AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಮೇಸ್ತ್ರಿ ಹತ್ಯೆ

ನವೆಂಬರ್ 4ರಂದು ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೇ ಮಾದರಿಯಲ್ಲಿ ಮಂಡ್ಯದಲ್ಲಿ ಮೇಸ್ತ್ರಿಯೊಬ್ಬನನ್ನು ಸಹ ಕೆಲಸಗಾರ ಕತ್ತು ಕೊಯ್ದು ಬೀಕರವಾಗಿ ಕೊಲೆ ಮಾಡಿದ್ದಾನೆ.

ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಮೇಸ್ತ್ರಿ ಹತ್ಯೆ
ಪ್ರಶಾಂತ್​ ಬಿ.
| Edited By: |

Updated on:Nov 07, 2023 | 2:29 PM

Share

ಮಂಡ್ಯ, (ನವೆಂಬರ್ 07): ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರನ್ಜು ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಸಹ ಮೇಸ್ತ್ರಿಯೋರ್ವನ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ (Mordred) ಮಾಡಲಾಗಿದೆ. ಮಂಡ್ಯ(Mandya) ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಸಹ ಕೆಲಸಗಾರ ಕಬ್ಬನಹಳ್ಳಿಯ ರವಿ ಎನ್ನುವಾತ ತನ್ನ ಮೇಸ್ತ್ರಿ ಮಂಟೇಸ್ವಾಮಿಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಇವರಿಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಈ ಹಿಂದೆ ಗಲಾಟೆ ನಡೆದಿತ್ತು. ಆದ್ರೆ, ರವಿ ನಿನ್ನೆ ಪ್ಲ್ಯಾನ್ ಮಾಡಿ ಮಾತುಕತೆಗೆಂದು ಮನೆಯಲ್ಲಿದ್ದ ಮಂಟೇಸ್ವಾಮಿಯನ್ನು ಆಚೆ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಮಂಡ್ಯ ರಸ್ತೆ ಪಕ್ಕದ ಜಮೀನಿನೊಂದರ ಬಳಿ ಮಂಟೇಸ್ವಾಮಿಯ ಶವ ಪತ್ತೆಯಾಗಿದೆ.

ಇದನ್ನೂ ಓದಿ: ಮಂಗಳೂರು: ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ, ಆರೋಪಿಗಳು ಠಾಣೆಗೆ ಶರಣು

ನವೆಂಬರ್ 4ರಂದು ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರನ್ನು ಮಾಜಿ ಕಾರು ಚಾಲಕ ಕಿರಣ್ ಎನ್ನುವಾತ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದ. ಇದೇ ಮಾದರಿಯಲ್ಲಿ ಮೇಸ್ತ್ರಿ ಮಂಟೇಸ್ವಾಮಿಯನ್ನು ಸಹ ಕತ್ತು ಕೊಯ್ದು ಕೊಲೆ ಮಾಡಲಾಗಿದೆ.

ಇನ್ನು ಈ ಬಗ್ಗೆ ಕೆ ಎಂ ದೊಡ್ಡಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಇನ್ನು ಪರಾರಿಯಾಗಿರುವ ಕೊಲೆ ಆರೋಪಿ ರವಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬೈಕ್ ಸವಾರರು ಸಾವು

ಕೊಡಗು, (ನವೆಂಬರ್ 07): ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸವಾರನ ನಿಯಂತ್ರಣ ತಪ್ಪಿ ಬೈಕ್ ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿದೆ, ಪರಿಣಮಾ ಬೈಕ್​ನಲ್ಲಿದ್ದ ಸುಂಟಿಕೊಪ್ಪ ನಿವಾಸಿಗಳಾದ ಚಂದನ್(22), ಉದಯ್(25) ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:27 pm, Tue, 7 November 23

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ