AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲಿಯಿಂದ ತಪ್ಪಿಸಿಕೊಳ್ಳಲು ಮರ ಏರಿ ಕುಳಿತ ಹುಂಜ: ಕೋಳಿ ಇಳಿಸಲು ಜನರ ಹರಸಾಹಸ

ಮಾರಮ್ಮನ ಉತ್ಸವದ ವೇಳೆ ದೇವಿಗೆ ಬಲಿ ನೀಡಲು ಭಕ್ತರೊಬ್ಬರು ತಂದಿದ್ದ ಹುಂಜ ತಪ್ಪಿಸಿಕೊಂಡು ಮರ ಏರಿ ಜೀವ ಉಳಿಸಿಕೊಳ್ಳಲು ಯತ್ನಿಸಿತು.

ಬಲಿಯಿಂದ ತಪ್ಪಿಸಿಕೊಳ್ಳಲು ಮರ ಏರಿ ಕುಳಿತ ಹುಂಜ: ಕೋಳಿ ಇಳಿಸಲು ಜನರ ಹರಸಾಹಸ
ಬಲಿಯಿಂದ ತಪ್ಪಿಸಿಕೊಂಡು ಮರ ಏರಿರುವ ಕೋಳಿ ಹುಂಜ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 11, 2022 | 1:13 PM

Share

ಮಂಡ್ಯ: ನಗರದ ಬಿಸಿಲು ಮಾರಮ್ಮ ದೇಗುಲದ ಬಳಿ ನಡೆಯುತ್ತಿದ್ದ ಮಾರಮ್ಮನ ಉತ್ಸವದ ವೇಳೆ ದೇವಿಗೆ ಬಲಿ ನೀಡಲು ಭಕ್ತರೊಬ್ಬರು ತಂದಿದ್ದ ಹುಂಜ ತಪ್ಪಿಸಿಕೊಂಡು ಮರ ಏರಿ ಜೀವ ಉಳಿಸಿಕೊಳ್ಳಲು ಯತ್ನಿಸಿತು. ಕೋಳಿಯನ್ನು ಹಿಡಿಯಲು ಭಕ್ತರು ಮರ ಹತ್ತಿದರಾದರೂ ಅದು ರೆಂಬೆಯಿಂದ ರೆಂಬೆಗೆ ಹಾರಿ ತಪ್ಪಿಸಿಕೊಳ್ಳುತ್ತಿತ್ತು. ಮಳೆ ಬಂದಾಗ ಜನರು ಅನಿವಾರ್ಯವಾಗಿ ಮರದಿಂದ ಕೆಳಗೆ ಇಳಿಯಬೇಕಾಯಿತು. ಕೊನೆಗೂ ಹಾಗೂ ಹೀಗೂ ಕೋಳಿಯನ್ನು ಹಿಡಿದ ಭಕ್ತರು ದೇವಿ ಬಲಿಕೊಟ್ಟರು.

ಗ್ರಾಮೀಣ ಪ್ರದೇಶಗಳಲ್ಲಿ ಭಕ್ತರು ದೇವರಿಗೆ ಕೋಳಿ, ಕುರಿಗಳ ಹರಕೆ ಹೇಳಿಕೊಳ್ಳುವುದು ಮತ್ತು ಬಲಿಕೊಡುವುದು ಮುಂದುವರಿದಿದೆ. ಇಂಥ ಸಂದರ್ಭದಲ್ಲಿ ಪ್ರಾಣಿಗಳು ಬಲಿಯಿಂದ ತಪ್ಪಿಸಿಕೊಳ್ಳಲು ಜಾಣತನದ ತಂತ್ರಗಳನ್ನು ಹೂಡುತ್ತವೆ. ಮಂಡ್ಯ ನಗರದ 100 ಅಡಿ ರಸ್ತೆಯಲ್ಲಿ ನೆರೆದಿದ್ದ ಜನರು ಇಂಥದ್ದೊಂದು ಘಟನೆಗೆ ಸಾಕ್ಷಿಯಾದರು. ಗಾಂಧಿ ನಗರ ಬಡಾವಣೆಯಲ್ಲಿ ನಡೆಯುತ್ತಿದ್ದ ಶ್ರೀಕಾಳಮ್ಮ ದೇವರ ಹಬ್ಬರ ಅಂಗವಾಗಿ ಬಿಸಿಲು ಮಾರಮ್ಮ ದೇವಿಯ ಆರತಿ ಉತ್ಸವ ನಡೆಯುತ್ತಿತ್ತು. ಈ ವೇಳೆ ಭಕ್ತರೊಬ್ಬರು ಎರಡು ನಾಟಿ ಹುಂಜಗಳನ್ನು ಬಲಿಕೊಡಲೆಂದು ತಂದಿದ್ದರು. ಒಂದು ಹುಂಜವನ್ನು ಬಲಿಕೊಟ್ಟ ನಂತರ, ಮತ್ತೊಂದು ಹುಂಜ ಅವರ ಹಿಡಿತದಿಂದ ಪಾರಾಗಿ ಮರ ಏರಿತು.

ಮರದಿಂದ ಕೋಳಿಯನ್ನು ಇಳಿಸಲು ಅಲ್ಲಿದ್ದವರು ಸಾಕಷ್ಟು ತಂತ್ರಗಳನ್ನು ಹೂಡಿದರೂ ಪ್ರಯೋಜನ ಸಿಗಲಿಲ್ಲ. ಮಳೆಯೂ ಕೋಳಿಯ ಪರವಾಗಿಯೇ ಇತ್ತು. ಕೊನೆಗೆ ಅಲ್ಲಿಗೆ ಬಂದಿದ್ದವರೊಬ್ಬರು ಹುಂಜ ಹಿಡಿಯುವಲ್ಲಿ ಯಶಸ್ವಿಯಾಗಿ, ಹುಂಜ ಸೆರೆಹಿಡಿಯುವ ಕಾರ್ಯಾಚರಣೆಗೆ ಮಂಗಳ ಹಾಡಿದರು.

ಇದನ್ನೂ ಓದಿ: ಚಾಮರಾಜನಗರದಲ್ಲಿ ನಡೆಯಿತು ಬೆಳಗ್ಗೆ ಸತ್ತ ವ್ಯಕ್ತಿಗೆ ಮರುಜೀವ ನೀಡುವ ಬಲಿ ಜಾತ್ರೆ! ಏನಿದರ ವಿಶೇಷತೆ?

ಇದನ್ನೂ ಓದಿ: ತಬ್ಬಲಿ ಕುರಿಮರಿಯನ್ನು ಮಗುವಿನಂತೆ ಸಾಕಿದ ಕುಟುಂಬ ಅದರ ಮೊದಲ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸಿತು

Published On - 1:13 pm, Wed, 11 May 22

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ