AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಪ್ರದೀಪ್ ಈಶ್ವರ್​​​ಗೆ ಮಾನಸಿಕ ತಪಾಸಣೆ ಮಾಡಿಸಿ, ಚುನಾವಣಾ ಆಯೋಗಕ್ಕೆ ಮನವಿ

ದಾವಣಗೆರೆಯಲ್ಲಿ ಬಿಜೆಪಿ ವಿರುದ್ಧ ಅಸಂವಿಧಾನಿಕ ಹೇಳಿಕೆ ನೀಡಿದ ಆರೋಪದ ಮೇಲೆ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿ, ಪ್ರದೀಪ್ ಈಶ್ವರ್ ಅವರನ್ನು NIMHANS ಆಸ್ಪತ್ರೆಗೆ ಸೇರಿಸಿ ಮಾನಸಿಕ ಆರೋಗ್ಯ ತಪಾಸಣೆ ನಡೆಸಬೇಕು ಮತ್ತು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು ಎಂದು ವಿಲಕ್ಷಣ ಬೇಡಿಕೆ ಇಟ್ಟಿದ್ದಾರೆ.

ಶಾಸಕ ಪ್ರದೀಪ್ ಈಶ್ವರ್​​​ಗೆ ಮಾನಸಿಕ ತಪಾಸಣೆ ಮಾಡಿಸಿ, ಚುನಾವಣಾ ಆಯೋಗಕ್ಕೆ ಮನವಿ
ಪ್ರದೀಪ್ ಈಶ್ವರ್ , ಬಿಜೆಪಿ ಪ್ರತಿಭಟನೆImage Credit source: Tv9 kannada
ದಿಲೀಪ್​, ಚೌಡಹಳ್ಳಿ
| Edited By: |

Updated on:Mar 25, 2026 | 3:17 PM

Share

ಮಂಡ್ಯ, ಮಾ.25: ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ವಿರುದ್ಧ ಅಸಂವಿಧಾನಿಕ ಪದಬಳಕೆ ಹಾಗೂ ಲಘುವಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಶಾಸಕ ಪ್ರದೀಪ್ ಈಶ್ವರ್ ಅವರ ಹೇಳಿಕೆಗಳು ಸಂಸ್ಕಾರಯುತವಾಗಿಲ್ಲ. ಆದ್ದರಿಂದ ಅವರನ್ನು ತಕ್ಷಣವೇ ನಿಮಾನ್ಸ್ (NIMHANS) ಆಸ್ಪತ್ರೆಗೆ ಸೇರಿಸಿ ಮಾನಸಿಕ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮಾನಸಿಕವಾಗಿ ಸದೃಢರಾಗಿದ್ದಾರೆ ಎಂಬ ಪ್ರಮಾಣಪತ್ರ ತರುವವರೆಗೆ ಅವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಬೇಕು ಎಂಬ ವಿಲಕ್ಷಣ ಬೇಡಿಕೆಯನ್ನು ಇಡಲಾಗಿದೆ.

ಇದನ್ನೂ ಓದಿ: ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ, ಕಾಮಗಾರಿ ಸ್ಥಗಿತಗೊಳಿಸಲು ಕಾರಣವೇನು?

ಇಲ್ಲಿದೆ ನೋಡಿ ವಿಡಿಯೋ:

ಬಹಿರಂಗ ಸಭೆಗಳಲ್ಲಿ ಭಾಗವಹಿಸಿ ಶಾಂತಿ ಕದಡುತ್ತಿದ್ದಾರೆ ಎಂಬ ಕಾರಣ ನೀಡಿ, ಅವರನ್ನು ದಾವಣಗೆರೆ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಶಾಸಕರಿಗೆ ಬಹುವಚನ ಬಳಕೆ ಮತ್ತು ಸಂವಿಧಾನಿಕ ಪದಗಳ ಬಗ್ಗೆ ಪಾಠ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Wed, 25 March 26

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್