AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಯುವತಿ ಜೊತೆ ರೆಡ್​ ಹ್ಯಾಂಡಾಗಿ ಸಿಕ್ಕಿ ಬಿದ್ರಾ ಜಗನ್ನಾಥ್ ಶೆಟ್ಟಿ..?

ಮೈಸೂರಿನ ದರ್ಶನ್ ಲಾಡ್ಜ್​​ಗೆ ಏಕಾಏಕಿ ಸಲ್ಮಾ ಗ್ಯಾಂಗ್ ನುಗ್ಗಿದ್ದು, ಯುವತಿ ಜೊತೆ ರೆಡ್​ ಹ್ಯಾಂಡಾಗಿ ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗುತ್ತಿದೆ.

ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಯುವತಿ ಜೊತೆ ರೆಡ್​ ಹ್ಯಾಂಡಾಗಿ ಸಿಕ್ಕಿ ಬಿದ್ರಾ ಜಗನ್ನಾಥ್ ಶೆಟ್ಟಿ..?
ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ
TV9 Web
| Edited By: |

Updated on:Sep 08, 2022 | 10:06 AM

Share

ಮಂಡ್ಯ: ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, FIRನಲ್ಲಿ ಉಲ್ಲೇಖಿಸಿದ ಅಂಶವೇ ಬೇರೆ ಅಸಲಿಗೆ ನಡೆದಿದ್ದೆ ಬೇರೆ. ಟಿವಿ9ಗೆ ಕೃತ್ಯ ನಡೆದ ದಿನದ ಎಕ್ಸ್​​ಕ್ಲೂಸಿವ್ ವಿಡಿಯೋ ಸಿಕ್ಕಿದೆ. ಮೈಸೂರಿನ ದರ್ಶನ್ ಲಾಡ್ಜ್​​ಗೆ ಏಕಾಏಕಿ ಸಲ್ಮಾ ಗ್ಯಾಂಗ್ ನುಗ್ಗಿದ್ದು, ಯುವತಿ ಜೊತೆ ರೆಡ್​ ಹ್ಯಾಂಡಾಗಿ ಚಿನ್ನದ ವ್ಯಾಪಾರಿ ಕಂ ಬಿಜೆಪಿ ಮುಖಂಡ ಜಗನ್ನಾಥ್ ಶೆಟ್ಟಿ ಸಿಕ್ಕಿಬಿದ್ದಿದ್ದಾರೆ. ಕಾಲೇಜ್ ಲೆಕ್ಚರರ್ ಎಂದು ಲಾಡ್ಜ್​​ನಲ್ಲಿದ್ದು, ಯುವತಿ ಜೊತೆ ಜಗನ್ನಾಥ ಇರುವ ವಿಚಾರ ತಿಳಿದು ಅಲರ್ಟ್ ಆದ ಸಲ್ಮಾ ಗ್ಯಾಂಗ್​​ ತಕ್ಷಣ ಮೈಸೂರಿನ ದರ್ಶನ್ ಲಾಡ್ಜ್​ಗೆ ನುಗ್ಗಿದ್ದಾರೆ. ಒಳ ನುಗ್ಗುತ್ತಿದ್ದಂತೆ ಗ್ಯಾಂಗ್ ವಿಡಿಯೋ ಚಿತ್ರೀಕರಣ ಮಾಡಿದ್ದು, ಯುವತಿ, ಜಗನ್ನಾಥ ಶೆಟ್ಟಿಗೆ ಮನಬಂದಂತೆ ಥಳಿಸಿದ್ದಾರೆ. ಸದ್ಯ ಜಗನ್ನಾಥ ಶೆಟ್ಟಿ ನಡೆ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಮೂವರು ಆರೋಪಿಗಳನ್ನು ಪೊಲೀಸರು ಜೈಲಿಗಟ್ಟಿದ್ದು, ಮಂಡ್ಯ ಪಶ್ಚಿಮ ವಿಭಾಗ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಹಿಂದೆ ನಡೆದ ಪ್ರಕರಣ ಹಿನ್ನೆಲೆ

ಆರ್​ಎಸ್​ಎಸ್​, ಬಿಜೆಪಿ ಮುಖಂಡ ಹನಿಟ್ರ್ಯಾಪ್​​ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಲಾಗಿದೆ. ಈ ಸಂಬಂಧ ಮಂಡ್ಯದ (Mandya) ಪಶ್ಚಿಮ ಪೊಲೀಸ್ ಠಾಣೆಗೆ ಪ್ರತಿಷ್ಠಿತ ಚಿನ್ನದ ವ್ಯಾಪಾರಿ ಜಗನ್ನಾಥ ಶೆಟ್ಟಿ ನಿನ್ನೆ ದೂರು ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಶೆಟ್ಟಿ, ಮಂಡ್ಯದ ಶ್ರೀನಿಧಿ ಗೋಲ್ಡ್​ ಮಾಲೀಕರಾಗಿದ್ದಾರೆ.

ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್​ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್​ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ನಂತರ ಚಿನ್ನದ ಪರೀಕ್ಷೆಗೆಂದು ಅಪಹರಿಸಿದ್ದಾರೆ. ಜಗನ್ನಾಥ ಶೆಟ್ಟಿ ಅವರನ್ನು ಅಪಹರಿಸಿ ಲಾಡ್ಜ್​ ರೂಮ್​ಗೆ ಕರೆದುಕೊಂಡು ಹೋಗಿದ್ದಾರೆ. ರೂಮ್​ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು 4 ಕೋಟಿ ರೂ. ಬೇಡಿಕೆ ಇಟ್ಟಿದ್ದಾರೆ. ಅಂತಿಮವಾಗಿ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದಾರೆ. ಇಷ್ಟಕ್ಕೆ ಸುಮ್ಮನಾದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಇದರಿಂದ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಭಾನು ಎಂಬುವರನ್ನು ಪಶ್ಚಿಮ ಠಾಣೆ ಪೊಲೀಸರು ಬಂಧಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:48 am, Thu, 8 September 22

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ