AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ; ಮಂಡ್ಯದಲ್ಲಿ ಇಂದು ಬಿಜೆಪಿ ನಾಯಕರ ಸಭೆ

ರಾಜ್ಯದಲ್ಲಿ ಕಾವೇರಿ ವಿವಾದ ಮತ್ತೆ ಭುಗಿಲೆದ್ದಿದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ. ಇದರಿಂದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಈ ಸಂಬಂಧ ಇಂದು (ಆ.19) ಬೆಳಗ್ಗೆ 10.30 ಕ್ಕೆ ಮಂಡ್ಯದಲ್ಲಿ ವಿಪಕ್ಷ ಬಿಜೆಪಿ ಸಭೆ ನಡೆಸಲಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ; ಮಂಡ್ಯದಲ್ಲಿ ಇಂದು ಬಿಜೆಪಿ ನಾಯಕರ ಸಭೆ
ಬಿಜೆಪಿ ಚಿಹ್ನೆ (ಎಡಚಿತ್ರ) ಕಾವೇರಿ ನೀರು (ಬಲಚಿತ್ರಿ)
ಕಿರಣ್​ ಹನಿಯಡ್ಕ
| Edited By: |

Updated on:Aug 19, 2023 | 7:48 AM

Share

ಮಂಡ್ಯ (ಆ.19): ರಾಜ್ಯದಲ್ಲಿ ಕಾವೇರಿ (Cauvery) ವಿವಾದ ಮತ್ತೆ ಭುಗಿಲೆದ್ದಿದೆ. ಕೆಆರ್‌ಎಸ್, ಕಬಿನಿ, ಹೇಮಾವತಿ ಜಲಾಶಯಗಳ ಮೇಲ್ಬಾಗದ ಜಲಾಯನ ಪ್ರದೇಶಗಳಲ್ಲಿ ವಾಡಿಕೆಯಷ್ಟು ಮುಂಗಾರು (Mansoon) ಮಳೆಯಾಗದೆ (Rain) ಡ್ಯಾಂಗಳೇ ಭರ್ತಿ ಆಗಿಲ್ಲ. ಆದರೂ ಕೂಡ ತಮಿಳುನಾಡಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಅಂತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ (Congress)​ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ. ಇದರಿಂದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಈ ಸಂಬಂಧ ಇಂದು (ಆ.19) ಬೆಳಗ್ಗೆ 10.30 ಕ್ಕೆ ಮಂಡ್ಯದಲ್ಲಿ ವಿಪಕ್ಷ ಬಿಜೆಪಿ ಸಭೆ ನಡೆಸಲಿದೆ.

ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಅಸ್ತ್ರ ಪ್ರಯೋಗಿಸಲು ಬಿಜೆಪಿ ಸಭೆ ಸೇರುತ್ತಿದೆ. ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ ಮತ್ತು ಮೈಸೂರು ಐದು ಜಿಲ್ಲೆಗಳ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಮಂಡ್ಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಕಾವೇರಿ ವಿಚಾರದಲ್ಲಿ ಮುಂದಿನ ಹೋರಾಟ ರೂಪಿಸುವ ವಿಚಾರವಾಗಿ ಸಭೆ ನಡೆಯಲಿದೆ.

ಇದನ್ನೂ ಓದಿ: ನೀರಿನ ಅಭಾವದ ಮಧ್ಯೆ ತಮಿಳುನಾಡಿಗೆ ನೀರು: ಕಾವೇರಿ ನಿರ್ವಹಣಾ ಪ್ರಾಧಿಕಾರ ಮೊರೆ ಹೋಗಲು ಸರ್ಕಾರ ತೀರ್ಮಾನ

ವಿಧಾನಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಬಿಜೆಪಿ ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಪಾಲ್ಗೊಳ್ಳುತ್ತಿದ್ದಾರೆ. ಸುಮಲತಾ ಅಂಬರೀಶ ಚುನಾವಣೆ ಬಳಿಕ ಬಿಜೆಪಿಯಿಂದ ಒಂದಷ್ಟು ಅಂತರ ಕಾಯ್ದುಕೊಂಡಿದ್ದರು.

ರಾಜ್ಯ ಸರ್ಕಾರ ಕೃಷ್ಣರಾಜ ಸಾಗರ ಡ್ಯಾಂನಿಂದ 12,781 ಕ್ಯೂಸೆಕ್ಸ್ ನೀರನ್ಮು ಕಾವೇರಿ ನದಿಗೆ ಬಿಡುಗಡೆ ಮಾಡಿ ಅದನ್ನು ತಮಿಳುನಾಡಿಗೆ ಹರಿಸಿತ್ತು. ಕೆಆರ್​ಎಸ್ ಜಲಾಶಯಯದ ಗರಿಷ್ಟ ಮಟ್ಟ 124.80 ಅಡಿ, ಇವತ್ತು ಅದರಲ್ಲಿ 108 ಅಡಿಗಳಷ್ಟು ಮಾತ್ರ ನೀರಿದೆ. ಪುನಃ ಮಳೆಯಾಗದಿದ್ದರೆ ರಾಜ್ಯದ ಜನತೆ ತೀವ್ರ ಸಮಸ್ಯೆ ಅನುಭವಿಸಬೇಕಾಗುತ್ತದೆ.

ಇನ್ನು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ 15 ದಿನಗಳ ಹಿಂದೆಯಷ್ಟೆ ಭರ್ತಿಯಾಗಿತ್ತು. ಜಲಾಶಯ ಭರ್ತಿಯಾದಾಗ ಮುಖ್ಯಮಂತ್ರಿಗಳು  ಬಾಗಿನ ಅರ್ಪಿಸುತ್ತಿದ್ದರು. 84 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 78.50 ಅಡಿಯಷ್ಟು ನೀರಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ 5.5 ಅಡಿಯಷ್ಟು ನೀರು ಖಾಲಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:35 am, Sat, 19 August 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?