AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ನೀರು ಬಿಟ್ಟು ಮಂಡ್ಯಕ್ಕೆ ಆಗಮಿಸ್ತಿರುವ ಸಿಎಂ ಸಿದ್ದರಾಮಯ್ಯನವರಿಗೆ ಸ್ವಾಗತ: ಬಿಜೆಪಿ ವ್ಯಂಗ್ಯ

ಹಲವು ಕಾರ್ಯಕ್ರಮ ಹಿನ್ನೆಲೆ ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಸಿಎಂಗೆ ವ್ಯಂಗ್ಯವಾಗಿ ಮಂಡ್ಯ ಜಿಲ್ಲಾ ಬಿಜೆಪಿ ಸ್ವಾಗತ ಕೋರಿದೆ. ತಮಿಳುನಾಡಿಗೆ ನೀರು ಬಿಟ್ಟು ಮಂಡ್ಯಕ್ಕೆ ಆಗಮಿಸ್ತಿರುವ ಸಿಎಂಗೆ ಸ್ವಾಗತ. ರೈತರ ಪಂಪ್ ಸೆಟ್​​ಗಳಿಗೆ ಸರಿಯಾಗಿ ಕರೆಂಟ್ ನೀಡದೆ, ರೈತರ ಬಾಳನ್ನು ಕತ್ತಲೆ ಮಾಡಿ ಜಿಲ್ಲೆಗೆ ಆಗಮಿಸ್ತಿರುವ ಸಿಎಂಗೆ ಸ್ವಾಗತ ಎಂದು ಪೋಸ್ಟ್ ಹಾಕಿದೆ.

ತಮಿಳುನಾಡಿಗೆ ನೀರು ಬಿಟ್ಟು ಮಂಡ್ಯಕ್ಕೆ ಆಗಮಿಸ್ತಿರುವ ಸಿಎಂ ಸಿದ್ದರಾಮಯ್ಯನವರಿಗೆ ಸ್ವಾಗತ: ಬಿಜೆಪಿ ವ್ಯಂಗ್ಯ
ಸಿಎಂ ಸಿದ್ದರಾಮಯ್ಯ
TV9 Web
| Updated By: ಆಯೇಷಾ ಬಾನು|

Updated on:Oct 31, 2023 | 11:50 AM

Share

ಮಂಡ್ಯ, ಅ.31: ಮಂಡ್ಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜಿಲ್ಲಾ ಬಿಜೆಪಿ ಸಿಎಂಗೆ ವ್ಯಂಗ್ಯವಾಗಿ ಸ್ವಾಗತ ಕೋರಿದೆ. ತಮಿಳುನಾಡಿಗೆ ನೀರು ಬಿಟ್ಟು ಮಂಡ್ಯಕ್ಕೆ ಆಗಮಿಸ್ತಿರುವ ಸಿಎಂಗೆ ಸ್ವಾಗತ (Cauvery Water Dispute) . ರೈತರ ಪಂಪ್ ಸೆಟ್​​ಗಳಿಗೆ ಸರಿಯಾಗಿ ಕರೆಂಟ್ ನೀಡದೆ, ರೈತರ ಬಾಳನ್ನು ಕತ್ತಲೆ ಮಾಡಿ ಜಿಲ್ಲೆಗೆ ಆಗಮಿಸ್ತಿರುವ ಸಿಎಂಗೆ ಸ್ವಾಗತ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಡ್ಯ ಜಿಲ್ಲಾ ಬಿಜೆಪಿ ಅನೇಕ ಪೋಸ್ಟ್​ಗಳನ್ನು ಹಾಕಿ ವ್ಯಂಗ್ಯವಾಡಿದೆ.​

ರೈತರ ಪ್ರತಿಭಟನ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

ಇನ್ನು ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಇಂದು ಮಂಡ್ಯಕ್ಕೆ ಸಿಎಂ ಭೇಟಿ ಹಿನ್ನೆಲೆ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜೆಡಿಎಸ್ ಕೂಡ ಪ್ರತಿಭಟನೆ ನಡೆಸಲು ಮುಂದಾಗಿದೆ. ರೈತರ ಪ್ರತಿಭಟನೆ ನಡೆಯುವ ಸ್ಥಳದ ಮುಂಭಾಗದ ರಸ್ತೆಯ ಮೂಲಕವೇ ಸಿಎಂ ಸಿದ್ದರಾಮಯ್ಯ ಸಂಚರಿಸಲಿದ್ದಾರೆ. ಹೀಗಾಗಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಎಂಗೆ ಮುತ್ತಿಗೆ ಸೇರಿ ಇನ್ಯಾವುದೇ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಸಚಿವ ಚಲುವರಾಯಸ್ವಾಮಿ ಪತ್ನಿ ಸ್ವರ್ಧೆ? ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಧನಲಕ್ಷ್ಮೀಗೆ ಫಿಕ್ಸ್?

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಸಿಎಂ

ಸಕ್ಕರೆ ನಗರಿ ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಸಿಎಂ ಆದ ಬಳಿಕ ಎರಡನೇ ಬಾರಿಗೆ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಹಾಗೂ ಮೊದಲ ಬಾರಿಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಬಂದಿಳಿಯಲಿದ್ದು ಮೊದಲಿಗೆ ಮಂಡ್ಯದ ಕಲ್ಲಹಳ್ಳಿ ಬಳಿ ಖಾಸಗಿ ಕಲ್ಯಾಣ ಮಂಪಟದಲ್ಲಿ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ಅಂತರ ಜಿಲ್ಲಾ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಶಾಸಕರು ಸಾಥ್ ನೀಡಲಿದ್ದಾರೆ. ಇನ್ನು ಮೊದಲ ಬಾರಿಗೆ ಸಭೆ ನಡೆಸಲು ಆಗಮಿಸುತ್ತಿರೋ ಸಿಎಂಗೆ, ಕೈ ಪಡೆ ಭರ್ಜರಿ ಸ್ವಾಗತ ಕೋರಲು ಕೂಡ ಸಜ್ಜಾಗಿದೆ. ಮಂಡ್ಯದ ಫ್ಯಾಕ್ಟರಿ ಸರ್ಕಲ್ ನಿಂದ ಸಂಜಯ್ ಸರ್ಕಲ್ ವರೆಗೂ ಬೃಹತ್ ಮೆರವಣಿಗೆ ನಡೆಸಲು ಕೂಡ ಪ್ಯ್ಲಾನ್ ಮಾಡಿದೆ.

ಮಂಡ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:48 am, Tue, 31 October 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ