AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS ಸುತ್ತಮುತ್ತ ಗಣಿಗಾರಿಕೆಗೆ ಬ್ರೇಕ್ ಹಾಕಲು ಬಿಎಸ್​ವೈ ಗ್ರೀನ್ ಸಿಗ್ನಲ್

ಮಂಡ್ಯ: ಕೆಆರ್​ಎಸ್.. ಜಿಲ್ಲೆಯ ಜೀವನಾಡಿ. ಲಕ್ಷಾಂತರ ರೈತರ ಜಮೀನುಗಳಿಗೆ ನೀರುಣಿಸುತ್ತೆ. ಜಾನುವಾರುಗಳ ದಾಹ ತಣಿಸುತ್ತೆ. ಪ್ರವಾಸಿಗರನ್ನು ತನ್ನತ್ತ ಸೆಳೆದು ಕನ್ನಡ ನಾಡಿನ ಹಿರಿಮೆ ಹೆಚ್ಚಿಸುತ್ತೆ. ಇಂಥಾ ಡ್ಯಾಂಗೆ ಗಣಿಗಾರಿಕೆ ಕಂಟಕವಾಗಿದೆ. ಬೇಬಿ ಬೆಟ್ಟದಲ್ಲಿ ನಡೆಯೋ ಕಲ್ಲು ಗಣಿಗಾರಿಕೆಯಿಂದ ಜಲಾಶಯಕ್ಕೆ ಆಪಾಯ ಎದುರಾಗಿದೆ ಅನ್ನೋ ಮಾತುಗಳು ಕೇಳಿಬಂದಿದ್ವು. ಆದ್ರೀಗ ಗಣಿಗಾರಿಕೆಗೆ ಸಿಎಂ ಬ್ರೇಕ್ ಹಾಕೋಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ: ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಅಪಾಯವಿದೆ ಅಂತಾ ಮೊದಲಿಂದ್ಲೂ ಆರೋಪಗಳು ಕೇಳಿಬಂದಿದ್ವು. […]

KRS ಸುತ್ತಮುತ್ತ ಗಣಿಗಾರಿಕೆಗೆ ಬ್ರೇಕ್ ಹಾಕಲು ಬಿಎಸ್​ವೈ ಗ್ರೀನ್ ಸಿಗ್ನಲ್
ಸಾಧು ಶ್ರೀನಾಥ್​
|

Updated on: Jan 06, 2020 | 1:35 PM

Share

ಮಂಡ್ಯ: ಕೆಆರ್​ಎಸ್.. ಜಿಲ್ಲೆಯ ಜೀವನಾಡಿ. ಲಕ್ಷಾಂತರ ರೈತರ ಜಮೀನುಗಳಿಗೆ ನೀರುಣಿಸುತ್ತೆ. ಜಾನುವಾರುಗಳ ದಾಹ ತಣಿಸುತ್ತೆ. ಪ್ರವಾಸಿಗರನ್ನು ತನ್ನತ್ತ ಸೆಳೆದು ಕನ್ನಡ ನಾಡಿನ ಹಿರಿಮೆ ಹೆಚ್ಚಿಸುತ್ತೆ. ಇಂಥಾ ಡ್ಯಾಂಗೆ ಗಣಿಗಾರಿಕೆ ಕಂಟಕವಾಗಿದೆ. ಬೇಬಿ ಬೆಟ್ಟದಲ್ಲಿ ನಡೆಯೋ ಕಲ್ಲು ಗಣಿಗಾರಿಕೆಯಿಂದ ಜಲಾಶಯಕ್ಕೆ ಆಪಾಯ ಎದುರಾಗಿದೆ ಅನ್ನೋ ಮಾತುಗಳು ಕೇಳಿಬಂದಿದ್ವು. ಆದ್ರೀಗ ಗಣಿಗಾರಿಕೆಗೆ ಸಿಎಂ ಬ್ರೇಕ್ ಹಾಕೋಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ: ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಅಪಾಯವಿದೆ ಅಂತಾ ಮೊದಲಿಂದ್ಲೂ ಆರೋಪಗಳು ಕೇಳಿಬಂದಿದ್ವು. ಕಳೆದ ವರ್ಷ ಸೆಪ್ಟಂಬರ್ ತಿಂಗಳಲ್ಲಿ ಕೆಆರ್​ಎಸ್ ಡ್ಯಾಂ ಬಳಿ ಭಾರಿ ಪ್ರಮಾಣದ ಶಬ್ದ ಕೇಳಿ ಬಂದಿತ್ತು. ಇದಕ್ಕೆ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ ನಿಷೇಧಿತ ವಸ್ತುಗಳನ್ನ ಬಳಕೆ ಮಾಡಿ ಕಲ್ಲುಗಳನ್ನ ಸಿಡಿಸುತ್ತಿರುವುದೇ ಕಾರಣ ಅಂತಾ ವರದಿ ಬಂದಿತ್ತು. ಶ್ರೀರಂಗಪಟ್ಟಣದ ಅಂದಿನ ಡಿವೈಎಸ್​ಪಿ ವಿಶ್ವನಾಥ್ ಕೂಡ ಗಣಿಗಾರಿಕೆ ನಿಷೇಧಿಸ್ಬೇಕು ಅಂದಿದ್ರು.

ಕಳೆದ ತಿಂಗಳು ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಗಣಿಗಾರಿಕೆ ನಿಷೇಧಿಸುವ ಸಂಬಂಧ ವರದಿ ಕೇಳಿದ್ರು. ಈ ಬಗ್ಗೆ ಟಿವಿ9 ಕೂಡ ನಿರಂತರ ವರದಿ ಪ್ರಸಾರ ಮಾಡಿತ್ತು. ಈಗ ಇದಕ್ಕೆ ಬ್ರೇಕ್ ಹಾಕೋಕೆ ಸ್ವತಃ ಸಿಎಂ ಯಡಿಯೂರಪ್ಪನವರೇ ಮುಂದಾಗಿದ್ದಾರೆ. ಕೆಆರ್​ಎಸ್ ಬಳಿ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

50 ಕ್ಕೂ ಹೆಚ್ಚು ಪ್ರಭಾವಿಗಳಿಂದ ಗಣಿಗಾರಿಕೆ? ಪಾಂಡವಪುರ ತಾಲೂಕಿನಲ್ಲಿರುವ ಈ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ 50 ಕ್ಕೂ ಹೆಚ್ಚು ಪ್ರಭಾವಿಗಳು ಗಣಿಗಾರಿಕೆ ನಡೆಸುತ್ತಿದ್ದಾರೆ ಅನ್ನೋ ಆರೋಪವಿದೆ. ಇದ್ರಿಂದ ಡ್ಯಾಂಗೆ ಅಪಾಯವಿದೆ ಅಂತಾ ಎರಡ್ಮೂರು ವರದಿಗಳು ಬಂದ್ರೂ, ಜಿಲ್ಲಾಡಳಿತದಿಂದ ಇದಕ್ಕೆ ಬ್ರೇಕ್ ಹಾಕೋಕೆ ಸಾಧ್ಯವಾಗಿರಲಿಲ್ಲ. ಯಾಕಂದ್ರೆ ಜಿಲ್ಲಾಡಳಿತ ಕೆಲವು ದಿನಗಳ ಕಾಲ 144 ನಿಷೇಧಾಜ್ಞೆ ಜಾರಿಗೊಳಿಸಿದ್ರೆ, ಗಣಿಗಾರಿಕೆ ಮಾಲೀಕರು ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ ಮತ್ತೆ ಮುಂದುವರಿಸುತ್ತಿದ್ರು. ಇದ್ರಿಂದಾಗಿ ಶ್ರೀ ರಾಮಯೋಗೇಶ್ವರ ಮಠದ ಲಿಂಗೈಕ್ಯ ಶ್ರೀ ಸದಾಶಿವ ಸ್ವಾಮೀಜಿಗಳ ಗದ್ದುಗೆ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ.

ಒಟ್ನಲ್ಲಿ, ಸರ್ಕಾರ ಗಣಿಗಾರಿಕೆ ನಿಷೇಧಕ್ಕೆ ಮುಂದಾಗುತ್ತಿಲ್ಲ ಅನ್ನೋ ಆರೋಪಗಳಿಗೆ ಸದ್ಯ ಸಿಎಂ ಯಡಿಯೂರಪ್ಪ ಅಂತ್ಯಹಾಡಿದ್ದಾರೆ. ಈ ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧಿಸುವಂತೆ ಸೂಚನೆ ನೀಡಿದ್ದಾರೆ. ಇನ್ಮುಂದಾದ್ರೂ ಕೆಆರ್​ಎಸ್ ಪ್ರದೇಶದಲ್ಲಿ ಕಲ್ಲುಗಣಿಗಾರಿಕೆಗೆ ಬ್ರೇಕ್ ಬೀಳುತ್ತಾ ಕಾದು ನೋಡ್ಬೇಕು.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?