AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಶೋಭಾ ಕರಂದ್ಲಾಜೆ ನಾಟಿ ಮಾಡಿದ್ದ ಭತ್ತವನ್ನ ಕೂಯ್ಲು ಮಾಡಿದ ಬಿಜೆಪಿ ಕಾರ್ಯಕರ್ತರು

ಅಂದು ನಾಟಿ ಮಾಡಿದ್ದ ಭತ್ತವನ್ನ ಬಿಜೆಪಿ ಕಾರ್ಯಕರ್ತರು ಇಂದು ಕೂಯ್ಲು ಮಾಡಿದ್ದಾರೆ. ಆಗಸ್ಟ್ 16 ರಂದು ಕೊಮ್ಮೇರಹಳ್ಳಿ ಗ್ರಾಮದ ಜಮೀನೊಂದರಲ್ಲಿ ರೈತ ಮಹಿಳೆಯರ ಜೊತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾಟಿ ಮಾಡಿದ್ದರು.

ಮಂಡ್ಯದಲ್ಲಿ ಶೋಭಾ ಕರಂದ್ಲಾಜೆ ನಾಟಿ ಮಾಡಿದ್ದ ಭತ್ತವನ್ನ ಕೂಯ್ಲು ಮಾಡಿದ ಬಿಜೆಪಿ ಕಾರ್ಯಕರ್ತರು
ಗದ್ದೆಯಲ್ಲಿ ಬ್ಯಾನರ್ ಹಾಕಿದ್ದಾರೆ
TV9 Web
| Updated By: sandhya thejappa|

Updated on:Dec 26, 2021 | 1:20 PM

Share

ಮಂಡ್ಯ: ಜನಾಶೀರ್ವಾದ ಯಾತ್ರೆ ವೇಳೆ ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾಟಿ ಮಾಡಿದ್ದರು. ಅಂದು ನಾಟಿ ಮಾಡಿದ್ದ ಭತ್ತವನ್ನ ಬಿಜೆಪಿ ಕಾರ್ಯಕರ್ತರು ಇಂದು ಕೂಯ್ಲು ಮಾಡಿದ್ದಾರೆ. ಆಗಸ್ಟ್ 16 ರಂದು ಕೊಮ್ಮೇರಹಳ್ಳಿ ಗ್ರಾಮದ ಜಮೀನೊಂದರಲ್ಲಿ ರೈತ ಮಹಿಳೆಯರ ಜೊತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾಟಿ ಮಾಡಿದ್ದರು. ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ನಾಗಣ್ಣಗೌಡ ನೇತೃತ್ವದಲ್ಲಿ ಇಂದು ಬಿಜೆಪಿ ಕಾರ್ಯಕರ್ತರು ಭತ್ತ ಕೂಯ್ಲು ಮಾಡಿದ್ದಾರೆ.

ಇನ್ನು ಗದ್ದೆಯಲ್ಲಿ ‘ಶೋಭಾ ಕರಂದ್ಲಾಜೆ ನೆಟ್ಟಿದ್ದ ಭತ್ತದ ಕೂಯ್ಲು ಕಾರ್ಯಕ್ರಮ’ ನಡೆಯಲಿದೆ ಅಂತ ಬ್ಯಾನರ್ ಹಾಕಿದ್ದಾರೆ. ಬ್ಯಾನರ್​ನಲ್ಲಿ ಬೆಳಿಗ್ಗೆ 9 ಗಂಟೆಯಿಂದ ಕೊಯ್ಲು ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 16ಕ್ಕೆ ಭೇಟಿ ನೀಡಿದ್ದ ಶೋಭಾ ಕರಂದ್ಲಾಜೆ ಟ್ರ್ಯಾಕ್ಟರ್ ಚಾಲನೆ ಮಾಡಿ, ನಾಟಿ ಯಂತ್ರದ ಮೂಲಕ ನಾಟಿ ಮಾಡಿದ್ದರು. ಕೆಸರು ಗದ್ದೆಯಲ್ಲಿ ಮಹಿಳೆಯರೊಂದಿಗೆ ಸೇರಿ ಗದ್ದೆ ಕೆಲಸದಲ್ಲಿ ಭಾಗಿಯಾಗಿದ್ದರು. ಮಂತ್ರಿ ಜವಾಬ್ದಾರಿ ಬಳಿಕ ಮೊದಲು ಮಂಡ್ಯಕ್ಕೆ ಬಂದಿದ್ದೇನೆ. ಪ.ಜಾ, ಪ.ಪಂ ಮಹಿಳೆಯರು ಸೇರಿದಂತೆ ಎಲ್ಲಾ ಜಾತಿ, ವರ್ಗಗಳಿಗೆ ಸಚಿವ ಸ್ಥಾನ ನೀಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವುದು ಪ್ರಧಾನಿಗಳ ಆಶಯ ಅಂತ ಶೋಭಾ ಹೇಳಿದ್ದರು.

ಚಿಕ್ಕ-ಚಿಕ್ಕ ರೈತರನ್ನ ಒಟ್ಟಗೂಡಿಸಿ ಕೃಷಿಗೆ ಉತ್ತೇಜನ ನೀಡಬೇಕು. ಕೃಷಿ ಮೂಲಭೂತ ಸೌಕರ್ಯ ನಿಧಿಯಲ್ಲಿ 1 ಲಕ್ಷ ಕೋಟಿ ಮೀಸಲಿಡಲಾಗಿದೆ. ಸಬ್ಸಿಡಿ, ಸಾಲ, ಕೃಷಿ ಉತ್ಪನ್ನಗಳನ್ನ ಒದಗಿಸಿ ಕೃಷಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಆತ್ಮನಿರ್ಭರ ಯೋಜನೆಯಡಿ ಸಾವಯವ ಬೆಲ್ಲ ಹೆಚ್ಚು ರಫ್ತಾಗಬೇಕು ಅಂತ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದಾಗ ಅಭಿಪ್ರಾಯಪಟ್ಟಿದ್ದರು.

ಬಿಜೆಪಿ ಕಾರ್ಯಕರ್ತರಿಂದ ಭತ್ತ ಕೂಯ್ಲು

ಇದನ್ನೂ ಓದಿ

ಮೈಸೂರಿನ ಕಾರು ಶೋ ರೂಮ್​ನಲ್ಲಿ ಅಗ್ನಿ ಅವಘಡ! ಕಾರುಗಳು ಸುಟ್ಟು ಭಸ್ಮ

ರಾತ್ರೋರಾತ್ರಿ ಬೃಹತ್ ಮರಗಳು ಮಂಗಮಾಯ; ಕಡಿದ ಮರಕ್ಕೆ ಶ್ರದ್ಧಾಂಜಲಿ, ತಪ್ಪಿತಸ್ಥರ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ

Published On - 1:13 pm, Sun, 26 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ