Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: ಮಳೆಗಾಗಿ ಪರಸ್ಪರ ಮದುವೆಯಾದ ಹುಡುಗರು

ಮಳೆಗಾಗಿ ಜನರು ವಿಶಿಷ್ಟ ಆಚರಣೆಗಳನ್ನು ಮಾಡುತ್ತಿದ್ದಾರೆ. ಮಳೆರಾಯ ಧರೆಗೆ ಇಳಿಯಪ್ಪ ಎಂದು ಕತ್ತೆಗಳ ಮದುವೆ, ಕಪ್ಪೆ ಮದುವೆ, ಮಣ್ಣಿನ ಗೊಂಬೆ ಮಾಡಿ ಅದನ್ನ ಮೆರವಣಿಗೆ ಮಾಡುವುದು ಹೀಗೆ ನಾನಾ ವಿದಧ ಆಚರಣೆಗಳನ್ನು ಮಾಡುತ್ತಿದ್ದಾರೆ. ಅದೇರೀತಿಯಾಗಿ ಶುಕ್ರವಾರ (ಜೂ.24) ರಂದು ಕೆಆರ್ ಪೇಟೆ ತಾಲೂಕಿನ ಗಂಗನಹಳ್ಳಿಯಲ್ಲಿ ಗ್ರಾಮದ ಹುಡುಗರು ವಿಶಿಷ್ಟ ಆಚರಣೆ ಮಾಡಿದ್ದಾರೆ

Mandya News: ಮಳೆಗಾಗಿ ಪರಸ್ಪರ ಮದುವೆಯಾದ ಹುಡುಗರು
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Jun 25, 2023 | 3:24 PM

ಮಂಡ್ಯ: ಮುಂಗಾರು (Monsoon) ವಿಳಂಬದಿಂದ ಕರ್ನಾಟಕದ (Karanataka) ಜನತೆ ಕಂಗಾಲ ಆಗಿದ್ದಾರೆ. ಈ ಋತುವಿನಲ್ಲಿ ಮುಂಗಾರು ಮಳೆಯ ಕೊರತೆಯಿಂದ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಮಳೆಗಾಗಿ (Rain) ಜನರು ವಿಶಿಷ್ಟ ಆಚರಣೆಗಳನ್ನು ಮಾಡುತ್ತಿದ್ದಾರೆ. ಮಳೆರಾಯ ಧರೆಗೆ ಇಳಿಯಪ್ಪ ಎಂದು ಕತ್ತೆಗಳ ಮದುವೆ, ಕಪ್ಪೆ ಮದುವೆ, ಮಣ್ಣಿನ ಗೊಂಬೆ ಮಾಡಿ ಅದನ್ನ ಮೆರವಣಿಗೆ ಮಾಡುವುದು ಹೀಗೆ ನಾನಾ ವಿದಧ ಆಚರಣೆಗಳನ್ನು ಮಾಡುತ್ತಿದ್ದಾರೆ. ಅದೇರೀತಿಯಾಗಿ ಶುಕ್ರವಾರ (ಜೂ.24) ರಂದು ಕೆಆರ್ ಪೇಟೆ (KR Pete) ತಾಲೂಕಿನ ಗಂಗನಹಳ್ಳಿಯಲ್ಲಿ ಗ್ರಾಮಸ್ಥರು ಇಬ್ಬರು ಗಂಡುಮಕ್ಕಳಿಗೆ ಮದುವೆ ಮಾಡಿಸಿದ್ದಾರೆ.

ಇದರಲ್ಲಿ ವಿಶೇಷ ಅಂದರೇ ಇದರಲ್ಲಿ ಒಬ್ಬ ಹುಡುಗ ವಧು ವೇಷ ಧರಿಸಿದ್ದು, ಇನ್ನೊಬ್ಬ ವರನ ವೇಷ ಧರಿಸಿ ಪರಸ್ಪರ ಮದುವೆಯಾಗಿದ್ದಾರೆ. ಮದುವೆ ಸಮಾರಂಭವನ್ನು ಸ್ಥಳೀಯ ಸಂಪ್ರದಾಯಗಳಿಗೆ ಅನುಗುಣವಾಗಿ ಮಾಡಲಾಯಿತು. ಈ ಮದುವೆಗೆ ಜನರನ್ನು ಆಹ್ವಾನಿಸಿ ರುಚಿಕರವಾದ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಂಗಾರು ಮಳೆಯ ಕೊರತೆ ಮತ್ತು ಈಗ ಮುಂಗಾರು ತಡವಾಗಿ ಆರಂಭವಾಗಿರುವುದರಿಂದ ರಾಜ್ಯದ ಎಲ್ಲ ಜಲಾಶಯಗಳಲ್ಲಿ ನೀರಿನ ಮಟ್ಟವು ಕಡಿಮೆಯಾಗಿದೆ.

ಇದನ್ನೂ ಓದಿ: Karnataka Rains: ಮುಂಗಾರು ಚುರುಕು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​

ಮಳೆಯಾಗಲೆಂದು ಹೂತಿದ್ದ ಶವಕ್ಕೆ ನೀರು ಹಾಕಿದ ಗ್ರಾಮಸ್ಥರು

ಇನ್ನು ವಿಜಯಪುರದಲ್ಲಿ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಸ್ಥರು ಮಳೆಗಾಗಿ ಹೂತಿದ್ದ ಶವಕ್ಕೆ ನೀರು ಹಾಕಿದ್ದಾರೆ. ಗ್ರಾಮದ ವಾಗೀಶ ಹಿರೇಮಠ ಅವರ ನೇತೃತ್ವದಲ್ಲಿ ಹೂತಿದ್ದ ಶವದ ಮೇಲೆ‌ ಗ್ರಾಮಸ್ಥರು ನೀರು ಹಾಕಿದ್ದಾರೆ.

ಕಳೆದ ವರ್ಷವೂ ಇದೇ ರೀತಿ ಗ್ರಾಮದಲ್ಲಿ ಹೂತಿದ್ದ ಶವದ ಮೇಲೆ ನೀರು ಹಾಕಿದ್ದರು. ಕಾಕತಾಳೀಯವೆಂಬಂತೆ ಆಗ ಸ್ವಲ್ಪ ಮಳೆಯಾಗಿತ್ತು. ಈ ಬಾರಿಯೂ ಶವದ ಮೇಲೆ ನೀರು ಹಾಕಿ ಗ್ರಾಮಸ್ಥರು ಮಳೆಗಾಗಿ ಪ್ರಾರ್ಥಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ