AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಯಾಗದ ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ; ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ

ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ಇಂದು ಬಿಜೆಪಿ ರೈತ ಮೋರ್ಚಾದಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಯಿತು. ವಿಶ್ವೇಶ್ವರಯ್ಯ ಪ್ರತಿಮೆಯಿಂದ ಡಿಸಿ ಕಚೇರಿವರೆಗೆ ಱಲಿ ನಡೆಯಿತು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಸರ್ಕಾರಕ್ಕೆ ಜನರ ಶಾಪ ಮಾತ್ರವಲ್ಲ, ಜಾನುವಾರುಗಳ ಶಾಪಕ್ಕೂ ಗುರಿಯಾಗಿದೆ ಎಂದರು.

ಬಿಡುಗಡೆಯಾಗದ ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ; ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ
ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮಂಡ್ಯದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ
ಪ್ರಶಾಂತ್​ ಬಿ.
| Edited By: |

Updated on: Feb 06, 2024 | 4:42 PM

Share

ಮಂಡ್ಯ, ಫೆ.6: ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ಬಿಡುಗಡೆಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಮಂಡ್ಯದಲ್ಲಿ (Mandya) ಬಿಜೆಪಿ (BJP) ರೈತ ಮೋರ್ಚಾ ಪ್ರತಿಭಟನೆ ನಡೆಸಿತು. ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಲಾಯಿತು.

ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಹಾಲು ಉತ್ಪಾದಕರಿದ ಪ್ರೋತ್ಸಾಹ ಧನ ನೀಡಿದ್ದರು. ಇದರಿಂದ 26 ಲಕ್ಷ ಗ್ರಾಮೀಣ ರೈತರಿಗೆ ಹೆಚ್ಚಿನ ಅನುಕೂಲವಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಜನರ ಶಾಪಕ್ಕೆ ಮಾತ್ರ ಗುರಿಯಾಗಿಲ್ಲ, ಬದಲಾಗಿ ಜಾನುವಾರುಗಳ ಶಾಪಕ್ಕೂ ಗುರಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂಪಾರ್ಕ್​ನಲ್ಲಿ ರೈತ ಸಂಘಟನೆಗಳ ಪ್ರತಿಭಟನೆ

ಹಾಲು ಉತ್ಪಾದಕರಿಗೆ 716 ಕೋಟಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿದೆ‌. ಇದರಿಂದ ಕರ್ನಾಟಕದಲ್ಲಿ ಪ್ರತಿನಿತ್ಯ 10 ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಮಾಣ ಕುಸಿದಿದೆ. ಈ ಕೂಡಲೇ ಪ್ರೋತ್ಸಾಹ ಧನದ ಬಾಕಿ ಹಣವನ್ನು ಬಿಡುಗಡೆ ಮಾಡಿ. ರೈತರಿಗೆ ಬಾಕಿ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.

ತರಕಾರಿಗೆ ಬೆಲೆ ನಿಗದಿಗೆ ರೈತರ ಪ್ರತಿಭಟನೆ

ಗದಗ: ತರಕಾರಿಗೆ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಗಳ‌ ಈಡೇರಿಕೆಗೆ ಒತ್ತಾಯಿಸಿ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ತರಕಾರಿಗಳನ್ನು ರಸ್ತೆಗೆ ಚೆಲ್ಲಿ ರೈತರು ಪ್ರತಿಭಟನೆ ನಡೆಸಿದರು. ತರಕಾರಿ ಬೆಲೆ ನಿಗದಿ, ತರಕಾರಿ ಸಂಗ್ರಹಕ್ಕೆ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ರೈತರು ಒತ್ತಾಯಿಸಿದ್ದಾರೆ. ಎಪಿಎಂಸಿಯಲ್ಲಿ ರೈತರಿಗೆ ಶೋಷಣೆಯಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬರಪರಿಹಾರ ಇನ್ನೂ ಬಹುತೇಕ ರೈತರಿಗೆ ಸಿಕ್ಕಿಲ್ಲ. ಕೂಡಲೇ ಸರ್ಕಾರ ಬರ ಪರಿಹಾರ ನೀಡಬೇಕು ಅಂತ ಒತ್ತಾಯಿಸಿದ ರೈತರು, ಭೀಕರ ಬರಗಾದ ಸಂದರ್ಭದಲ್ಲಿ ಬ್ಯಾಂಕ್​ಗಳು ನೋಟಿಸ್ ನೀಡಿ ಕಿರುಕುಳ ನೀಡುತ್ತಿವೆ, ರಾಜ್ಯ ಸರ್ಕಾರ ಏನು ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಅಲ್ಲದೆ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?