AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಎಫ್​ಐಆರ್ ದಾಖಲು

ಮಂಡ್ಯದ ಮಹಿಳಾ ಕಾಲೇಜು ಮತ್ತು ವೈದ್ಯಕೀಯ ಕಾಲೇಜಿನಲ್ಲಿ ಅಶ್ವತ್ಥ್ ನಾರಾಯಣ್ ಚುನಾವಣಾ ಪ್ರಚಾರ ನಡೆಸಿದ್ದು, ಸಚಿವರಿಂದಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದರಿಂದ ಅಶ್ವತ್ಥ್ ನಾರಾಯಣ್ ವಿರುದ್ಧ ಎಫ್​​ಐಆರ್​ ದಾಖಲಿಸಲಾಗಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಎಫ್​ಐಆರ್ ದಾಖಲು
ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ
TV9 Web
| Edited By: |

Updated on: May 28, 2022 | 12:26 PM

Share

ಮಂಡ್ಯ: ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮೇ 16 ರಂದು ಮಂಡ್ಯದ ಹಲವು ಕಾಲೇಜುಗಳಲ್ಲಿ ಸಚಿವ ಅಶ್ವತ್ಥ್ ನಾರಾಯಣ ಪಕ್ಷದ ಮುಖಂಡರ ಜೊತೆ ಪ್ರಚಾರ ಸಭೆ ನಡೆಸಿದ್ದರು. ಈ ಮೂಲಕ ಸಚಿವರಿಂದಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್​​ ದೂರು ನೀಡಿದ್ದರು. ಈ ಕಾರಣ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಮತ್ತು ಬಿಜೆಪಿ ಅಭ್ಯರ್ಥಿ ಎಂ.ವಿ.ರವಿಶಂಕರ್ ವಿರುದ್ಧ ಎಫ್​ಐಆರ್​​ ದಾಖಲಿಸಲಾಗಿದೆ. IPC ಸೆಕ್ಷನ್ 1860 ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1950, 1951 ಅಡಿ ಅಶ್ವತ್ಥ್ ನಾರಾಯಣ್ ವಿರುದ್ಧ ಕೇಸ್ ದಾಖಲಿಸಲಾಗಿದೆ. 1989ರ ಅಡಿ ಮಂಡ್ಯದ ಪೂರ್ವ ಠಾಣೆಯಲ್ಲಿ ನ್ಯಾಯಾಲಯದ ಆದೇಶದಂತೆ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.​

ಇದನ್ನೂ ಓದಿ: Virat Kohli: ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ ಸಂಭ್ರಮಿಸಿದ್ದು ಹೇಗೆ ನೋಡಿ

ಮಂಡ್ಯದ ಮಹಿಳಾ ಕಾಲೇಜು ಮತ್ತು ವೈದ್ಯಕೀಯ ಕಾಲೇಜಿನಲ್ಲಿ ಅಶ್ವತ್ಥ್ ನಾರಾಯಣ್ ಚುನಾವಣಾ ಪ್ರಚಾರ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಕೋರ್ಟ್​​ನಲ್ಲಿ ಖಾಸಗಿ ಮೊಕದ್ದಮೆ ದಾಖಲಾಗಿದ್ದು, FIR ದಾಖಲಿಸಿ, ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿದೆ.

ಮಂಡ್ಯ ಜಿಲ್ಲಾ ಪಂಚಾಯಿತಿಯಿಂದ ಸಚಿವ ಅಶ್ವಥ್ ನಾರಾಯಣಗೆ ನೋಟಿಸ್ ಜಾರಿ!

ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣಗೆ (Ashwath Narayan) ಮಂಡ್ಯ ಜಿಲ್ಲಾ ಪಂಚಾಯಿತಿಯಿಂದ ನೋಟಿಸ್ (Notice) ಜಾರಿಯಾಗಿದೆ. ಮೇ 16 ರಂದು ಮಂಡ್ಯ ಮಿಮ್ಸ್ ಮಹಿಳಾ ಸರ್ಕಾರಿ ಕಾಲೇಜಿಗೆ ಸಚಿವರು ಭೇಟಿ ಕೊಟ್ಟಿದ್ದರು. ಮಿಮ್ಸ್ ಸೇರಿದಂತೆ ಮಂಡ್ಯದ ಹಲವೆಡೆ ಭೇಟಿ ನೀಡಿದ್ದರು. ಈ ಕುರಿತು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಕಾಂಗ್ರೆಸ್ ನೀಡಿದ ದೂರಿನ ಅನ್ವಯ ಜಿಲ್ಲಾಡಳಿತ ವರದಿ ತರೆಸಿಕೊಂಡಿದೆ. ತಹಶೀಲ್ದಾರ್ ನೀಡಿದ ವರದಿಯಲ್ಲಿ ಮೇಲ್ನೊಟಕ್ಕೆ ನೀತಿ ಸಂಹಿತೆ ಉಲ್ಲಂಘಿಸಿರುವುದು ತಿಳಿದು ಬಂದಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಸಚಿವರಿಗೆ ನೋಟಿಸ್ ನೀಡಿ ಸ್ಪಷ್ಟನೆ ನೀಡುವಂತೆ ಜಿಲ್ಲಾ ಪಂಚಾಯಿತಿ ಕೇಳಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ