AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS ಸುತ್ತಮುತ್ತ ಗಣಿಗಾರಿಕೆಗೆ ಬ್ರೇಕ್ ಹಾಕಲು ಬಿಎಸ್​ವೈ ಗ್ರೀನ್ ಸಿಗ್ನಲ್

ಮಂಡ್ಯ: ಕೆಆರ್​ಎಸ್.. ಜಿಲ್ಲೆಯ ಜೀವನಾಡಿ. ಲಕ್ಷಾಂತರ ರೈತರ ಜಮೀನುಗಳಿಗೆ ನೀರುಣಿಸುತ್ತೆ. ಜಾನುವಾರುಗಳ ದಾಹ ತಣಿಸುತ್ತೆ. ಪ್ರವಾಸಿಗರನ್ನು ತನ್ನತ್ತ ಸೆಳೆದು ಕನ್ನಡ ನಾಡಿನ ಹಿರಿಮೆ ಹೆಚ್ಚಿಸುತ್ತೆ. ಇಂಥಾ ಡ್ಯಾಂಗೆ ಗಣಿಗಾರಿಕೆ ಕಂಟಕವಾಗಿದೆ. ಬೇಬಿ ಬೆಟ್ಟದಲ್ಲಿ ನಡೆಯೋ ಕಲ್ಲು ಗಣಿಗಾರಿಕೆಯಿಂದ ಜಲಾಶಯಕ್ಕೆ ಆಪಾಯ ಎದುರಾಗಿದೆ ಅನ್ನೋ ಮಾತುಗಳು ಕೇಳಿಬಂದಿದ್ವು. ಆದ್ರೀಗ ಗಣಿಗಾರಿಕೆಗೆ ಸಿಎಂ ಬ್ರೇಕ್ ಹಾಕೋಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ: ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಅಪಾಯವಿದೆ ಅಂತಾ ಮೊದಲಿಂದ್ಲೂ ಆರೋಪಗಳು ಕೇಳಿಬಂದಿದ್ವು. […]

KRS ಸುತ್ತಮುತ್ತ ಗಣಿಗಾರಿಕೆಗೆ ಬ್ರೇಕ್ ಹಾಕಲು ಬಿಎಸ್​ವೈ ಗ್ರೀನ್ ಸಿಗ್ನಲ್
ಸಾಧು ಶ್ರೀನಾಥ್​
|

Updated on: Jan 06, 2020 | 1:35 PM

Share

ಮಂಡ್ಯ: ಕೆಆರ್​ಎಸ್.. ಜಿಲ್ಲೆಯ ಜೀವನಾಡಿ. ಲಕ್ಷಾಂತರ ರೈತರ ಜಮೀನುಗಳಿಗೆ ನೀರುಣಿಸುತ್ತೆ. ಜಾನುವಾರುಗಳ ದಾಹ ತಣಿಸುತ್ತೆ. ಪ್ರವಾಸಿಗರನ್ನು ತನ್ನತ್ತ ಸೆಳೆದು ಕನ್ನಡ ನಾಡಿನ ಹಿರಿಮೆ ಹೆಚ್ಚಿಸುತ್ತೆ. ಇಂಥಾ ಡ್ಯಾಂಗೆ ಗಣಿಗಾರಿಕೆ ಕಂಟಕವಾಗಿದೆ. ಬೇಬಿ ಬೆಟ್ಟದಲ್ಲಿ ನಡೆಯೋ ಕಲ್ಲು ಗಣಿಗಾರಿಕೆಯಿಂದ ಜಲಾಶಯಕ್ಕೆ ಆಪಾಯ ಎದುರಾಗಿದೆ ಅನ್ನೋ ಮಾತುಗಳು ಕೇಳಿಬಂದಿದ್ವು. ಆದ್ರೀಗ ಗಣಿಗಾರಿಕೆಗೆ ಸಿಎಂ ಬ್ರೇಕ್ ಹಾಕೋಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ: ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಅಪಾಯವಿದೆ ಅಂತಾ ಮೊದಲಿಂದ್ಲೂ ಆರೋಪಗಳು ಕೇಳಿಬಂದಿದ್ವು. ಕಳೆದ ವರ್ಷ ಸೆಪ್ಟಂಬರ್ ತಿಂಗಳಲ್ಲಿ ಕೆಆರ್​ಎಸ್ ಡ್ಯಾಂ ಬಳಿ ಭಾರಿ ಪ್ರಮಾಣದ ಶಬ್ದ ಕೇಳಿ ಬಂದಿತ್ತು. ಇದಕ್ಕೆ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ ನಿಷೇಧಿತ ವಸ್ತುಗಳನ್ನ ಬಳಕೆ ಮಾಡಿ ಕಲ್ಲುಗಳನ್ನ ಸಿಡಿಸುತ್ತಿರುವುದೇ ಕಾರಣ ಅಂತಾ ವರದಿ ಬಂದಿತ್ತು. ಶ್ರೀರಂಗಪಟ್ಟಣದ ಅಂದಿನ ಡಿವೈಎಸ್​ಪಿ ವಿಶ್ವನಾಥ್ ಕೂಡ ಗಣಿಗಾರಿಕೆ ನಿಷೇಧಿಸ್ಬೇಕು ಅಂದಿದ್ರು.

ಕಳೆದ ತಿಂಗಳು ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಗಣಿಗಾರಿಕೆ ನಿಷೇಧಿಸುವ ಸಂಬಂಧ ವರದಿ ಕೇಳಿದ್ರು. ಈ ಬಗ್ಗೆ ಟಿವಿ9 ಕೂಡ ನಿರಂತರ ವರದಿ ಪ್ರಸಾರ ಮಾಡಿತ್ತು. ಈಗ ಇದಕ್ಕೆ ಬ್ರೇಕ್ ಹಾಕೋಕೆ ಸ್ವತಃ ಸಿಎಂ ಯಡಿಯೂರಪ್ಪನವರೇ ಮುಂದಾಗಿದ್ದಾರೆ. ಕೆಆರ್​ಎಸ್ ಬಳಿ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

50 ಕ್ಕೂ ಹೆಚ್ಚು ಪ್ರಭಾವಿಗಳಿಂದ ಗಣಿಗಾರಿಕೆ? ಪಾಂಡವಪುರ ತಾಲೂಕಿನಲ್ಲಿರುವ ಈ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ 50 ಕ್ಕೂ ಹೆಚ್ಚು ಪ್ರಭಾವಿಗಳು ಗಣಿಗಾರಿಕೆ ನಡೆಸುತ್ತಿದ್ದಾರೆ ಅನ್ನೋ ಆರೋಪವಿದೆ. ಇದ್ರಿಂದ ಡ್ಯಾಂಗೆ ಅಪಾಯವಿದೆ ಅಂತಾ ಎರಡ್ಮೂರು ವರದಿಗಳು ಬಂದ್ರೂ, ಜಿಲ್ಲಾಡಳಿತದಿಂದ ಇದಕ್ಕೆ ಬ್ರೇಕ್ ಹಾಕೋಕೆ ಸಾಧ್ಯವಾಗಿರಲಿಲ್ಲ. ಯಾಕಂದ್ರೆ ಜಿಲ್ಲಾಡಳಿತ ಕೆಲವು ದಿನಗಳ ಕಾಲ 144 ನಿಷೇಧಾಜ್ಞೆ ಜಾರಿಗೊಳಿಸಿದ್ರೆ, ಗಣಿಗಾರಿಕೆ ಮಾಲೀಕರು ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ ಮತ್ತೆ ಮುಂದುವರಿಸುತ್ತಿದ್ರು. ಇದ್ರಿಂದಾಗಿ ಶ್ರೀ ರಾಮಯೋಗೇಶ್ವರ ಮಠದ ಲಿಂಗೈಕ್ಯ ಶ್ರೀ ಸದಾಶಿವ ಸ್ವಾಮೀಜಿಗಳ ಗದ್ದುಗೆ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ.

ಒಟ್ನಲ್ಲಿ, ಸರ್ಕಾರ ಗಣಿಗಾರಿಕೆ ನಿಷೇಧಕ್ಕೆ ಮುಂದಾಗುತ್ತಿಲ್ಲ ಅನ್ನೋ ಆರೋಪಗಳಿಗೆ ಸದ್ಯ ಸಿಎಂ ಯಡಿಯೂರಪ್ಪ ಅಂತ್ಯಹಾಡಿದ್ದಾರೆ. ಈ ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧಿಸುವಂತೆ ಸೂಚನೆ ನೀಡಿದ್ದಾರೆ. ಇನ್ಮುಂದಾದ್ರೂ ಕೆಆರ್​ಎಸ್ ಪ್ರದೇಶದಲ್ಲಿ ಕಲ್ಲುಗಣಿಗಾರಿಕೆಗೆ ಬ್ರೇಕ್ ಬೀಳುತ್ತಾ ಕಾದು ನೋಡ್ಬೇಕು.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?