AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕ ಚುನಾವಣೆ: ಬಿಜೆಪಿ ಮಾಸ್ಟರ್ ಪ್ಲ್ಯಾನ್, ಹಳೆ ಮೈಸೂರು ಭಾಗದ ಮೇಲೆ ಕಣ್ಣು, ಪಕ್ಷ ಸಂಘಟನೆಗೆ ಮುಂದಾದ ಬಿಜೆಪಿ ನೂತನ ಸಾರಥಿ

ಒಟ್ಟಾರೆ ಲೋಕಸಭಾ ಚುನಾವಣೆಯನ್ನ ಗಮನದಲ್ಲಿ ಇಟ್ಟುಕೊಂಡು ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮುಂದಾಗಿದ್ದು, ಇದು ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೇ ಕಾದು ನೋಡಬೇಕಿದೆ.

ಲೋಕ ಚುನಾವಣೆ: ಬಿಜೆಪಿ ಮಾಸ್ಟರ್ ಪ್ಲ್ಯಾನ್, ಹಳೆ ಮೈಸೂರು ಭಾಗದ ಮೇಲೆ ಕಣ್ಣು, ಪಕ್ಷ ಸಂಘಟನೆಗೆ ಮುಂದಾದ ಬಿಜೆಪಿ ನೂತನ ಸಾರಥಿ
ಲೋಕ ಚುನಾವಣೆ: ಬಿಜೆಪಿ ಮಾಸ್ಟರ್ ಪ್ಲ್ಯಾನ್, ಹಳೆ ಮೈಸೂರು ಭಾಗದ ಮೇಲೆ ಕಣ್ಣು
ಪ್ರಶಾಂತ್​ ಬಿ.
| Edited By: |

Updated on: Nov 21, 2023 | 5:59 PM

Share

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತ್ತು. ಇದೀಗ ರಾಜ್ಯ ಬಿಜೆಪಿಗೆ (Karnataka BJP) ನೂತನ ಸಾರಥಿಯಾಗಿ ಆಯ್ಕೆಯಾಗಿರೋ ಬಿ ವೈ ವಿಜಯೇಂದ್ರ (BY Vijayendra), ಲೋಕಸಭಾ ಚುನಾವಣೆಯನ್ನ ಗಮನದಲ್ಲಿ ಇಟ್ಟುಕೊಂಡು ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದ್ದಾರೆ (Old Mysore Lok sabha constituencies). ಅದರಲ್ಲೂ ಮಂಡ್ಯದಲ್ಲಿ ಈ ಬಾರಿ ಕಮಲವನ್ನ ಅರಳಿಸಲು ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದು, ಪಕ್ಷ ಸಂಘಟನೆಗೆ ಕೂಡ ಮುಂದಾಗಿದ್ದಾರೆ.

ಹೌದು ಲೋಕಸಭಾ ಚುನಾವಣೆಯನ್ನ ಗಮನದಲ್ಲಿ ಇಟ್ಟುಕೊಂಡು ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಈಗಿನಿಂದಲೇ ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದೆ. ಅದರಲ್ಲೂ ಯಡಿಯೂರಪ್ಪ ಪುತ್ರ ಬಿ ವೈ ಬಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಫುಲ್ ಆಕ್ಟೀವ್ ಆಗಿದ್ದು, ಹಳೇ ಮೈಸೂರು ಮೇಲೆ ಕಣ್ಣಿಟ್ಟಿದ್ದಾರೆ.

ಅಂದಹಾಗೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಳೇ ಮೈಸೂರು ಭಾಗದಲ್ಲಿ ಹೀನಾಯ ಸೋಲುಕಂಡಿತ್ತು. ಅದರಲ್ಲೂ ಸಕ್ಕರೆ ನಗರಿ ಮಂಡ್ಯದಲ್ಲಿ ಏಳು ಸ್ಥಾನಗಳಲ್ಲಿ ಮೊದಲ ಬಾರಿಗೆ ಗೆದ್ದಿದ್ದ, ಕೆ ಆರ್ ಪೇಟೆ ಕ್ಷೇತ್ರದಲ್ಲೂ ಕೂಡ ಹೀನಾಯವಾಗಿ ಸೋಲಾಗಿತ್ತು. ಹೀಗಾಗಿ ಹಳೇ ಮೈಸೂರು ಭಾಗದ ಒಂದು ಜಿಲ್ಲೆಯಾದ ಮಂಡ್ಯದ ಮೇಲೆ ಕಣ್ಣಿಟ್ಟಿರುವ ವಿಜಯೇಂದ್ರ, ರಾಜ್ಯಾಧ್ಯಕ್ಷ ನಂತರ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.

ನಿನ್ನೆ ಸೋಮವಾರ ಮಂಡ್ಯ ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಹುರುಪು ನೀಡಲು ಮುಂದಾಗಿದ್ದಾರೆ. ಮಂಡ್ಯ ನಗರಕ್ಕೆ ಆಗಮಿಸಿದ್ದ ವಿಜಯೇಂದ್ರ ಮೊದಲಿಗೆ ಬೂತ್ ಅಧ್ಯಕ್ಷರ ಮನೆಗೆ ಭೇಟಿ ನೀಡಿದ್ರು. ಮಂಡ್ಯ ನಗರದ ಕಲ್ಲಹಳ್ಳಿ ನಗರದಲ್ಲಿರೋ ಶ್ರೀನಿವಾಸ್ ಭೇಟಿ ನೀಡಿ ಮಾತುಕತೆ ನಡೆಸಿದ್ರು. ಇನ್ನು ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ವಿಜಯೇಂದ್ರ ಅವರಿಗೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದ್ರು. ನಂತರ ಬಿಜೆಪಿ ಕಾರ್ಯಕರ್ತರ ಸಭೆಯನ್ನ ನಡೆಸಿ, ಕಾರ್ಯಕರ್ತರ ಜೊತೆ ನಾನಿರುತ್ತೇನೆ ಎಂದು ಭರವಸೆ ನೀಡಿದ್ರು.

Also Read: ಮಂಡ್ಯದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದ್ದೇಕೆ? ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೊಟ್ಟ ಕಾರಣ ಹೀಗಿದೆ

ಎರಡು ದಿನಗಳ ಕಾಲ ಮೈಸೂರು ಪ್ರವಾಸ ಮುಗಿಸಿ ನೇರವಾಗಿ ಮಂಡ್ಯಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಗುಡುಗಿದ್ರು. ಮೊದಲ ಬಾರಿಗೆ ಕೆ ಆರ್ ಪೇಟೆಯಲ್ಲಿ ವಿಜಯ ಪತಾಕೆ ಹಾರಿತ್ತು. ಆದರೆ ಈ ಬಾರಿ ಚುನಾವಣೆಯಲ್ಲಿ ಹಿನ್ನೆಡೆಯಾಗಿದೆ. ಈಗಾಗಲೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಹೋರಾಟ ಮಾಡುತ್ತೇವೆ. ಬಿಜೆಪಿ ಕಾರ್ಯಕರ್ತರಿಗೆ ಶಕ್ತಿ ಕೊಡುತ್ತೇನೆ ಎಂದು ಕಾರ್ಯಕರ್ತರಿಗೆ ಭರವಸೆ ನೀಡಿದರು.

ಇದೆ ವೇಳೆ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ರು. ರೈತರ ಜೊತೆ ನಿಲ್ಲುವ ಕೆಲಸವನ್ನ ಯಾವೊಬ್ಬ ಸಚಿವರೂ ಮಾಡುತ್ತಿಲ್ಲ. ಏಳು ತಾಸು ವಿದ್ಯುತ್ ಕೊಡಲು ಸಾಧ್ಯವಾಗುತ್ತಿಲ್ಲ. ಬೆಂಬಲ ಬೆಲೆ ಕೇಳಲು ರೈತರು ಹೋದರೆ ಅರೆಸ್ಟ್ ಮಾಡಿಸುತ್ತಿದ್ದಾರೆ, ರಾಜ್ಯದಲ್ಲಿ ಮಂತ್ರಿಗಳ ಗೂಂಡಾ ಗರ್ಜನೆ ನಡೆಯುತ್ತಿದೆ. ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುತ್ತೇವೆ ಎಂದು ಸವಾಲು ಹಾಕಿದ್ರು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ.

ಒಟ್ಟಾರೆ ಲೋಕಸಭಾ ಚುನಾವಣೆಯನ್ನ ಗಮನದಲ್ಲಿ ಇಟ್ಟುಕೊಂಡು ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮುಂದಾಗಿದ್ದು, ಇದು ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೇ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ