AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೂಲ್ಸ್ ಮಾಡಿದವರಿಂದಲೇ ರೂಲ್ಸ್ ಬ್ರೇಕ್! ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಬೃಹತ್ ಸಭೆ

ಕೊರೊನಾ ಕಾರಣ ರಾಜ್ಯ ಸರ್ಕಾರ ಕೆಲ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ನಿಯಮಗಳನ್ನು ಜಾರಿಗೆ ತಂದವರೇ ಇಲ್ಲಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಕೊವಿಡ್ ನಿಯಮ ಉಲ್ಲಂಘಿಸಿ ಬೃಹತ್ ಜಾಥಾ ನಡೆಸಿದ್ದಾರೆ.

ರೂಲ್ಸ್ ಮಾಡಿದವರಿಂದಲೇ ರೂಲ್ಸ್ ಬ್ರೇಕ್! ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಬೃಹತ್ ಸಭೆ
ಬೃಹತ್ ಸಭೆ ನಡೆಸುತ್ತಿರುವ ಬಿಜೆಪಿ ನಾಯಕರು
TV9 Web
| Edited By: |

Updated on:Aug 25, 2021 | 1:05 PM

Share

ಮಂಡ್ಯ: ಕೊರೊನಾ (Coronavirus) ಮೂರನೇ ಅಲೆ ಭೀತಿ ಹಿನ್ನೆಲೆ ಜಿಲ್ಲೆಯಲ್ಲಿ ರಾಜಕೀಯ ಸಭೆ, ಸಮಾರಂಭಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಮಂಡ್ಯದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯುತ್ತಿದೆ. ನಗರದ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆಯುತ್ತಿದೆ. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಾರ್ಯಕರ್ತರು ಜಮಾವಣೆ ಆಗಿದ್ದಾರೆ. ದೈಹಿಕ ಅಂತರ ಮರೆತು ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಕೊವಿಡ್ ರೂಲ್ಸ್ ಉಲ್ಲಂಘಿಸಿದಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್​ಕುಮಾರ್​ಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿದೆ. ಆದರೆ ಬಿಜೆಪಿ ನಾಯಕರು ನೊಟೀಸ್​ಗೆ ಕ್ಯಾರೆ ಎನ್ನುತ್ತಿಲ್ಲ.

ಕೊರೊನಾ ಕಾರಣ ರಾಜ್ಯ ಸರ್ಕಾರ ಕೆಲ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ನಿಯಮಗಳನ್ನು ಜಾರಿಗೆ ತಂದವರೇ ಇಲ್ಲಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಕೊವಿಡ್ ನಿಯಮ ಉಲ್ಲಂಘಿಸಿ ಬೃಹತ್ ಜಾಥಾ ನಡೆಸಿದ್ದಾರೆ. ತೆರೆದ ಜೀಪಿನಲ್ಲಿ ಬಿಜೆಪಿ ನಾಯಕರು ಮೆರವಣಿಗೆಗೆ ನಡೆಸುತ್ತಿದ್ದಾರೆ. ನೂರಾರು ಕಾರ್ಯಕರ್ತರು ಬೈಕ್ ರ್ಯಾಲಿ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದಾರೆ.

ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಬಿಜೆಪಿ ನಾಯಕರು ಬೃಹತ್ ಸಭೆ ನಡೆಸಲು ಆಯೋಜನೆ ಮಾಡಿದ್ದಾರೆ. 30ಕ್ಕೂ ಹೆಚ್ಚು ಜನ ಸೇರುವ ಸಭೆ ಸಮಾರಂಭವನ್ನು ಮಂಡ್ಯ ಜಿಲ್ಲಾಡಳಿತ ನಿರ್ಬಂಧಿಸಿದೆ. ಆದರೆ ಜಿಲ್ಲಾಧಿಕಾರಿ ಆದೇಶಕ್ಕೆ ಕ್ಯಾರೆ ಎನ್ನದೇ ಬಿಜೆಪಿ ನಾಯಕರು ಸಾವಿರಾರು ಕಾರ್ಯಕರ್ತರನ್ನ ಸೇರಿಸಿ ಸಭೆ ನಡೆಸುತ್ತಿದ್ದಾರೆ. ಜೀಪ್​​ನಲ್ಲಿ ಬಿಜೆಪಿ‌ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಮೆರವಣಿಗೆ ಮಾಡಿದರು. ಈ ವೇಳೆ ಸಚಿವ ಕೆ.ಸಿ.ನಾರಾಯಣಗೌಡ, ಮಾಜಿ ಸಚಿವ ಎ.ಮಂಜು ಇತರೆ ಮುಖಂಡರ ಸಾಥ್ ನೀಡಿದರು.

ಇದನ್ನೂ ಓದಿ

ಆಡಳಿತ ಪಕ್ಷ ಜೊತೆ ಮುನಿಸಿನ ಮಧ್ಯೆ ಅಳಿಯನಿಗೆ ಟ್ರಾನ್ಸ್​​ಫರ್​​ ಮಾಡಿಸಿಕೊಂಡ ಫೈರ್​ಬ್ರ್ಯಾಂಡ್​​ ಹಳ್ಳಿಹಕ್ಕಿ! ಸಿಎಂ ಬೊಮ್ಮಾಯಿಗೆ ಥ್ಯಾಂಕ್ಸ್​​ ಎಂದರು

ಮಸೀದಿ, ಚರ್ಚ್‌ಗಳಲ್ಲಿ ಪ್ರಾರ್ಥನೆಗೆ ಅವಕಾಶವಿದೆ, ನಮಗೂ ಗಣೇಶೋತ್ಸವಕ್ಕೆ ಅವಕಾಶ ಕೊಡಿ: ಸಿಎಂ ಬೊಮ್ಮಾಯಿಗೆ ಸಂಸದ ಪ್ರತಾಪ್ ಒತ್ತಾಯ

(BJP leaders are holding a meeting in violation of Corona rules in mandya)

Published On - 12:41 pm, Wed, 25 August 21