ಕಾವೇರಿ ಕ್ಯಾತೆ: ಇಲ್ಲೇ ನೀರಿನ ಸಮಸ್ಯೆ ಇದೆ, ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದ ಸಚಿವ ಎನ್​​ ಚಲುವರಾಯಸ್ವಾಮಿ

ಕರ್ನಾಟಕದಿಂದ ನೀರು ಹರಿಸುವಂತೆ ಮಾನಿಟರ್ ಕಮಿಟಿ ಮುಂದೆ ತಮಿಳುನಾಡು ಮನವಿ ಮಾಡಿದೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಹಾಗಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಕಾವೇರಿ ಕ್ಯಾತೆ: ಇಲ್ಲೇ ನೀರಿನ ಸಮಸ್ಯೆ ಇದೆ, ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದ ಸಚಿವ ಎನ್​​ ಚಲುವರಾಯಸ್ವಾಮಿ
ಕೃಷಿ ಖಾತೆ ಸಚಿವ ಎನ್.ಚಲುವರಾಯಸ್ವಾಮಿ
Edited By:

Updated on: Jul 16, 2023 | 2:59 PM

ಮಂಡ್ಯ: ಕಾವೇರಿ ನೀರಿಗಾಗಿ ತಮಿಳುನಾಡಿನಿಂದ ಮತ್ತೆ ಕ್ಯಾತೆ ತೆಗೆಯಲಾಗಿದೆ. ಕರ್ನಾಟಕದಿಂದ ನೀರು ಹರಿಸುವಂತೆ ಮಾನಿಟರ್ ಕಮಿಟಿ ಮುಂದೆ ತಮಿಳುನಾಡು ಮನವಿ ಮಾಡಿದೆ. ಆದರೆ ಇಲ್ಲಿ ನೀರಿನ ಸಮಸ್ಯೆ ಇದೆ. ಹಾಗಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N chaluvaraya swamy) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ತಮಿಳುನಾಡು ಅರ್ಜಿ ಸಲ್ಲಿಸಿದೆ ಎಂದರು.

ನಮ್ಮಲ್ಲೇ ಬೆಳೆಗಳಿಗೂ ಸಮಸ್ಯೆಯಾಗುತ್ತಿದೆ. ನೀರಾವರಿ ಸಚಿವರ ಜತೆ ಮತ್ತು ಸಿಎಂ ಸಿದ್ದರಾಮಯ್ಯ ಅವರೊಂದಿಗಿನ ಸಭೆ ಬಳಿಕ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಕೈಲಾಗದವರು ನೆಲಡೊಂಕು ಅಂದಂತೆ ಜೆಡಿಎಸ್​​ನವರು ಮಾತಾಡುತ್ತಾರೆ: ಚಲುವರಾಯಸ್ವಾಮಿ

ಮಳೆ ಬರುತ್ತದೆ ಎಂಬ ನಂಬಿಕೆ ಇದೆ

ಮಳೆಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸಿ ಬಂದಿದ್ದೇವೆ. ಮಳೆ ಬರುತ್ತದೆ ಎಂಬ ನಂಬಿಕೆ ಇದೆ. ಈ ತಿಂಗಳ ಒಳಗೆ ಒಳ್ಳೆಯ ಮಳೆ ಬರಲಿದೆ ಎಂಬ ವರದಿ ಇದೆ. ಆಶಾದಾಯಕವಾಗಿ ಇರಬೇಕಾದ ಅನಿರ್ವಾಯತೆ ಇದೆ. ಕೆಆರ್​ಎಸ್​ನ ಒಳಹರಿವು ಕೂಡ ಕಡಿಮೆ ಆಗಿದೆ. ಸಮಸ್ಯೆಯಂತೂ ಇದೆ ಎಂದು ಹೇಳಿದರು.

ಇದನ್ನೂ ಓದಿ: Mandya: ಕುಮಾರಸ್ವಾಮಿಯವರಿಗೆ ನನ್ನ ಮೇಲೆ ಪ್ರೀತಿಯೋ, ದ್ವೇಷವೋ ಗೊತ್ತಾಗುತ್ತಿಲ್ಲ: ಎನ್ ಚಲುವರಾಯಸ್ವಾಮಿ, ಸಚಿವ

ಮಾನದಂಡಗಳ ಆಧಾರದ ಮೇಲೆ ಬರಗಾಲ ಘೋಷಣೆ

ಮಳೆಯೇ ಬರದಿದ್ದಾಗ ಬರಗಾಲ ಘೋಷಣೆ ಮಾಡುವುದು, ಮೋಡ ಬಿತ್ತನೆ ಮಾಡುವ ಬಗ್ಗೆ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ. ಕ್ಯಾಬಿನೆಟ್ ಸಬ್ ಕಮಿಟಿ ಈಗಾಗಲೇ ಒಂದು ಸಭೆ ಮಾಡಿದೆ. ಕೆಲವೊಂದು ಮಾನದಂಡದ ನಂತರ ಬರಗಾಲ ಘೋಷಣೆ ಮಾಡಲಾಗುವುದು ಎಂದರು.

 

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us