AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS ಸುತ್ತಮುತ್ತ ಗಣಿಗಾರಿಕೆಗೆ ಬ್ರೇಕ್ ಹಾಕಲು ಬಿಎಸ್​ವೈ ಗ್ರೀನ್ ಸಿಗ್ನಲ್

ಮಂಡ್ಯ: ಕೆಆರ್​ಎಸ್.. ಜಿಲ್ಲೆಯ ಜೀವನಾಡಿ. ಲಕ್ಷಾಂತರ ರೈತರ ಜಮೀನುಗಳಿಗೆ ನೀರುಣಿಸುತ್ತೆ. ಜಾನುವಾರುಗಳ ದಾಹ ತಣಿಸುತ್ತೆ. ಪ್ರವಾಸಿಗರನ್ನು ತನ್ನತ್ತ ಸೆಳೆದು ಕನ್ನಡ ನಾಡಿನ ಹಿರಿಮೆ ಹೆಚ್ಚಿಸುತ್ತೆ. ಇಂಥಾ ಡ್ಯಾಂಗೆ ಗಣಿಗಾರಿಕೆ ಕಂಟಕವಾಗಿದೆ. ಬೇಬಿ ಬೆಟ್ಟದಲ್ಲಿ ನಡೆಯೋ ಕಲ್ಲು ಗಣಿಗಾರಿಕೆಯಿಂದ ಜಲಾಶಯಕ್ಕೆ ಆಪಾಯ ಎದುರಾಗಿದೆ ಅನ್ನೋ ಮಾತುಗಳು ಕೇಳಿಬಂದಿದ್ವು. ಆದ್ರೀಗ ಗಣಿಗಾರಿಕೆಗೆ ಸಿಎಂ ಬ್ರೇಕ್ ಹಾಕೋಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ: ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಅಪಾಯವಿದೆ ಅಂತಾ ಮೊದಲಿಂದ್ಲೂ ಆರೋಪಗಳು ಕೇಳಿಬಂದಿದ್ವು. […]

KRS ಸುತ್ತಮುತ್ತ ಗಣಿಗಾರಿಕೆಗೆ ಬ್ರೇಕ್ ಹಾಕಲು ಬಿಎಸ್​ವೈ ಗ್ರೀನ್ ಸಿಗ್ನಲ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 06, 2020 | 1:35 PM

Share

ಮಂಡ್ಯ: ಕೆಆರ್​ಎಸ್.. ಜಿಲ್ಲೆಯ ಜೀವನಾಡಿ. ಲಕ್ಷಾಂತರ ರೈತರ ಜಮೀನುಗಳಿಗೆ ನೀರುಣಿಸುತ್ತೆ. ಜಾನುವಾರುಗಳ ದಾಹ ತಣಿಸುತ್ತೆ. ಪ್ರವಾಸಿಗರನ್ನು ತನ್ನತ್ತ ಸೆಳೆದು ಕನ್ನಡ ನಾಡಿನ ಹಿರಿಮೆ ಹೆಚ್ಚಿಸುತ್ತೆ. ಇಂಥಾ ಡ್ಯಾಂಗೆ ಗಣಿಗಾರಿಕೆ ಕಂಟಕವಾಗಿದೆ. ಬೇಬಿ ಬೆಟ್ಟದಲ್ಲಿ ನಡೆಯೋ ಕಲ್ಲು ಗಣಿಗಾರಿಕೆಯಿಂದ ಜಲಾಶಯಕ್ಕೆ ಆಪಾಯ ಎದುರಾಗಿದೆ ಅನ್ನೋ ಮಾತುಗಳು ಕೇಳಿಬಂದಿದ್ವು. ಆದ್ರೀಗ ಗಣಿಗಾರಿಕೆಗೆ ಸಿಎಂ ಬ್ರೇಕ್ ಹಾಕೋಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ: ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಅಪಾಯವಿದೆ ಅಂತಾ ಮೊದಲಿಂದ್ಲೂ ಆರೋಪಗಳು ಕೇಳಿಬಂದಿದ್ವು. ಕಳೆದ ವರ್ಷ ಸೆಪ್ಟಂಬರ್ ತಿಂಗಳಲ್ಲಿ ಕೆಆರ್​ಎಸ್ ಡ್ಯಾಂ ಬಳಿ ಭಾರಿ ಪ್ರಮಾಣದ ಶಬ್ದ ಕೇಳಿ ಬಂದಿತ್ತು. ಇದಕ್ಕೆ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ ನಿಷೇಧಿತ ವಸ್ತುಗಳನ್ನ ಬಳಕೆ ಮಾಡಿ ಕಲ್ಲುಗಳನ್ನ ಸಿಡಿಸುತ್ತಿರುವುದೇ ಕಾರಣ ಅಂತಾ ವರದಿ ಬಂದಿತ್ತು. ಶ್ರೀರಂಗಪಟ್ಟಣದ ಅಂದಿನ ಡಿವೈಎಸ್​ಪಿ ವಿಶ್ವನಾಥ್ ಕೂಡ ಗಣಿಗಾರಿಕೆ ನಿಷೇಧಿಸ್ಬೇಕು ಅಂದಿದ್ರು.

ಕಳೆದ ತಿಂಗಳು ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಗಣಿಗಾರಿಕೆ ನಿಷೇಧಿಸುವ ಸಂಬಂಧ ವರದಿ ಕೇಳಿದ್ರು. ಈ ಬಗ್ಗೆ ಟಿವಿ9 ಕೂಡ ನಿರಂತರ ವರದಿ ಪ್ರಸಾರ ಮಾಡಿತ್ತು. ಈಗ ಇದಕ್ಕೆ ಬ್ರೇಕ್ ಹಾಕೋಕೆ ಸ್ವತಃ ಸಿಎಂ ಯಡಿಯೂರಪ್ಪನವರೇ ಮುಂದಾಗಿದ್ದಾರೆ. ಕೆಆರ್​ಎಸ್ ಬಳಿ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

50 ಕ್ಕೂ ಹೆಚ್ಚು ಪ್ರಭಾವಿಗಳಿಂದ ಗಣಿಗಾರಿಕೆ? ಪಾಂಡವಪುರ ತಾಲೂಕಿನಲ್ಲಿರುವ ಈ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ 50 ಕ್ಕೂ ಹೆಚ್ಚು ಪ್ರಭಾವಿಗಳು ಗಣಿಗಾರಿಕೆ ನಡೆಸುತ್ತಿದ್ದಾರೆ ಅನ್ನೋ ಆರೋಪವಿದೆ. ಇದ್ರಿಂದ ಡ್ಯಾಂಗೆ ಅಪಾಯವಿದೆ ಅಂತಾ ಎರಡ್ಮೂರು ವರದಿಗಳು ಬಂದ್ರೂ, ಜಿಲ್ಲಾಡಳಿತದಿಂದ ಇದಕ್ಕೆ ಬ್ರೇಕ್ ಹಾಕೋಕೆ ಸಾಧ್ಯವಾಗಿರಲಿಲ್ಲ. ಯಾಕಂದ್ರೆ ಜಿಲ್ಲಾಡಳಿತ ಕೆಲವು ದಿನಗಳ ಕಾಲ 144 ನಿಷೇಧಾಜ್ಞೆ ಜಾರಿಗೊಳಿಸಿದ್ರೆ, ಗಣಿಗಾರಿಕೆ ಮಾಲೀಕರು ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ ಮತ್ತೆ ಮುಂದುವರಿಸುತ್ತಿದ್ರು. ಇದ್ರಿಂದಾಗಿ ಶ್ರೀ ರಾಮಯೋಗೇಶ್ವರ ಮಠದ ಲಿಂಗೈಕ್ಯ ಶ್ರೀ ಸದಾಶಿವ ಸ್ವಾಮೀಜಿಗಳ ಗದ್ದುಗೆ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ.

ಒಟ್ನಲ್ಲಿ, ಸರ್ಕಾರ ಗಣಿಗಾರಿಕೆ ನಿಷೇಧಕ್ಕೆ ಮುಂದಾಗುತ್ತಿಲ್ಲ ಅನ್ನೋ ಆರೋಪಗಳಿಗೆ ಸದ್ಯ ಸಿಎಂ ಯಡಿಯೂರಪ್ಪ ಅಂತ್ಯಹಾಡಿದ್ದಾರೆ. ಈ ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧಿಸುವಂತೆ ಸೂಚನೆ ನೀಡಿದ್ದಾರೆ. ಇನ್ಮುಂದಾದ್ರೂ ಕೆಆರ್​ಎಸ್ ಪ್ರದೇಶದಲ್ಲಿ ಕಲ್ಲುಗಣಿಗಾರಿಕೆಗೆ ಬ್ರೇಕ್ ಬೀಳುತ್ತಾ ಕಾದು ನೋಡ್ಬೇಕು.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್