AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ 5 ದಿನಗಳ ಕಾಲ ಗಂಗಾ ಆರತಿ ಮಾದರಿಯಲ್ಲಿ ‘ಕಾವೇರಿ ಆರತಿ’: ಹೇಗಿರಲಿದೆ ಕಾರ್ಯಕ್ರಮ?

ವಾರಾಣಸಿಯ ಗಂಗಾ ಆರತಿ ಮಾದರಿಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದದಲ್ಲಿ ಇಂದಿನಿಂದ ಐದು ದಿನಗಳ ಕಾಲ ಕಾವೇರಿ ಆರತಿ ಕಾಯರ್ಕ್ರಮ ಅದ್ಧೂರಿಯಾಗಿ ನಡೆಯಲಿದೆ. ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು, ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಲಿದೆ. ಸಂಜೆ 6 ಗಂಟೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಇಂದಿನಿಂದ 5 ದಿನಗಳ ಕಾಲ ಗಂಗಾ ಆರತಿ ಮಾದರಿಯಲ್ಲಿ ‘ಕಾವೇರಿ ಆರತಿ’: ಹೇಗಿರಲಿದೆ ಕಾರ್ಯಕ್ರಮ?
ಇಂದಿನಿಂದ 5 ದಿನಗಳ ಕಾಲ ‘ಕಾವೇರಿ ಆರತಿ'
ದಿಲೀಪ್​, ಚೌಡಹಳ್ಳಿ
| Edited By: |

Updated on:Sep 26, 2025 | 12:47 PM

Share

ಮಂಡ್ಯ, ಸೆಪ್ಟೆಂಬರ್​ 26: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದ ಬೋಟಿಂಗ್​ ಪಾಯಿಂಟ್​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)​ ಅವರ ಕನಸಿನ ಕಾರ್ಯಕ್ರಮ ‘ಕಾವೇರಿ ಆರತಿ’ಗೆ ಇಂದು ಚಾಲನೆ ಸಿಗಲಿದೆ.  ವಾರಾಣಸಿಯ ಗಂಗಾ ಆರತಿಯ ಮಾದರಿಯಲ್ಲೇ 5 ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ.  ಸಂಜೆ 6 ಗಂಟೆಗೆ ಡಿಸಿಎಂ ಡಿಕೆಶಿ ಕಾವೇರಿ ಆರತಿಗೆ ಚಾಲನೆ ನೀಡಲಿದ್ದು, ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ

ತರಬೇತಿ ಪಡೆದಿರುವ ಸ್ಥಳೀಯ ಪುರೋಹಿತರಿಂದಲೇ ಕಾರ್ಯಕ್ರಮ ನಡೆಯಲಿದ್ದು, ಗಂಗಾರತಿ ಮಾದರಿಯಲ್ಲಿಯೇ ಕಾವೇರಿ ಆರತಿ ಇರಲಿದೆ. 12-13 ಜನರನ್ನೊಳಗೊಂಡ ವೈದಿಕರ ತಂಡ ಕಾರ್ಯಕ್ರಮದ ನೇತೃತ್ವ ವಹಿಸಲಿದೆ. ಇನ್ನು ರಾಜ್ಯ, ಹೊರರಾಜ್ಯ ಸೇರಿದಂತೆ ಕಾರ್ಯಕ್ರಮಕ್ಕೆ ಸುಮಾರು 8 ಸಾವಿರಕ್ಕೂ ಹೆಚ್ಚು ಜನ ಬರುವ ನಿರೀಕ್ಷೆ ಇದೆ. ಕೆಆರ್‌ಎಸ್ ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಉಚಿತ ಪ್ರವೇಶ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಜೊತೆಗೆ ಕಾರ್ಯಕ್ರಮದ ಐದೂ ದಿನಗಳ ಕಾಲ ಟೋಲ್ ಸಂಗ್ರಹದಲ್ಲೂ ಪ್ರವಾಸಿಗರಿಗೆ ವಿನಾಯಿತಿ ಇರಲಿದೆ.

ಉಚಿತ ಲಾಡು ಪ್ರಸಾದ

ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಲಾಡು ವಿತರಿಸಲು ತೀರ್ಮಾನಿಸಲಾಗಿದೆ. ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರ ನಿರ್ಧಾರದಂತೆ ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಾವೇರಿ ಆರತಿ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಪ್ರಸಾದ ರೂಪದಲ್ಲಿ ಈ ಲಾಡುಗಳನ್ನ ವಿತರಿಸಲಾಗುತ್ತೆ.

KRSಗೆ ವಿದ್ಯುತ್​ ದೀಪಾಲಂಕಾರ

ಕಾವೇರಿ ಆರತಿ ಕಾರ್ಯಕ್ರಮದ ಅಂಗವಾಗಿ ಕೆಆರ್‌ಎಸ್‌ ಬೃಂದಾವನವನ್ನು ವಿದ್ಯುದ್ದೀಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ಬಣ್ಣ ಬಣ್ಣದ ವಿದ್ಯುತ್​ ದೀಪಗಳಿಂದ KRS ಕಂಗೊಳಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.

ಗಂಗಾ ಆರತಿ ಮಾದರಿಯಲ್ಲಿ ಕೆಆರ್​ಎಸ್​​ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕನಸಿನ ಕಾರ್ಯಕ್ರಮ ಆಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಈ ವಿಚಾರವನ್ನು ಡಿಕೆ ಶಿವಕುಮಾರ್ ಪ್ರಸ್ತಾಪಿಸಿದ್ದರು. ಕುಂಭ ಮೇಳಕ್ಕೆ ಭೇಟಿ ನೀಡಿ ಬಂದ ನಂತರ ಆ ಬಗ್ಗೆ ಅಧಿಕೃತ ಘೋಷಣೆಯನ್ನೂ ಮಾಡಿದ್ದರು. ಆ ಬಳಿಕ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡುವ ಸಾಧ್ಯಾಸಾಧ್ಯತೆ ಬಗ್ಗೆ ಪರಿಶೀಲನೆಯನ್ನೂ ನಡೆಸಲಾಗಿತ್ತು. ಇದೀಗ ಅಂತಿಮವಾಗಿ ಕಾರ್ಯಕ್ರಮ ಸಾಕಾರಗೊಳ್ಳುತ್ತಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:35 am, Fri, 26 September 25

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!