ಸೆ.23 ಮಂಡ್ಯ ಬಂದ್​​ಗೆ ಕರೆ: ಕಾನೂನು ಬಾಹಿರ ಚಟುವಟಿಕೆಗಳು ನಡೆದರೇ ಕ್ರಮ ಕೈಗೊಳ್ಳಲಾಗುವುದು: ಜಿ ಪರಮೇಶ್ವರ್​

ಪ್ರತಿಭಟನೆ ಮಾಡುವುದು ಅವರ ಹಕ್ಕು, ನಮ್ಮದು ತಕರಾರಿಲ್ಲ. ರಾಜ್ಯದ ಹಿತಾಸಕ್ತಿ ರಕ್ಷಣೆ ಮಾಡಲು ಪ್ರತಿಭಟನೆ ಮಾಡಬಹುದು. ಯಾವುದೇ ರೀತಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡುವುದಾಗಲಿ, ಕಾನೂನು ಬಾಹಿರವಾದ ಯಾವುದೇ ಚಟುವಟಿಕೆಗಳು ಮಾಡಬಾರದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್​ ಹೇಳಿದರು.

ಸೆ.23 ಮಂಡ್ಯ ಬಂದ್​​ಗೆ ಕರೆ: ಕಾನೂನು ಬಾಹಿರ ಚಟುವಟಿಕೆಗಳು ನಡೆದರೇ ಕ್ರಮ ಕೈಗೊಳ್ಳಲಾಗುವುದು: ಜಿ ಪರಮೇಶ್ವರ್​
ಜಿ ಪರಮೇಶ್ವರ್​
Edited By: ವಿವೇಕ ಬಿರಾದಾರ

Updated on: Sep 22, 2023 | 12:59 PM

ಬೆಂಗಳೂರು ಸೆ.22: ತಮಿಳುನಾಡಿಗೆ ಮತ್ತೆ ಕಾವೇರಿ ನೀರು (Cauvery) ಹರಿಸುವಂತೆ ಸುಪ್ರೀಂಕೋರ್ಟ್ (Supreme Court) ಆದೇಶ ಹೊರಡಿಸಿದ ಬೆನ್ನಲ್ಲೇ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ತೀವ್ರಗೊಂಡಿದೆ. ಮಂಡ್ಯ (Mandya) ಜಿಲ್ಲೆಯಲ್ಲಿ ರೈತರು, ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಅಲ್ಲದೇ ಶನಿವಾರ ಮಂಡ್ಯ ಬಂದ್​​ಗೆ ಕರೆ ನೀಡಿವೆ. ಈ ವಿಚಾರವಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwara)​ ಮಾತನಾಡಿ ಪ್ರತಿಭಟನೆ ಮಾಡುವುದು ಅವರ ಹಕ್ಕು, ನಮ್ಮದು ತಕರಾರಿಲ್ಲ. ರಾಜ್ಯದ ಹಿತಾಸಕ್ತಿ ರಕ್ಷಣೆ ಮಾಡಲು ಪ್ರತಿಭಟನೆ ಮಾಡಬಹುದು. ಯಾವುದೇ ರೀತಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡುವುದಾಗಲಿ, ಕಾನೂನು ಬಾಹಿರವಾದ ಯಾವುದೇ ಚಟುವಟಿಕೆಗಳು ಮಾಡಬಾರದು ಎಂದು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಆ ರೀತಿಯ ಘಟನೆಗಳು ನಡೆದರೆ ತಡೆಯಲು ಪೊಲೀಸರು ಸಿದ್ಧರಾಗಿದ್ದಾರೆ. ಈಗಾಗಲೇ ಮಂಡ್ಯ ಜಿಲ್ಲೆಯ ಹಲವೆಡೆ ಪೊಲೀಸರನ್ನು ನಿಯೋಜಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳು ಮಾಡಲ್ಲ ಎಂಬ ನಂಬಿಕೆ ಇದೆ. ಒಂದು ವೇಳೆ ಅಂತಹ ಘಟನೆ ಸಂಭವಿಸಿದರೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಂಡ್ಯದಲ್ಲಿ ಮುಂದುವರೆದ ರೈತರ  ಪ್ರತಿಭಟನೆಗಳು

ಮಂಡ್ಯ ನಗರದಲ್ಲಿ ರೈತರ ಪ್ರತಿಭಟನೆಗಳು ಮುಂದುವರೆದಿದ್ದು, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಧರಣಿ ನಡೆಸುತ್ತಿದ್ದಾರೆ. ಈ ಧರಣಿಯಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಂಸದೆ ಸುಮಲತಾ ಅಂಬರೀಶ್​​ ಪುತ್ರ, ನಟ ಅಭಿಷೇಕ್​ ಅಂಬರೀಶ್​​, ಕನ್ನಡ ಸಾಹಿತ್ಯ ಪರಿಷತ್​​ನ ಅಧ್ಯಕ್ಷ ಡಾ. ಮಹೇಶ್ ಜೋಶಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಆದೇಶ; ಮಂಡ್ಯದಲ್ಲಿ ಬುಗಿಲೆದ್ದ ಆಕ್ರೋಶ

ಈ ವೇಳೆ ಮಾತನಾಡಿದ ಡಾ. ಮಹೇಶ್ ಜೋಶಿ ಬರಿದಾಗಿರುವ ಕಾವೇರಿಗೆ ಬರದ ಶಾಸನ ಕೊಟ್ಟಿದ್ದಾರೆ. ಮಾರಣಾಂತಿಕ ತೀರ್ಪು ಕೊಟ್ಟಿದ್ದಾರೆ. ಕಾವೇರಿ ಕೊಳ್ಳದ ಡ್ಯಾಂಗಳು ಬರಿದಾಗುತ್ತಿವೆ. ಮಳೆ ಬರದಿದ್ದರೇ ಬರ ಬರಲಿದೆ. ನಮ್ಮ ರಾಜ್ಯಕ್ಕಿಂತ ತಮಿಳುನಾಡಿನಲ್ಲಿ ಅಂತರ್ಜಲ ಮಟ್ಟ ಚೆನ್ನಾಗಿ ಇದೆ. ಇಂತಹ ಪರಿಸ್ಥಿತಿ ನೀರು ಬಿಡಿ ಎನ್ನುತ್ತಿದ್ದಾರೆ. ಕರ್ನಾಟಕಕ್ಕೆ ಬಂದಿರುವ ದುಸ್ಥಿತಿ ಬೇರೆ ಯಾವ ರಾಜ್ಯಕ್ಕೂ ಇಲ್ಲ ಎಂದರು.

ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕದ ವಕೀಲರು ಸಮರ್ಪಕವಾಗಿ ವಾದ ಮಂಡನೆ ಮಾಡಿಲ್ಲ. ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮನವೊಲೀಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಬರ ಪ್ರದೇಶಕ್ಕೆ ಹೆಚ್ಚಿನ ಹಣವನ್ನು ವಿನಿಯೋಗ ಮಾಡಲಿ ಎಂದು ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us