AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಕ್ಯಾತೆ: ಇಲ್ಲೇ ನೀರಿನ ಸಮಸ್ಯೆ ಇದೆ, ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದ ಸಚಿವ ಎನ್​​ ಚಲುವರಾಯಸ್ವಾಮಿ

ಕರ್ನಾಟಕದಿಂದ ನೀರು ಹರಿಸುವಂತೆ ಮಾನಿಟರ್ ಕಮಿಟಿ ಮುಂದೆ ತಮಿಳುನಾಡು ಮನವಿ ಮಾಡಿದೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಹಾಗಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಕಾವೇರಿ ಕ್ಯಾತೆ: ಇಲ್ಲೇ ನೀರಿನ ಸಮಸ್ಯೆ ಇದೆ, ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದ ಸಚಿವ ಎನ್​​ ಚಲುವರಾಯಸ್ವಾಮಿ
ಕೃಷಿ ಖಾತೆ ಸಚಿವ ಎನ್.ಚಲುವರಾಯಸ್ವಾಮಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 16, 2023 | 2:59 PM

Share

ಮಂಡ್ಯ: ಕಾವೇರಿ ನೀರಿಗಾಗಿ ತಮಿಳುನಾಡಿನಿಂದ ಮತ್ತೆ ಕ್ಯಾತೆ ತೆಗೆಯಲಾಗಿದೆ. ಕರ್ನಾಟಕದಿಂದ ನೀರು ಹರಿಸುವಂತೆ ಮಾನಿಟರ್ ಕಮಿಟಿ ಮುಂದೆ ತಮಿಳುನಾಡು ಮನವಿ ಮಾಡಿದೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಹಾಗಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N chaluvaraya swamy) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ತಮಿಳುನಾಡು ಅರ್ಜಿ ಸಲ್ಲಿಸಿದೆ ಎಂದರು.

ನಮ್ಮಲ್ಲೇ ಬೆಳೆಗಳಿಗೂ ಸಮಸ್ಯೆಯಾಗುತ್ತಿದೆ. ನೀರಾವರಿ ಸಚಿವರ ಜತೆ ಮತ್ತು ಸಿಎಂ ಸಿದ್ದರಾಮಯ್ಯ ಅವರೊಂದಿಗಿನ ಸಭೆ ಬಳಿಕ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಕೈಲಾಗದವರು ನೆಲಡೊಂಕು ಅಂದಂತೆ ಜೆಡಿಎಸ್​​ನವರು ಮಾತಾಡುತ್ತಾರೆ: ಚಲುವರಾಯಸ್ವಾಮಿ

ಮಳೆ ಬರುತ್ತದೆ ಎಂಬ ನಂಬಿಕೆ ಇದೆ

ಮಳೆಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸಿ ಬಂದಿದ್ದೇವೆ. ಮಳೆ ಬರುತ್ತದೆ ಎಂಬ ನಂಬಿಕೆ ಇದೆ. ಈ ತಿಂಗಳ ಒಳಗೆ ಒಳ್ಳೆಯ ಮಳೆ ಬರಲಿದೆ ಎಂಬ ವರದಿ ಇದೆ. ಆಶಾದಾಯಕವಾಗಿ ಇರಬೇಕಾದ ಅನಿರ್ವಾಯತೆ ಇದೆ. ಕೆಆರ್​ಎಸ್​ನ ಒಳಹರಿವು ಕೂಡ ಕಡಿಮೆ ಆಗಿದೆ. ಸಮಸ್ಯೆಯಂತೂ ಇದೆ ಎಂದು ಹೇಳಿದರು.

ಇದನ್ನೂ ಓದಿ: Mandya: ಕುಮಾರಸ್ವಾಮಿಯವರಿಗೆ ನನ್ನ ಮೇಲೆ ಪ್ರೀತಿಯೋ, ದ್ವೇಷವೋ ಗೊತ್ತಾಗುತ್ತಿಲ್ಲ: ಎನ್ ಚಲುವರಾಯಸ್ವಾಮಿ, ಸಚಿವ

ಮಾನದಂಡಗಳ ಆಧಾರದ ಮೇಲೆ ಬರಗಾಲ ಘೋಷಣೆ

ಮಳೆಯೇ ಬರದಿದ್ದಾಗ ಬರಗಾಲ ಘೋಷಣೆ ಮಾಡುವುದು, ಮೋಡ ಬಿತ್ತನೆ ಮಾಡುವ ಬಗ್ಗೆ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ. ಕ್ಯಾಬಿನೆಟ್ ಸಬ್ ಕಮಿಟಿ ಈಗಾಗಲೇ ಒಂದು ಸಭೆ ಮಾಡಿದೆ. ಕೆಲವೊಂದು ಮಾನದಂಡದ ನಂತರ ಬರಗಾಲ ಘೋಷಣೆ ಮಾಡಲಾಗುವುದು ಎಂದರು.

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ