AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಯಾಗದ ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ; ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ

ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ಇಂದು ಬಿಜೆಪಿ ರೈತ ಮೋರ್ಚಾದಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಯಿತು. ವಿಶ್ವೇಶ್ವರಯ್ಯ ಪ್ರತಿಮೆಯಿಂದ ಡಿಸಿ ಕಚೇರಿವರೆಗೆ ಱಲಿ ನಡೆಯಿತು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಸರ್ಕಾರಕ್ಕೆ ಜನರ ಶಾಪ ಮಾತ್ರವಲ್ಲ, ಜಾನುವಾರುಗಳ ಶಾಪಕ್ಕೂ ಗುರಿಯಾಗಿದೆ ಎಂದರು.

ಬಿಡುಗಡೆಯಾಗದ ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ; ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ
ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮಂಡ್ಯದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ
ಪ್ರಶಾಂತ್​ ಬಿ.
| Edited By: |

Updated on: Feb 06, 2024 | 4:42 PM

Share

ಮಂಡ್ಯ, ಫೆ.6: ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಮಂಡ್ಯದಲ್ಲಿ (Mandya) ಬಿಜೆಪಿ (BJP) ರೈತ ಮೋರ್ಚಾ ಪ್ರತಿಭಟನೆ ನಡೆಸಿತು. ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಲಾಯಿತು.

ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಹಾಲು ಉತ್ಪಾದಕರಿದ ಪ್ರೋತ್ಸಾಹ ಧನ ನೀಡಿದ್ದರು. ಇದರಿಂದ 26 ಲಕ್ಷ ಗ್ರಾಮೀಣ ರೈತರಿಗೆ ಹೆಚ್ಚಿನ ಅನುಕೂಲವಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಜನರ ಶಾಪಕ್ಕೆ ಮಾತ್ರ ಗುರಿಯಾಗಿಲ್ಲ, ಬದಲಾಗಿ ಜಾನುವಾರುಗಳ ಶಾಪಕ್ಕೂ ಗುರಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂಪಾರ್ಕ್​ನಲ್ಲಿ ರೈತ ಸಂಘಟನೆಗಳ ಪ್ರತಿಭಟನೆ

ಹಾಲು ಉತ್ಪಾದಕರಿಗೆ 716 ಕೋಟಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿದೆ‌. ಇದರಿಂದ ಕರ್ನಾಟಕದಲ್ಲಿ ಪ್ರತಿನಿತ್ಯ 10 ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಮಾಣ ಕುಸಿದಿದೆ. ಈ ಕೂಡಲೇ ಪ್ರೋತ್ಸಾಹ ಧನದ ಬಾಕಿ ಹಣವನ್ನು ಬಿಡುಗಡೆ ಮಾಡಿ. ರೈತರಿಗೆ ಬಾಕಿ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.

ತರಕಾರಿಗೆ ಬೆಲೆ ನಿಗದಿಗೆ ರೈತರ ಪ್ರತಿಭಟನೆ

ಗದಗ: ತರಕಾರಿಗೆ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಗಳ‌ ಈಡೇರಿಕೆಗೆ ಒತ್ತಾಯಿಸಿ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ತರಕಾರಿಗಳನ್ನು ರಸ್ತೆಗೆ ಚೆಲ್ಲಿ ರೈತರು ಪ್ರತಿಭಟನೆ ನಡೆಸಿದರು. ತರಕಾರಿ ಬೆಲೆ ನಿಗದಿ, ತರಕಾರಿ ಸಂಗ್ರಹಕ್ಕೆ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ರೈತರು ಒತ್ತಾಯಿಸಿದ್ದಾರೆ. ಎಪಿಎಂಸಿಯಲ್ಲಿ ರೈತರಿಗೆ ಶೋಷಣೆಯಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬರಪರಿಹಾರ ಇನ್ನೂ ಬಹುತೇಕ ರೈತರಿಗೆ ಸಿಕ್ಕಿಲ್ಲ. ಕೂಡಲೇ ಸರ್ಕಾರ ಬರ ಪರಿಹಾರ ನೀಡಬೇಕು ಅಂತ ಒತ್ತಾಯಿಸಿದ ರೈತರು, ಭೀಕರ ಬರಗಾದ ಸಂದರ್ಭದಲ್ಲಿ ಬ್ಯಾಂಕ್​ಗಳು ನೋಟಿಸ್ ನೀಡಿ ಕಿರುಕುಳ ನೀಡುತ್ತಿವೆ, ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಅಲ್ಲದೆ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ