AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ, ಮಂಡ್ಯದಲ್ಲಿ ಕೊರೊನಾ ಹೆಚ್ಚಳ; ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ರೇಣುಕಾಚಾರ್ಯ

ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ತಮಿಳುನಾಡಿನ ಓಂ ಶಕ್ತಿಗೆ ಹೋಗಿ ವಾಪಸಾದ ನಗರದ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಶಿವಮೊಗ್ಗ, ಮಂಡ್ಯದಲ್ಲಿ ಕೊರೊನಾ ಹೆಚ್ಚಳ; ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ರೇಣುಕಾಚಾರ್ಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 09, 2022 | 3:52 PM

Share

ಮಂಡ್ಯ: ಓಂ ಶಕ್ತಿ ಯಾತ್ರೆ ಮುಗಿಸಿ ಬಂದಿದ್ದ ತಾಲೂಕಿನ ಭಕ್ತರನ್ನು ಕೊವಿಡ್19 (Covid19) ಪರೀಕ್ಷೆ ಮಾಡಿಸಿ ಕೊವಿಡ್​ ಸೆಂಟರ್​ನಲ್ಲಿ ಇರಿಸಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ 500ಕ್ಕು ಹೆಚ್ಚು ಭಕ್ತರನ್ನು ಟೆಸ್ಟ್​ ಮಾಡಲಾಗಿದೆ. ಈ ಮಧ್ಯೆ, ಕೊವಿಡ್​ ಸೆಂಟರ್​​ನಲ್ಲಿ ಇರುವ ಸೋಂಕಿತರು (Coronavirus) ಭಜನೆ ಮಾಡಿದ್ದಾರೆ.

ಮಂಡ್ಯ ಪೊಲೀಸರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಂದು ಮತ್ತೆ ಒಬ್ಬರು ಸಬ್ ಇನ್ಸ್ಪೆಕ್ಟರ್ ಹಾಗೂ 5 ಮಂದಿ ಪೋಲೀಸರಿಗೆ ಕೊರೊನಾ ಸೋಂಕು ದೃಢವಾಗಿದೆ. ಮದ್ದೂರು ತಾಲ್ಲೂಕಿನ ಕೆಸ್ತೂರು ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. ನಿನ್ನೆ ಮಂಡ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಹೋಂ ಐಸೋಲೇಷನ್ ನಲ್ಲಿ ಇದ್ದಾರೆ.

ಎಸ್​ಪಿ ಎನ್. ಯತೀಶ್, ಎಎಸ್​ಪಿ ಧನಂಜಯ್, ಮಂಡ್ಯ ಡಿವೈಎಸ್​​ಪಿ ಮಂಜುನಾಥ್, ನಾಗಮಂಗಲ, ಮಳವಳ್ಳಿ ಡಿವೈಎಸ್​ಪಿ, ನಾಗಮಂಗಲ ಗ್ರಾಮಾಂತರ ಸಿಪಿಐ, ಬೆಳ್ಳೂರು ಪಿಎಸ್​ಐ ಸೇರಿದಂತೆ ಹಲವರು ಹೋಂ ಐಸೋಲೇಷನ್​ನಲ್ಲಿ ಇದ್ದಾರೆ. ಹಿರಿಯ ಅಧಿಕಾರಿಗಳಿಗೆ ಕೊರೋನಾ ಸೋಂಕು ಧೃಡಪಟ್ಟ ಹಿನ್ನೆಲೆ ಕೆಸ್ತೂರು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲು ಗ್ರಾಮಸ್ಥರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ದೃಢ ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ತಮಿಳುನಾಡಿನ ಓಂ ಶಕ್ತಿಗೆ ಹೋಗಿ ವಾಪಸಾದ ನಗರದ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಜನವರಿ 5ರಂದು 5,000ಕ್ಕೂ ಹೆಚ್ಚು ಜನರು ಯಾತ್ರೆಯಿಂದ ಬಂದಿದ್ದರು.

ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿದ ಎಂ.ಪಿ.ರೇಣುಕಾಚಾರ್ಯ ವೀಕೆಂಡ್​ ಕರ್ಫ್ಯೂ ಜಾರಿ ಇದ್ರೂ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕ್ರಿಕೆಟ್​ ಟೂರ್ನಿಗೆ ಚಾಲನೆ ನೀಡಿದ್ದಾರೆ. ಹೊನ್ನಾಳಿ ತಾಲೂಕಿನ ಘಂಟ್ಯಾಪುರದಲ್ಲಿ ಕ್ರಿಕೆಟ್​ ಟೂರ್ನಿಗೆ ಚಾಲನೆ ಕೊಟ್ಟಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರೂ ಆಗಿರುವ ರೇಣುಕಾಚಾರ್ಯ ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ! ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.10.21ಕ್ಕೆ ಏರಿಕೆ

ಇದನ್ನೂ ಓದಿ: ಹಾಸನ: ಕೊರೊನಾ ಸೋಂಕು ಉಲ್ಬಣ; 23 ಪೊಲೀಸರಿಗೆ ಕೊರೊನಾ ಸೋಂಕು ದೃಢ

Published On - 3:52 pm, Sun, 9 January 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?