Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಕಾವೇರಿ ನೀರು: ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಮಳವಳ್ಳಿಯಲ್ಲಿ ರಕ್ತ ಚಳುವಳಿ

ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದ್ದು, ಅದರಂತೆ ಇಂದು ಪ್ರತಿಭಟನಾಕಾರರು ಕಾವೇರಿ ನೀರಿಗೆ ರಕ್ತ ಸುರಿಯಲು ಮುಂದಾಗಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಇದಕ್ಕೆ ಅನುಮತಿ ಇಲ್ಲ, ಪ್ರತಿಭಟನೆ ಬೇರೆ ರೀತಿಯಲ್ಲಿ ಮಾಡಿ ಎಂದು ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದ ಘಟನೆ ನಡೆದಿದೆ.

ತಮಿಳುನಾಡಿಗೆ ಕಾವೇರಿ ನೀರು: ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಮಳವಳ್ಳಿಯಲ್ಲಿ ರಕ್ತ ಚಳುವಳಿ
ಮಂಡ್ಯದಲ್ಲಿ ರಕ್ತ ಚಳುವಳಿ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 30, 2023 | 3:36 PM

ಮಂಡ್ಯ, ಸೆ.30: ತಮಿಳುನಾಡಿಗೆ ಕಾವೇರಿ ನೀರು(Cauvery) ಹರಿಸುವಂತೆ ಸುಪ್ರೀಂ ಕೋರ್ಟ್​ ಆದೇಶಕ್ಕೆ ನಿನ್ನೆ(ಸೆ.29) ರೈತಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿತ್ತು. ಇದೀಗ ಮತ್ತೆ 3 ಸಾವಿರ ಕ್ಯೂಸೆಕ್​ ನೀರು ತಮಿಳುನಾಡಿಗೆ ಬಿಡುವಂತೆ ಕಾವೇರಿ ಪ್ರಾಧಿಕಾರ ಆದೇಶ ನೀಡಿದೆ. ಈ ಹಿನ್ನೆಲೆ ಇಂದು (ಸೆ.30) ಮಳವಳ್ಳಿ(Malavalli)ಯಲ್ಲಿ ರಕ್ತ ಚಳುವಳಿ ನಡೆಸಲಾಗಿದೆ. ಹೌದು, ಬೈಕ್ ರ್ಯಾಲಿ ಮೂಲಕ ಕಾವೇರಿ ನದಿ ಬಳಿಗೆ ರಕ್ತ ತಂದ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು, ಕಾವೇರಿ ನದಿಗೆ ರಕ್ತ ಸುರಿಯಲು ಯತ್ನಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಸತ್ತೆಗಾಲ ಸೇತುವೆ ಬಳಿ ನಡೆದಿದೆ.

ರಕ್ತ ಸುರಿಯಲು ಬಿಡದೆ ತಡೆದ ಪೊಲೀಸರು

ಹೌದು, ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದ್ದು, ಅದರಂತೆ ಇಂದು ಪ್ರತಿಭಟನಾಕಾರರು ಕಾವೇರಿ ನೀರಿಗೆ ರಕ್ತ ಸುರಿಯಲು ಮುಂದಾಗಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಇದಕ್ಕೆ ಅನುಮತಿ ಇಲ್ಲ, ಪ್ರತಿಭಟನೆ ಬೇರೆ ರೀತಿಯಲ್ಲಿ ಮಾಡಿ ಎಂದು ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದರು. ಈ ವೇಳೆ ‘ ಅವರಿಗೆ TMC ಗಟ್ಟಲೇ ನೀರು ಹೋಗುತ್ತಿದ್ದು, ಕೆಆರ್​ಎಸ್ ಬರಿದಾಗುತ್ತಿದೆ. ಅದನ್ನ ಯಾರು ತಡೆಯೋರಿಲ್ಲ. ನಮ್ಮ ರಕ್ತ ಕೊಡ್ತೀವಿ ಅಂದ್ರೆ ತಡೆಯಲು ಬರ್ತೀರಾ? ಎಂದು ಪೊಲೀಸರಿಗೆ ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ. ಬಳಿಕ ರಕ್ತ ಇಲ್ಲೇ ಕೊಟ್ಟು, ನದಿ ಬಳಿ ಹೋಗಿ ಎಂದು ಖಾಕಿ ಸೂಚಿಸಿದ ಸನ್ನವೇಶ ನಡೆಯಿತು.

ಇದನ್ನೂ ಓದಿ:ಕಾವೇರಿ ವಿವಾದ: ಮತ್ತೆ ಸುಪ್ರಿಂಕೋರ್ಟ್​​​ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ​ ರಾಜ್ಯ ಸರ್ಕಾರ

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಹತ್ವ ಸಭೆ

ಇನ್ನು ಕಾವೇರಿಗಾಗಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಮಹತ್ವದ ಸಭೆ ನಡೆಯಲಿದೆ. ಹಾಲಿ & ಮಾಜಿ ಶಾಸಕರು, ಜನಪ್ರತಿನಿಧಿಗಳು, ಮುಖಂಡರಿಗೆ ಈ ಸಭೆಯಲ್ಲಿ ಆಹ್ವಾನಿಸಲಾಗಿದ್ದು, ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. ಈ ವೇಳೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲವೆಂದು ಸರ್ಕಾರ ದೃಢ ನಿರ್ಧಾರ ಕೈಗೊಳ್ಳುವಂತೆ ರೈತ ಹಿತರಕ್ಷಣಾ ಸಮಿತಿ ಆಗ್ರಹಿಸಲಿದೆ. CWMA, CWRC ರದ್ದತಿಗೆ ಸರ್ಕಾರ ಕಾನೂನು ಹೋರಾಟ ಮಾಡಬೇಕು. ಈ ವಿಚಾರಗಳ ಬಗ್ಗೆ ಇಂದಿನ ರೈತ ಹಿತರಕ್ಷಣಾ ಸಮಿತಿ ಸಭೆಯಲ್ಲಿ ನಿರ್ಧರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!