AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪವಾಗಿರುವುದು ಖಂಡನೀಯ: ಬಸವರಾಜ ಬೊಮ್ಮಾಯಿ ಹೇಳಿಕೆ

ಈ ಘಟನೆ ಖಂಡನೀಯವಾಗಿದೆ. ಜೊತೆಗೆ ಅದನ್ನು ಸಹಜವಾಗಿ ನಡೆದಿದೆ ಎಂದು ಹೇಳಿರುವ ಚರಣ್​ಜಿತ್ ಸಿಂಗ್ ಚನ್ನಿ ಹೇಳಿಕೆಗೆ ಕೂಡ ಸಿಎಂ ಬಸವರಾಜ ಬೊಮ್ಮಾಯಿ ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪವಾಗಿರುವುದು ಖಂಡನೀಯ: ಬಸವರಾಜ ಬೊಮ್ಮಾಯಿ ಹೇಳಿಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: ganapathi bhat|

Updated on:Jan 05, 2022 | 6:01 PM

Share

ಮಂಡ್ಯ: ಪಂಜಾಬ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪವಾಗಿದೆ. ಪ್ರಧಾನಿಗೆ ಮುಕ್ತವಾಗಿ ಓಡಾಡಲು ಅವಕಾಶ ನೀಡಿಲ್ಲ. ಅವಕಾಶ ನೀಡದಿರುವುದು ಖಂಡನೀಯ ಎಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿಕೆ ನೀಡಿದ್ದಾರೆ. ಪ್ರಧಾನಿಗೆ ಗೌರವ ಕೊಡುವುದು ಎಲ್ಲ ಸರ್ಕಾರಗಳ ಕರ್ತವ್ಯ. ಭದ್ರತೆ ಒದಗಿಸುವಲ್ಲಿ ಪಂಜಾಬ್ ಸರ್ಕಾರ ವಿಫಲವಾಗಿದೆ. ಪಂಜಾಬ್‌ ಸರ್ಕಾರವನ್ನ ವಜಾಗೊಳಿಸಬೇಕು. ಉನ್ನತ ತನಿಖೆಯಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಬಸವರಾಜ ಬೊ್ಮ್ಮಾಯಿ, ಪಂಜಾಬ್ ಚರಣ್​ಜಿತ್ ಸಿಂಗ್ ಚನ್ನಿ ಹೇಳಿಕೆಯನ್ನು ಕೂಡ ಬಲವಾಗಿ ಖಂಡಿಸಿದ್ದಾರೆ. ಈ ಘಟನೆ ಖಂಡನೀಯವಾಗಿದೆ. ಜೊತೆಗೆ ಅದನ್ನು ಸಹಜವಾಗಿ ನಡೆದಿದೆ ಎಂದು ಹೇಳಿರುವ ಚರಣ್​ಜಿತ್ ಸಿಂಗ್ ಚನ್ನಿ ಹೇಳಿಕೆಗೆ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ.

ಮಂಡ್ಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ಯುವ ಜನೋತ್ಸವ ಸಮಾರೋಪ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿ ಮಾತನಾಡಿದ್ದಾರೆ. ಸಚಿವರಾದ ಆರಗ ಜ್ಞಾನೇಂದ್ರ, ಆರ್. ಅಶೋಕ್, ಕೆ.ಸಿ. ನಾರಾಯಣಗೌಡ, ಸಂಸದೆ ಸುಮಲತಾ , ಶಾಸಕರಾದ ಸುರೇಶ್ ಗೌಡ, ಎಂ. ಶ್ರೀನಿವಾಸ್ ಭಾಗಿ ಆಗಿದ್ದಾರೆ. ಅಮೃತ ಕ್ರೀಡಾ ಯೋಜನೆಯಡಿ 6 ಕ್ರೀಡಾಪಟುಗಳಿಗೆ 5 ಲಕ್ಷ ಚೆಕ್ ವಿತರಣೆ ಮಾಡಲಾಗಿದೆ. ಯುವ ಜನೋತ್ಸವ ಸಮಾರೋಪ ಸಮಾರಂಭದಲ್ಲಿ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಗೆ ಸಿಎಂ ಚಾಲನೆ ನೀಡಿದ್ದಾರೆ.

ಸಿಎಂಗೆ ಸಚಿವರು ನೀಡಿದ್ದ ಬೆಳ್ಳಿ ಗದೆ ಆದಿಚುಂಚನಗಿರಿ ಮಠಕ್ಕೆ ನೀಡಿದ್ದಾರೆ. ಆದಿಚುಂಚನಗಿರಿ ಮಠದ ಆಂಜನೇಯನ ದೇವಸ್ಥಾನಕ್ಕೆ ಕೊಡುಗೆಯಾಗಿ ಬೆಳ್ಳಿ ಗದೆಯನ್ನು ನೀಡಿದ್ದಾರೆ. ಯುವ ಜನೋತ್ಸವ ಸಮಾರೋಪ ಸಮಾರಂಭದಲ್ಲಿ ಕೊಡುಗೆ ನೀಡಿದ್ದಾರೆ. ಕ್ರೀಡಾ ಸಚಿವ ನಾರಾಯಣಗೌಡ ಸಿಎಂಗೆ ಬೆಳ್ಳೆ ಗದೆ ನೀಡಿದ್ದರು. ಸಚಿವರು ನೀಡಿದ್ದ ಗದೆ ಆಂಜನೇಯ ದೇವಸ್ಥಾನಕ್ಕೆ ಕೊಡುಗೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಪಂಜಾಬ್​ನಲ್ಲಿ ಭದ್ರತಾ ಲೋಪದಿಂದ ಸಿಟ್ಟಾದ ಪ್ರಧಾನಿ ಮೋದಿ; ನಾನು ಜೀವಂತವಾಗಿಯಾದರೂ ಬಂದೆನಲ್ಲ ಎಂದ ಪ್ರಧಾನಮಂತ್ರಿ

ಇದನ್ನೂ ಓದಿ: ಕಾಂಗ್ರೆಸ್ ಮೋದಿಯನ್ನು ದ್ವೇಷಿಸುತ್ತದೆ ಎಂದು ಗೊತ್ತು, ಆದರೆ ಇಂದು ಪ್ರಧಾನಿಗೆ ಹಾನಿ ಮಾಡಲು ಯತ್ನಿಸಿದರು: ಸ್ಮೃತಿ ಇರಾನಿ

Published On - 6:00 pm, Wed, 5 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ