AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕನಿಗೆ ಮನಬಂದಂತೆ ಥಳಿಸಿ ಅವಾಚ್ಯ ಶಬ್ಧಗಳಿಂದ ನಿಂದನೆ, ವಿಡಿಯೋ ವೈರಲ್: ಪೇದೆ ಸಸ್ಪೆಂಡ್

ಮಂಡ್ಯದಲ್ಲಿ ಪೊಲೀಸ್ ಪೇದೆಯೊಬ್ಬ ಆಟೋ ಚಾಲಕನ ಮೇಲೆ ಮನಬಂದಂತೆ ಹಲ್ಲೆ ಮಾಡಿ ಅವಾಚ್ಯ ಶಬ್ಧವಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಹಿರಿಯ ಅಧಿಕಾರಿಗಳು ಕಾನ್ಸ್​ಟೇಬಲ್​ ವಿರುದ್ಧ ಕ್ರಮಕೈಗೊಂಡಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: Jun 01, 2023 | 10:32 AM

Share

ಮಂಡ್ಯ: ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬನ (Auto Driver) ಮೇಲೆ ಪೊಲೀಸ್‌ ಕಾನ್ಸ್‌ಟೇಬಲ್‌ (Police constable) ಹಲ್ಲೆ ಮಾಡಿರುವ ಘಟನೆ ಮಂಡ್ಯ (Mandya) ನಗರದಲ್ಲಿ ಮಂಗಳವಾರ ನಡೆದಿದ್ದು ತಡವಾಗಿದೆ ಬೆಳಕಿಗೆ ಬಂದಿದೆ. ಪೊಲೀಸಪ್ಪನ ದರ್ಪ ತೋರಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. ಘಟನೆಯ ವೀಡಿಯೋ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಕೂಡಲೇ ಕೂಡಲೇ ಪೇದೆಯನ್ನು ಕೆಲಸದಿಂದ ಅಮಾನತು ಮಾಡಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ: ಮದ್ಯಸೇವಿಸಿ ಆಪರೇಷನ್ ಮಾಡಲು ಬಂದ ಡಾಕ್ಟರ್, ಶಸ್ತ್ರಚಿಕಿತ್ಸೆ ಸಿದ್ಧತೆ ,ಮಾಡಿಕೊಳ್ಳುವ ವೇಳೆ ಕುಸಿದು ಬಿದ್ದ

ಮಂಡ್ಯ ಜಿಲ್ಲಾಸ್ಪತ್ರೆಯ ಎದುರು ಆಟೋ ಚಾಲಕ ಮತ್ತು ಪೊಲೀಸರು ತೆರಳುತ್ತಿದ್ದ ಬೈಕ್‌ ನಡುವೆ ಅಪಘಾತವಾಗಿದೆ. ಪೊಲೀಸ್‌ ಪೇದೆ ರಸ್ತೆಗೆ ಬಿದ್ದು, ಕಾಲಿಗೆ ಸಣ್ಣ ಪೆಟ್ಟಾಗಿದೆ. ಸ್ಥಳೀಯರು ಪೇದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಆಟೋ ಚಾಲಕನಿಗೆ ಹೇಳಿದ್ದಾರೆ. ಅದರಂತೆ ಚಾಲಕ ಪೇದೆಯನ್ನು ಆಸ್ಪತ್ರೆಗೆ ಹೋಗೋಣ ಬನ್ನಿ ಎಂದು ಕರೆದಿದ್ದಾರೆ. ಆತ ಕರೆದಾಗ ಸಿಟ್ಟಿಗೆದ್ದ ಪೇದೆ, ಚಾಲಕನ ಕಪಾಳಕ್ಕೆ ಹೊಡೆದು, ಹೊಟ್ಟೆಗೆ ಗುದ್ದಿದ್ದಾರೆ.

ಮಂಡ್ಯ ಸಂಚಾರಿ ಪೊಲೀಸ್ ಕಾನ್ಸ್ ಟೇಬಲ್ ಮಹೇಂದ್ರ ಹಲ್ಲೆ ಎನ್ನುವರೇ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿರುವುದಾಗಿ ತಿಳಿದುಬಂದಿದೆ. ತಪ್ಪಾಯ್ತು ಬಿಡಿ ಸಾರ್ ಎಂದರು ಜರಗದ ಪೊಲೀಸಪ್ಪ ಮನಸ್ಸು, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೇ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಆಟೋ ಚಾಲಕನಾಗಲಿ, ಪೊಲೀಸಾಗಲಿ ಯಾವುದೇ ದೂರು ದಾಖಲಿಸಿಲ್ಲ

ಮಾತ್ರವಲ್ಲದೆ, ಪೊಲೀಸ್‌ ಠಾಣೆಗೆ ಬರುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಚಾಲಕ ಆಟೋ ಹತ್ತಿದ ಬಳಿಕ ಮತ್ತೆ ಹಲ್ಲೆ ಮಾಡಿದ್ದಾರೆ. ಘಟನೆಯನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಕಷ್ಟ ಆಕ್ರೋಶಗಳು ವ್ಯಕ್ತವಾಗಿದ್ದು, ಪೊಲೀಸ್ ಕಾನ್ಸ್​ಟೇಬಲ್​ನ ದರ್ಪವನ್ನು ಖಂಡಿಸಿದ್ದಾರೆ. ಅಲ್ಲದೇ ಆತನ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್