ಕಾವೇರಿ ವಿವಾದ: 44ನೇ ದಿನಕ್ಕೆ ಕಾಲಿಟ್ಟ ಮಂಡ್ಯ ರೈತರ ಪ್ರತಿಭಟನೆ; ಅ.20ರಿಂದ ಬೃಹತ್​​ ಧರಣಿ ಚಿಂತನೆ

ಮಂಡ್ಯದಲ್ಲಿ ಕಳೆದ 44 ದಿನಗಳಿಂದ ರೈತ ಹಿತರಕ್ಷಣಾ ಸಮಿತಿ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದೆ. ಆದರೂ ಕೂಡ ಸರ್ಕಾರ ನೀರು ಬಿಡುತ್ತಿರುವುದನ್ನು ನಿಲ್ಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 20 ರಿಂದ ಬೃಹತ್​ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಕಾವೇರಿ ವಿವಾದ: 44ನೇ ದಿನಕ್ಕೆ ಕಾಲಿಟ್ಟ ಮಂಡ್ಯ ರೈತರ ಪ್ರತಿಭಟನೆ; ಅ.20ರಿಂದ ಬೃಹತ್​​ ಧರಣಿ ಚಿಂತನೆ
ರೈತರ ಪ್ರತಿಭಟನೆ
Follow us
| Updated By: ವಿವೇಕ ಬಿರಾದಾರ

Updated on:Oct 18, 2023 | 3:17 PM

ಮಂಡ್ಯ ಅ.18: ತಮಿಳುನಾಡಿಗೆ ಕಾವೇರಿ ನದಿ ನೀರು (Cauvery Water Dispute) ಹರಿಸುತ್ತಿರುವುದನ್ನು ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಕನ್ನಡಪರ ಸಂಘಟನೆಗಳು ಮತ್ತು ರೈತರು (Farmers) ಪ್ರತಿಭಟನೆ ಮಾಡುತ್ತಿದ್ದಾರೆ. ಕಳೆದ ತಿಂಗಳು ವಿವಿಧ ಸಂಘಟನೆಗಳು ಬೆಂಗಳೂರು (Bengaluru) ಮತ್ತು ಕರ್ನಾಟಕ ಬಂದ್​​ಗೆ ನಡೆಯಿತು. ಆದರೂ ತಮಿಳುನಾಡಿಗೆ ನೀರು ಹರಿಯುವುದು ಮಾತ್ರ ನಿಂತಿಲ್ಲ. ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ ಮುಂದುವರೆದಿದೆ.

ಮಂಡ್ಯದಲ್ಲಿ ಕಳೆದ 44 ದಿನಗಳಿಂದ ರೈತ ಹಿತರಕ್ಷಣಾ ಸಮಿತಿ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದೆ. ಆದರೂ ಕೂಡ ಸರ್ಕಾರ ನೀರು ಬಿಡುತ್ತಿರುವುದನ್ನು ನಿಲ್ಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 20 ರಿಂದ 30ರವರಗೆ ಬೃಹತ್ ಪ್ರತಿಭಟನೆ ನಡೆಸಲು ಸಮಿತಿ ನಿರ್ಧರಿಸಿದೆ. ಅಲ್ಲದೆ ಇಂದಿನ ಪ್ರತಿಭಟನೆ ವೇಳೆ ಸಮಿತಿ ಸದಸ್ಯರು ಸರ್ಕಾರ, ಪ್ರಾಧಿಕಾರ, ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು: ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಆಘಾತ; ಹೆಚ್​ಡಿ ಕುಮಾರಸ್ವಾಮಿ

ತಕ್ಷಣವೇ ವಿಶೇಷ ಜಂಟಿ ಅಧಿವೇಶನ ಕರೆಯಬೇಕು ಕಾವೇರಿ ಬಗ್ಗೆ ಮಾತ್ರ ಅಜೆಂಡಾ ಆಗಿರಬೇಕು. ಕಾವೇರಿ ಸಮಸ್ಯೆಗೆ ಒಂದು ಇತ್ಯರ್ಥವಾಗಲೇಬೇಕು. ನೀರಿಗೆ ಕಾಸು ಕೊಟ್ಟು ಕುಡಿಯುವ ಸಂದರ್ಭ ಶೀಘ್ರದಲ್ಲೇ ಬರುತ್ತದೆ. ನಾವು ಈಗಲಾದರೂ ಎಚ್ಚೆತುಕೊಂಡು ಕಾವೇರಿ ಉಳಿಸಿ ಎಂದು ಸರ್ಕಾರಕ್ಕೆ ರೈತ ನಾಯಕಿ ಸುನಂದಾ ಜಯರಾಂ ಆಗ್ರಹಿಸಿದರು.

ಕೇಂದ್ರ ಸಚಿವರಿಗೆ ಕರವೇ ಕಾರ್ಯಕರ್ತರಿಂದ ಮನವಿ

ಕಾವೇರಿ ವಿವಾದವನ್ನು ಬಗೆಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ್ ಗೌಡ ಇಂದು (ಅ.18) ಕೇಂದ್ರ ಸಚಿವರಾದ ಪ್ರಹ್ಲಾದ್​​​ ಜೋಶಿ, ಗಜೇಂದ್ರ ಸಿಂಗ್​​​ ಅವರಿಗೆ ಮನವಿ ಸಲ್ಲಿಸಿದರು. ಅಲ್ಲದೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಮನವಿ ಸಲ್ಲಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Wed, 18 October 23

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’