AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS ಸುತ್ತಮುತ್ತ ಗಣಿಗಾರಿಕೆಗೆ ಬ್ರೇಕ್ ಹಾಕಲು ಬಿಎಸ್​ವೈ ಗ್ರೀನ್ ಸಿಗ್ನಲ್

ಮಂಡ್ಯ: ಕೆಆರ್​ಎಸ್.. ಜಿಲ್ಲೆಯ ಜೀವನಾಡಿ. ಲಕ್ಷಾಂತರ ರೈತರ ಜಮೀನುಗಳಿಗೆ ನೀರುಣಿಸುತ್ತೆ. ಜಾನುವಾರುಗಳ ದಾಹ ತಣಿಸುತ್ತೆ. ಪ್ರವಾಸಿಗರನ್ನು ತನ್ನತ್ತ ಸೆಳೆದು ಕನ್ನಡ ನಾಡಿನ ಹಿರಿಮೆ ಹೆಚ್ಚಿಸುತ್ತೆ. ಇಂಥಾ ಡ್ಯಾಂಗೆ ಗಣಿಗಾರಿಕೆ ಕಂಟಕವಾಗಿದೆ. ಬೇಬಿ ಬೆಟ್ಟದಲ್ಲಿ ನಡೆಯೋ ಕಲ್ಲು ಗಣಿಗಾರಿಕೆಯಿಂದ ಜಲಾಶಯಕ್ಕೆ ಆಪಾಯ ಎದುರಾಗಿದೆ ಅನ್ನೋ ಮಾತುಗಳು ಕೇಳಿಬಂದಿದ್ವು. ಆದ್ರೀಗ ಗಣಿಗಾರಿಕೆಗೆ ಸಿಎಂ ಬ್ರೇಕ್ ಹಾಕೋಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ: ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಅಪಾಯವಿದೆ ಅಂತಾ ಮೊದಲಿಂದ್ಲೂ ಆರೋಪಗಳು ಕೇಳಿಬಂದಿದ್ವು. […]

KRS ಸುತ್ತಮುತ್ತ ಗಣಿಗಾರಿಕೆಗೆ ಬ್ರೇಕ್ ಹಾಕಲು ಬಿಎಸ್​ವೈ ಗ್ರೀನ್ ಸಿಗ್ನಲ್
ಸಾಧು ಶ್ರೀನಾಥ್​
|

Updated on: Jan 06, 2020 | 1:35 PM

Share

ಮಂಡ್ಯ: ಕೆಆರ್​ಎಸ್.. ಜಿಲ್ಲೆಯ ಜೀವನಾಡಿ. ಲಕ್ಷಾಂತರ ರೈತರ ಜಮೀನುಗಳಿಗೆ ನೀರುಣಿಸುತ್ತೆ. ಜಾನುವಾರುಗಳ ದಾಹ ತಣಿಸುತ್ತೆ. ಪ್ರವಾಸಿಗರನ್ನು ತನ್ನತ್ತ ಸೆಳೆದು ಕನ್ನಡ ನಾಡಿನ ಹಿರಿಮೆ ಹೆಚ್ಚಿಸುತ್ತೆ. ಇಂಥಾ ಡ್ಯಾಂಗೆ ಗಣಿಗಾರಿಕೆ ಕಂಟಕವಾಗಿದೆ. ಬೇಬಿ ಬೆಟ್ಟದಲ್ಲಿ ನಡೆಯೋ ಕಲ್ಲು ಗಣಿಗಾರಿಕೆಯಿಂದ ಜಲಾಶಯಕ್ಕೆ ಆಪಾಯ ಎದುರಾಗಿದೆ ಅನ್ನೋ ಮಾತುಗಳು ಕೇಳಿಬಂದಿದ್ವು. ಆದ್ರೀಗ ಗಣಿಗಾರಿಕೆಗೆ ಸಿಎಂ ಬ್ರೇಕ್ ಹಾಕೋಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ: ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಅಪಾಯವಿದೆ ಅಂತಾ ಮೊದಲಿಂದ್ಲೂ ಆರೋಪಗಳು ಕೇಳಿಬಂದಿದ್ವು. ಕಳೆದ ವರ್ಷ ಸೆಪ್ಟಂಬರ್ ತಿಂಗಳಲ್ಲಿ ಕೆಆರ್​ಎಸ್ ಡ್ಯಾಂ ಬಳಿ ಭಾರಿ ಪ್ರಮಾಣದ ಶಬ್ದ ಕೇಳಿ ಬಂದಿತ್ತು. ಇದಕ್ಕೆ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ ನಿಷೇಧಿತ ವಸ್ತುಗಳನ್ನ ಬಳಕೆ ಮಾಡಿ ಕಲ್ಲುಗಳನ್ನ ಸಿಡಿಸುತ್ತಿರುವುದೇ ಕಾರಣ ಅಂತಾ ವರದಿ ಬಂದಿತ್ತು. ಶ್ರೀರಂಗಪಟ್ಟಣದ ಅಂದಿನ ಡಿವೈಎಸ್​ಪಿ ವಿಶ್ವನಾಥ್ ಕೂಡ ಗಣಿಗಾರಿಕೆ ನಿಷೇಧಿಸ್ಬೇಕು ಅಂದಿದ್ರು.

ಕಳೆದ ತಿಂಗಳು ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಗಣಿಗಾರಿಕೆ ನಿಷೇಧಿಸುವ ಸಂಬಂಧ ವರದಿ ಕೇಳಿದ್ರು. ಈ ಬಗ್ಗೆ ಟಿವಿ9 ಕೂಡ ನಿರಂತರ ವರದಿ ಪ್ರಸಾರ ಮಾಡಿತ್ತು. ಈಗ ಇದಕ್ಕೆ ಬ್ರೇಕ್ ಹಾಕೋಕೆ ಸ್ವತಃ ಸಿಎಂ ಯಡಿಯೂರಪ್ಪನವರೇ ಮುಂದಾಗಿದ್ದಾರೆ. ಕೆಆರ್​ಎಸ್ ಬಳಿ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

50 ಕ್ಕೂ ಹೆಚ್ಚು ಪ್ರಭಾವಿಗಳಿಂದ ಗಣಿಗಾರಿಕೆ? ಪಾಂಡವಪುರ ತಾಲೂಕಿನಲ್ಲಿರುವ ಈ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ 50 ಕ್ಕೂ ಹೆಚ್ಚು ಪ್ರಭಾವಿಗಳು ಗಣಿಗಾರಿಕೆ ನಡೆಸುತ್ತಿದ್ದಾರೆ ಅನ್ನೋ ಆರೋಪವಿದೆ. ಇದ್ರಿಂದ ಡ್ಯಾಂಗೆ ಅಪಾಯವಿದೆ ಅಂತಾ ಎರಡ್ಮೂರು ವರದಿಗಳು ಬಂದ್ರೂ, ಜಿಲ್ಲಾಡಳಿತದಿಂದ ಇದಕ್ಕೆ ಬ್ರೇಕ್ ಹಾಕೋಕೆ ಸಾಧ್ಯವಾಗಿರಲಿಲ್ಲ. ಯಾಕಂದ್ರೆ ಜಿಲ್ಲಾಡಳಿತ ಕೆಲವು ದಿನಗಳ ಕಾಲ 144 ನಿಷೇಧಾಜ್ಞೆ ಜಾರಿಗೊಳಿಸಿದ್ರೆ, ಗಣಿಗಾರಿಕೆ ಮಾಲೀಕರು ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ ಮತ್ತೆ ಮುಂದುವರಿಸುತ್ತಿದ್ರು. ಇದ್ರಿಂದಾಗಿ ಶ್ರೀ ರಾಮಯೋಗೇಶ್ವರ ಮಠದ ಲಿಂಗೈಕ್ಯ ಶ್ರೀ ಸದಾಶಿವ ಸ್ವಾಮೀಜಿಗಳ ಗದ್ದುಗೆ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ.

ಒಟ್ನಲ್ಲಿ, ಸರ್ಕಾರ ಗಣಿಗಾರಿಕೆ ನಿಷೇಧಕ್ಕೆ ಮುಂದಾಗುತ್ತಿಲ್ಲ ಅನ್ನೋ ಆರೋಪಗಳಿಗೆ ಸದ್ಯ ಸಿಎಂ ಯಡಿಯೂರಪ್ಪ ಅಂತ್ಯಹಾಡಿದ್ದಾರೆ. ಈ ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧಿಸುವಂತೆ ಸೂಚನೆ ನೀಡಿದ್ದಾರೆ. ಇನ್ಮುಂದಾದ್ರೂ ಕೆಆರ್​ಎಸ್ ಪ್ರದೇಶದಲ್ಲಿ ಕಲ್ಲುಗಣಿಗಾರಿಕೆಗೆ ಬ್ರೇಕ್ ಬೀಳುತ್ತಾ ಕಾದು ನೋಡ್ಬೇಕು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ