೇವಾಲ, ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?