ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಮೇಸ್ತ್ರಿ ಹತ್ಯೆ

| Updated By: ರಮೇಶ್ ಬಿ. ಜವಳಗೇರಾ

Updated on: Nov 07, 2023 | 2:29 PM

ನವೆಂಬರ್ 4ರಂದು ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೇ ಮಾದರಿಯಲ್ಲಿ ಮಂಡ್ಯದಲ್ಲಿ ಮೇಸ್ತ್ರಿಯೊಬ್ಬನನ್ನು ಸಹ ಕೆಲಸಗಾರ ಕತ್ತು ಕೊಯ್ದು ಬೀಕರವಾಗಿ ಕೊಲೆ ಮಾಡಿದ್ದಾನೆ.

ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಮೇಸ್ತ್ರಿ ಹತ್ಯೆ
Follow us on

ಮಂಡ್ಯ, (ನವೆಂಬರ್ 07): ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರನ್ಜು ಕೊಲೆ ಮಾದರಿಯಲ್ಲೇ ಮಂಡ್ಯದಲ್ಲಿ ಸಹ ಮೇಸ್ತ್ರಿಯೋರ್ವನ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ (Mordred) ಮಾಡಲಾಗಿದೆ. ಮಂಡ್ಯ(Mandya) ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಸಹ ಕೆಲಸಗಾರ ಕಬ್ಬನಹಳ್ಳಿಯ ರವಿ ಎನ್ನುವಾತ ತನ್ನ ಮೇಸ್ತ್ರಿ ಮಂಟೇಸ್ವಾಮಿಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಇವರಿಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಈ ಹಿಂದೆ ಗಲಾಟೆ ನಡೆದಿತ್ತು. ಆದ್ರೆ, ರವಿ ನಿನ್ನೆ ಪ್ಲ್ಯಾನ್ ಮಾಡಿ ಮಾತುಕತೆಗೆಂದು ಮನೆಯಲ್ಲಿದ್ದ ಮಂಟೇಸ್ವಾಮಿಯನ್ನು ಆಚೆ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಮಂಡ್ಯ ರಸ್ತೆ ಪಕ್ಕದ ಜಮೀನಿನೊಂದರ ಬಳಿ ಮಂಟೇಸ್ವಾಮಿಯ ಶವ ಪತ್ತೆಯಾಗಿದೆ.

ಇದನ್ನೂ ಓದಿ: ಮಂಗಳೂರು: ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ, ಆರೋಪಿಗಳು ಠಾಣೆಗೆ ಶರಣು

ನವೆಂಬರ್ 4ರಂದು ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರನ್ನು ಮಾಜಿ ಕಾರು ಚಾಲಕ ಕಿರಣ್ ಎನ್ನುವಾತ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದ. ಇದೇ ಮಾದರಿಯಲ್ಲಿ ಮೇಸ್ತ್ರಿ ಮಂಟೇಸ್ವಾಮಿಯನ್ನು ಸಹ ಕತ್ತು ಕೊಯ್ದು ಕೊಲೆ ಮಾಡಲಾಗಿದೆ.

ಇನ್ನು ಈ ಬಗ್ಗೆ ಕೆ ಎಂ ದೊಡ್ಡಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಇನ್ನು ಪರಾರಿಯಾಗಿರುವ ಕೊಲೆ ಆರೋಪಿ ರವಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬೈಕ್ ಸವಾರರು ಸಾವು

ಕೊಡಗು, (ನವೆಂಬರ್ 07): ಜಿಲ್ಲೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸವಾರನ ನಿಯಂತ್ರಣ ತಪ್ಪಿ ಬೈಕ್ ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿದೆ, ಪರಿಣಮಾ ಬೈಕ್​ನಲ್ಲಿದ್ದ ಸುಂಟಿಕೊಪ್ಪ ನಿವಾಸಿಗಳಾದ ಚಂದನ್(22), ಉದಯ್(25) ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:27 pm, Tue, 7 November 23