AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮಚಂದ್ರನ ಕುರಿತು ವಿವಾದಾತ್ಮಕ ಹೇಳಿಕೆ: ಹಿಂದೂ ಪರ ಕಾರ್ಯಕರ್ತರಿಂದ ಸಾಹಿತಿ ಪ್ರೊ. ಭಗವಾನ್ ವಿರುದ್ಧ ದೂರು

ಹಿರಿಯ ಸಾಹಿತಿ ಪ್ರೊ.ಭಗವಾನ್ ವಿರುದ್ಧ ಜಿಲ್ಲೆಯ ಶ್ರಿರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಶ್ರೀರಾಮಚಂದ್ರನ ಕುರಿತು ವಿವಾದಾತ್ಮಕ ಹೇಳಿಕೆ: ಹಿಂದೂ ಪರ ಕಾರ್ಯಕರ್ತರಿಂದ ಸಾಹಿತಿ ಪ್ರೊ. ಭಗವಾನ್ ವಿರುದ್ಧ ದೂರು
ಹಿರಿಯ ಸಾಹಿತಿ ಪ್ರೊ.ಭಗವಾನ್ ವಿರುದ್ಧ ದೂರು ದಾಖಲು
TV9 Web
| Edited By: |

Updated on:Jan 22, 2023 | 4:02 PM

Share

ಮಂಡ್ಯ: ಹಿರಿಯ ಸಾಹಿತಿ ಪ್ರೊ.ಭಗವಾನ್ (prof. Bhagavan) ವಿರುದ್ಧ ಜಿಲ್ಲೆಯ ಶ್ರಿರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಇತ್ತೀಚೆಗೆ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಾಲಗೆ ಹರಿಬಿಟ್ಟಿದ್ದ ಭಗವಾನ್, ಶ್ರೀರಾಮಚಂದ್ರರ (Sri Ramachandra) ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶ್ರೀರಾಮಚಂದ್ರ ಮದ್ಯಸೇವನೆ ಮಾಡ್ತಿದ್ದ, ಸೀತೆಯನ್ನ ಕಾಡಿಗೆ ಅಟ್ಟಿದ್ದ. ಶ್ರೀರಾಮನನ್ನ ಶಂಭೂಕನನ್ನ ಕೊಲೆಗೈದ ಹಂತಕ ಎಂದು ಬಿಂಬಿಸಿದ್ದಾರೆನ್ನಲಾಗಿದ್ದು, ಇದರಿಂದ ರೊಚ್ಚಿಗೆದ್ದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ತಕ್ಷಣವೇ ಎಫ್​ಐಆರ್ ದಾಖಲಿಸಿಕೊಂಡು ಭಾಗವಾನ್​ರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನನಗೆ ಹಿಂದೂ ದೇವರುಗಳ ಮೇಲೆ ನಂಬಿಕೆ ಇಲ್ಲ, ಸಮಾಜ ಕಲ್ಯಾಣ ಸಚಿವ ವಿವಾದಾತ್ಮಕ ಹೇಳಿಕೆ

ಭಗವಾನ್​ ವಿರುದ್ಧ ಜಾಮೀನು ರಹಿತ ವಾರಂಟ್

ಇತ್ತೀಚೆಗೆ ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎಂಎಫ್​ಸಿ ನ್ಯಾಯಾಲಯ ಭಗವಾನ್​ ವಿರುದ್ಧ ಜಾಮೀನು ರಹಿತ ವಾರಂಟ್​ ಹೊರಡಿಸಲಾಗಿತ್ತು. ಭಗವಾನ್​ ಅವರು ರಾಮ ಮಂದಿರ ಏಕೆ ಬೇಡ ಎಂಬ ತಮ್ಮ ಕೃತಿಯಲ್ಲಿ ಹಿಂದೂ ಧರ್ಮಕ್ಕೆ ಧಕ್ಕೆ ತರುವ ವಿಚಾರಗಳನ್ನು ಬರೆದಿದ್ದಾರೆ ಎಂದು ಆರೋ ಪಿಸಲಾಗಿತ್ತು. ಮಹಾಬಲೇಶ್ದವರ ಎಂಬುವವರು ಇವರ ವಿರುದ್ಧ ಖಾಸಗಿ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:22 pm, Sun, 22 January 23