AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಎಸ್​ಪಿ ಸೇರಿ ಕೆಲ ಪೊಲೀಸ್​ ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್! ಎಎಸ್​ಪಿಗೆ ಆಡಳಿತದ ಹೊಣೆ

ಹಿರಿಯ ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸಿಬ್ಬಂದಿಯಲ್ಲಿ ಕೊರೊನಾ ಆತಂಕ ಮನೆ ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ತಗುಲಿರುವ ಹಿನ್ನೆಲೆ, ಮೈಸೂರು ಜಿಲ್ಲಾ ಎಎಸ್​ಪಿಗೆ ಮಂಡ್ಯ ಆಡಳಿತದ ಹೊಣೆ ನೀಡಲಾಗಿದೆ.

ಮಂಡ್ಯ ಎಸ್​ಪಿ ಸೇರಿ ಕೆಲ ಪೊಲೀಸ್​ ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್! ಎಎಸ್​ಪಿಗೆ ಆಡಳಿತದ ಹೊಣೆ
ಮಂಡ್ಯ ಎಸ್​ಪಿ ಯತೀಶ್
TV9 Web
| Edited By: |

Updated on:Jan 08, 2022 | 1:33 PM

Share

ಮಂಡ್ಯ: ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಕೊರೊನಾ (Coronavirus) ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಸ್ವತಃ ಹೋಂ ಐಸೋಲೇಷನ್​ನಲ್ಲಿದ್ದಾರೆ. ಎಸ್​ಪಿ ಎನ್ ಯತೀಶ್, ಎಎಸ್​ಪಿ ಧನಂಜಯ್, ಮಂಡ್ಯ ಡಿವೈಎಸ್​​ಪಿ ಮಂಜುನಾಥ್, ನಾಗಮಂಗಲ, ಮಳವಳ್ಳಿ ಡಿವೈಎಸ್​ಪಿ, ನಾಗಮಂಗಲ ಗ್ರಾಮಾಂತರ ಸಿಪಿಐ, ಬೆಳ್ಳೂರು ಪಿಎಸ್ ಸೇರಿದಂತೆ ಹಲವರು ಹೋಂ ಐಸೋಲೇಷನ್ ಆಗಿದ್ದಾರೆ.

ಕೆಲವರು ಪರೀಕ್ಷೆ ಮಾಡಿಸಿ ಹೋಂ ಐಸೋಲೇಷನ್​ನಲ್ಲಿದ್ದರೆ, ಇನ್ನು ಕೆಲವರು ಸೋಂಕಿನ ಲಕ್ಷಣ ಇದ್ದರೂ ಪರೀಕ್ಷೆ ಮಾಡಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತೀಚೆಗೆ ಮಂಡ್ಯ ಡಿಎಆರ್ ಆವರಣದಲ್ಲಿ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನಡೆದಿತ್ತು. ಕ್ರೀಡಾಕೂಟದ ಬಳಿಕ ಯುವ ಜನೋತ್ಸವದ ಭದ್ರತೆಯಲ್ಲಿ ಪೊಲೀಸರು ಇದ್ದರು. ಭದ್ರತೆಯಲ್ಲಿದ್ದ ಪೊಲೀಸ್ ಅಧಿಕಾರಿಗೆ ಇದೀಗ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹಿರಿಯ ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸಿಬ್ಬಂದಿಯಲ್ಲಿ ಕೊರೊನಾ ಆತಂಕ ಮನೆ ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ತಗುಲಿರುವ ಹಿನ್ನೆಲೆ, ಮೈಸೂರು ಜಿಲ್ಲಾ ಎಎಸ್​ಪಿಗೆ ಮಂಡ್ಯ ಆಡಳಿತದ ಹೊಣೆ ನೀಡಲಾಗಿದೆ ಅಂತ ಪೊಲೀಸ್ ಇಲಾಖೆ ಉನ್ನತ ಮೂಲಗಳಿಂದ ಟಿವಿ9ಗೆ ಮಾಹಿತಿ ಲಭ್ಯವಾಗಿದೆ.

15 ಭಕ್ತರಿಗೆ ಕೊರೊನಾ ಸೋಂಕು ಓಂ ಶಕ್ತಿಗೆ ಹೋಗಿ ಬಂದಿದ್ದ 15 ಭಕ್ತರಿಗೆ ಕೊರೊನಾ ಸೋಂಕು ತಗುಲಿದೆ. ಮಂಡ್ಯ ತಾಲೂಕಿನ ಹೊನ್ನಾಯಕನಹಳ್ಳಿ 15 ಜನರಿಗೆ ಸೋಂಕು ದೃಢಪಟ್ಟಿದೆ. ಮಂಡ್ಯದ ಕಲ್ಯಾಣ ಮಂಟಪದಲ್ಲಿ ಟೆಸ್ಟ್ ವೇಳೆ ಸೋಂಕಿರುವುದು ತಿಳಿದುಬಂದಿದೆ.

ಮಾಸ್ಕ್ ಹಾಕದಿದ್ರೆ ಬಿಳುತ್ತೆ ದಂಡ ಸಕ್ಕರೆ ನಾಡು ಮಂಡ್ಯದಲ್ಲಿ ಮಾಸ್ಕ್ ಹಾಕದಿರುವವರಿಗೆ ಪೊಲೀಸರು ದಂಡ ಹಾಕುತ್ತಿದ್ದಾರೆ. ಹೊಸಹಳ್ಳಿ ಸರ್ಕಲ್ ಬಳಿ ಪೋಲಿಸರು ದಂಡ ಹಾಕುತ್ತಿದ್ದಾರೆ.

ಇದನ್ನೂ ಓದಿ

ನೀವು ಬೇರೆ ಬೇರೆ ಭಾಷೆಯಲ್ಲಿ ಮಾತನಾಡಿದರೂ ಶ್ವಾನಗಳು ಅರ್ಥ ಮಾಡಿಕೊಳ್ಳುತ್ತವೆ; ಅಧ್ಯಯನದಲ್ಲಿ ಅಚ್ಚರಿಯ ಮಾಹಿತಿ ಬಹಿರಂಗ

ವಿದ್ಯಾಗಮ ಜಾರಿಗೆ ಮುಂದಾದ ಕರ್ನಾಟಕ ಸರ್ಕಾರ; ಶಿಕ್ಷಣ ಅಧಿಕಾರಿಗಳಿಗೆ ಸೂಚನೆ

Published On - 1:28 pm, Sat, 8 January 22

Follow Us
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ