AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ, ಮಂಡ್ಯದಲ್ಲಿ ಕೊರೊನಾ ಹೆಚ್ಚಳ; ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ರೇಣುಕಾಚಾರ್ಯ

ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ತಮಿಳುನಾಡಿನ ಓಂ ಶಕ್ತಿಗೆ ಹೋಗಿ ವಾಪಸಾದ ನಗರದ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಶಿವಮೊಗ್ಗ, ಮಂಡ್ಯದಲ್ಲಿ ಕೊರೊನಾ ಹೆಚ್ಚಳ; ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ರೇಣುಕಾಚಾರ್ಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 09, 2022 | 3:52 PM

Share

ಮಂಡ್ಯ: ಓಂ ಶಕ್ತಿ ಯಾತ್ರೆ ಮುಗಿಸಿ ಬಂದಿದ್ದ ತಾಲೂಕಿನ ಭಕ್ತರನ್ನು ಕೊವಿಡ್19 (Covid19) ಪರೀಕ್ಷೆ ಮಾಡಿಸಿ ಕೊವಿಡ್​ ಸೆಂಟರ್​ನಲ್ಲಿ ಇರಿಸಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ 500ಕ್ಕು ಹೆಚ್ಚು ಭಕ್ತರನ್ನು ಟೆಸ್ಟ್​ ಮಾಡಲಾಗಿದೆ. ಈ ಮಧ್ಯೆ, ಕೊವಿಡ್​ ಸೆಂಟರ್​​ನಲ್ಲಿ ಇರುವ ಸೋಂಕಿತರು (Coronavirus) ಭಜನೆ ಮಾಡಿದ್ದಾರೆ.

ಮಂಡ್ಯ ಪೊಲೀಸರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಂದು ಮತ್ತೆ ಒಬ್ಬರು ಸಬ್ ಇನ್ಸ್ಪೆಕ್ಟರ್ ಹಾಗೂ 5 ಮಂದಿ ಪೋಲೀಸರಿಗೆ ಕೊರೊನಾ ಸೋಂಕು ದೃಢವಾಗಿದೆ. ಮದ್ದೂರು ತಾಲ್ಲೂಕಿನ ಕೆಸ್ತೂರು ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. ನಿನ್ನೆ ಮಂಡ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಹೋಂ ಐಸೋಲೇಷನ್ ನಲ್ಲಿ ಇದ್ದಾರೆ.

ಎಸ್​ಪಿ ಎನ್. ಯತೀಶ್, ಎಎಸ್​ಪಿ ಧನಂಜಯ್, ಮಂಡ್ಯ ಡಿವೈಎಸ್​​ಪಿ ಮಂಜುನಾಥ್, ನಾಗಮಂಗಲ, ಮಳವಳ್ಳಿ ಡಿವೈಎಸ್​ಪಿ, ನಾಗಮಂಗಲ ಗ್ರಾಮಾಂತರ ಸಿಪಿಐ, ಬೆಳ್ಳೂರು ಪಿಎಸ್​ಐ ಸೇರಿದಂತೆ ಹಲವರು ಹೋಂ ಐಸೋಲೇಷನ್​ನಲ್ಲಿ ಇದ್ದಾರೆ. ಹಿರಿಯ ಅಧಿಕಾರಿಗಳಿಗೆ ಕೊರೋನಾ ಸೋಂಕು ಧೃಡಪಟ್ಟ ಹಿನ್ನೆಲೆ ಕೆಸ್ತೂರು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲು ಗ್ರಾಮಸ್ಥರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ದೃಢ ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ತಮಿಳುನಾಡಿನ ಓಂ ಶಕ್ತಿಗೆ ಹೋಗಿ ವಾಪಸಾದ ನಗರದ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಜನವರಿ 5ರಂದು 5,000ಕ್ಕೂ ಹೆಚ್ಚು ಜನರು ಯಾತ್ರೆಯಿಂದ ಬಂದಿದ್ದರು.

ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿದ ಎಂ.ಪಿ.ರೇಣುಕಾಚಾರ್ಯ ವೀಕೆಂಡ್​ ಕರ್ಫ್ಯೂ ಜಾರಿ ಇದ್ರೂ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕ್ರಿಕೆಟ್​ ಟೂರ್ನಿಗೆ ಚಾಲನೆ ನೀಡಿದ್ದಾರೆ. ಹೊನ್ನಾಳಿ ತಾಲೂಕಿನ ಘಂಟ್ಯಾಪುರದಲ್ಲಿ ಕ್ರಿಕೆಟ್​ ಟೂರ್ನಿಗೆ ಚಾಲನೆ ಕೊಟ್ಟಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರೂ ಆಗಿರುವ ರೇಣುಕಾಚಾರ್ಯ ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ! ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.10.21ಕ್ಕೆ ಏರಿಕೆ

ಇದನ್ನೂ ಓದಿ: ಹಾಸನ: ಕೊರೊನಾ ಸೋಂಕು ಉಲ್ಬಣ; 23 ಪೊಲೀಸರಿಗೆ ಕೊರೊನಾ ಸೋಂಕು ದೃಢ

Published On - 3:52 pm, Sun, 9 January 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್