AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಎಸ್​ಪಿ ಸೇರಿ ಕೆಲ ಪೊಲೀಸ್​ ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್! ಎಎಸ್​ಪಿಗೆ ಆಡಳಿತದ ಹೊಣೆ

ಹಿರಿಯ ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸಿಬ್ಬಂದಿಯಲ್ಲಿ ಕೊರೊನಾ ಆತಂಕ ಮನೆ ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ತಗುಲಿರುವ ಹಿನ್ನೆಲೆ, ಮೈಸೂರು ಜಿಲ್ಲಾ ಎಎಸ್​ಪಿಗೆ ಮಂಡ್ಯ ಆಡಳಿತದ ಹೊಣೆ ನೀಡಲಾಗಿದೆ.

ಮಂಡ್ಯ ಎಸ್​ಪಿ ಸೇರಿ ಕೆಲ ಪೊಲೀಸ್​ ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್! ಎಎಸ್​ಪಿಗೆ ಆಡಳಿತದ ಹೊಣೆ
ಮಂಡ್ಯ ಎಸ್​ಪಿ ಯತೀಶ್
TV9 Web
| Edited By: sandhya thejappa|

Updated on:Jan 08, 2022 | 1:33 PM

Share

ಮಂಡ್ಯ: ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಕೊರೊನಾ (Coronavirus) ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಸ್ವತಃ ಹೋಂ ಐಸೋಲೇಷನ್​ನಲ್ಲಿದ್ದಾರೆ. ಎಸ್​ಪಿ ಎನ್ ಯತೀಶ್, ಎಎಸ್​ಪಿ ಧನಂಜಯ್, ಮಂಡ್ಯ ಡಿವೈಎಸ್​​ಪಿ ಮಂಜುನಾಥ್, ನಾಗಮಂಗಲ, ಮಳವಳ್ಳಿ ಡಿವೈಎಸ್​ಪಿ, ನಾಗಮಂಗಲ ಗ್ರಾಮಾಂತರ ಸಿಪಿಐ, ಬೆಳ್ಳೂರು ಪಿಎಸ್ ಸೇರಿದಂತೆ ಹಲವರು ಹೋಂ ಐಸೋಲೇಷನ್ ಆಗಿದ್ದಾರೆ.

ಕೆಲವರು ಪರೀಕ್ಷೆ ಮಾಡಿಸಿ ಹೋಂ ಐಸೋಲೇಷನ್​ನಲ್ಲಿದ್ದರೆ, ಇನ್ನು ಕೆಲವರು ಸೋಂಕಿನ ಲಕ್ಷಣ ಇದ್ದರೂ ಪರೀಕ್ಷೆ ಮಾಡಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತೀಚೆಗೆ ಮಂಡ್ಯ ಡಿಎಆರ್ ಆವರಣದಲ್ಲಿ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನಡೆದಿತ್ತು. ಕ್ರೀಡಾಕೂಟದ ಬಳಿಕ ಯುವ ಜನೋತ್ಸವದ ಭದ್ರತೆಯಲ್ಲಿ ಪೊಲೀಸರು ಇದ್ದರು. ಭದ್ರತೆಯಲ್ಲಿದ್ದ ಪೊಲೀಸ್ ಅಧಿಕಾರಿಗೆ ಇದೀಗ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹಿರಿಯ ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸಿಬ್ಬಂದಿಯಲ್ಲಿ ಕೊರೊನಾ ಆತಂಕ ಮನೆ ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ತಗುಲಿರುವ ಹಿನ್ನೆಲೆ, ಮೈಸೂರು ಜಿಲ್ಲಾ ಎಎಸ್​ಪಿಗೆ ಮಂಡ್ಯ ಆಡಳಿತದ ಹೊಣೆ ನೀಡಲಾಗಿದೆ ಅಂತ ಪೊಲೀಸ್ ಇಲಾಖೆ ಉನ್ನತ ಮೂಲಗಳಿಂದ ಟಿವಿ9ಗೆ ಮಾಹಿತಿ ಲಭ್ಯವಾಗಿದೆ.

15 ಭಕ್ತರಿಗೆ ಕೊರೊನಾ ಸೋಂಕು ಓಂ ಶಕ್ತಿಗೆ ಹೋಗಿ ಬಂದಿದ್ದ 15 ಭಕ್ತರಿಗೆ ಕೊರೊನಾ ಸೋಂಕು ತಗುಲಿದೆ. ಮಂಡ್ಯ ತಾಲೂಕಿನ ಹೊನ್ನಾಯಕನಹಳ್ಳಿ 15 ಜನರಿಗೆ ಸೋಂಕು ದೃಢಪಟ್ಟಿದೆ. ಮಂಡ್ಯದ ಕಲ್ಯಾಣ ಮಂಟಪದಲ್ಲಿ ಟೆಸ್ಟ್ ವೇಳೆ ಸೋಂಕಿರುವುದು ತಿಳಿದುಬಂದಿದೆ.

ಮಾಸ್ಕ್ ಹಾಕದಿದ್ರೆ ಬಿಳುತ್ತೆ ದಂಡ ಸಕ್ಕರೆ ನಾಡು ಮಂಡ್ಯದಲ್ಲಿ ಮಾಸ್ಕ್ ಹಾಕದಿರುವವರಿಗೆ ಪೊಲೀಸರು ದಂಡ ಹಾಕುತ್ತಿದ್ದಾರೆ. ಹೊಸಹಳ್ಳಿ ಸರ್ಕಲ್ ಬಳಿ ಪೋಲಿಸರು ದಂಡ ಹಾಕುತ್ತಿದ್ದಾರೆ.

ಇದನ್ನೂ ಓದಿ

ನೀವು ಬೇರೆ ಬೇರೆ ಭಾಷೆಯಲ್ಲಿ ಮಾತನಾಡಿದರೂ ಶ್ವಾನಗಳು ಅರ್ಥ ಮಾಡಿಕೊಳ್ಳುತ್ತವೆ; ಅಧ್ಯಯನದಲ್ಲಿ ಅಚ್ಚರಿಯ ಮಾಹಿತಿ ಬಹಿರಂಗ

ವಿದ್ಯಾಗಮ ಜಾರಿಗೆ ಮುಂದಾದ ಕರ್ನಾಟಕ ಸರ್ಕಾರ; ಶಿಕ್ಷಣ ಅಧಿಕಾರಿಗಳಿಗೆ ಸೂಚನೆ

Published On - 1:28 pm, Sat, 8 January 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು