AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya Bandh; ಕಾವೇರಿ ಹೋರಾಟ ತೀವ್ರ; ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​

Mandya bandh on September 23; ಬಂದ್ ಸಂಬಂಧ ಶುಕ್ರವಾರ ಮತ್ತೊಂದು ಸುತ್ತಿನ ಸಭೆ ಕರೆಯಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಬಂದ್ ರೂಪುರೇಷೆ ಬಗ್ಗೆ ಚರ್ಚೆ ನಡೆಯಲಿದೆ.

Mandya Bandh; ಕಾವೇರಿ ಹೋರಾಟ ತೀವ್ರ; ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​
ಮಂಡ್ಯದಲ್ಲಿ ರೈತರಿಂದ ಪ್ರತಿಭಟನೆ
ಪ್ರಶಾಂತ್​ ಬಿ.
| Edited By: |

Updated on: Sep 21, 2023 | 4:38 PM

Share

ಮಂಡ್ಯ, ಸೆಪ್ಟೆಂಬರ್ 21: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವಂತೆ ಸುಪ್ರೀಂ ಕೋರ್ಟ್​ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​ಗೆ (Mandya Bandh) ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದೆ. ಸುಪ್ರೀಂ ಕೋರ್ಟ್ ಆದೇಶದ ನಂತರ ಸೇರಿದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್​ ಮೂಲಕ ಪ್ರತಿಭಟನೆ ವ್ಯಕ್ತಪಡಿಸುವ ನಿರ್ಧಾರ ಕೈಗೊಂಡಿದೆ. ಬಂದ್ ಸಂಬಂಧ ಶುಕ್ರವಾರ ಮತ್ತೊಂದು ಸುತ್ತಿನ ಸಭೆ ಕರೆಯಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಬಂದ್ ರೂಪುರೇಷೆ ಬಗ್ಗೆ ಚರ್ಚೆ ನಡೆಯಲಿದೆ.

ಕೆಆರ್​​​ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರೈತರು ಪೊಲೀಸ್ ವಶಕ್ಕೆ

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭೂಮಿ ತಾಯಿ ಹೋರಾಟ ಸಮಿತಿಯಿಂದ ಕೆಆರ್​​​ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಮುತ್ತಿಗೆ ಹಾಕಲು ಬಂದಿದ್ದ ರೈತರನ್ನು ಗೇಟ್ ಬಳಿಯೇ ತಡೆದ ಪಲೀಸರು ಅವರನ್ನು ವಶಕ್ಕೆ ಪಡೆದರು. ಡ್ಯಾಂಗೆ ಮುತ್ತಿಗೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಮೊದಲೇ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಮುಖ್ಯ ಗೇಟ್ ಬಳಿ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆಯಿಂದ ಗೇಟ್ ಬಳಿಯೇ ರೈತರು ಪ್ರತಿಭಟನೆ ನಡೆಸಿದ್ದಾರೆ. ರೈತ ನಾಯಕ ನಂಜುಂಡೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ; ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ಈ ಮಧ್ಯೆ, ರೈತರ ಪ್ರತಿಭಟನೆ ತೀವ್ರಗೊಂಡಿರುವ ಕಾರಣ ಗುಪ್ತಚರ ಇಲಾಖೆಯ ಮೈಸೂರು ವಿಭಾಗದ ಎಸ್ಪಿ ಜಯಪ್ರಕಾಶ್ ಅವರು ಜಲಾಶಯಕ್ಕೆ‌ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ಜಲಾಶಯದಿಂದ ನೀರು ಹರಿಸುತ್ತಿರುವುದರಿಂದ ಹೋರಾಟ ತೀವ್ರಗೊಂಡಿದೆ. ಹೀಗಾಗಿ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಎಸ್ಪಿ ಜಯಪ್ರಕಾಶ್ ಅವರು ಜಲಾಶಯದ ನೀರಿನ ಮಟ್ಟ, ಹೊರ‌ಹರಿವು, ಒಳಹರಿವಿನ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಅದೇ ರೀತಿ ಜಲಾಶಯದಲ್ಲಿ ಸೀಪೇಜ್ ಇದೆಯಾ ಎಂಬುದರ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ನಂತರ ಹಿರಿಯ ಅಧಿಕಾರಿಗಳಿಗೆ ವರದಿ ಕಳುಹಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು