AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ, ಮಂಡ್ಯದಲ್ಲಿ ಕೊರೊನಾ ಹೆಚ್ಚಳ; ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ರೇಣುಕಾಚಾರ್ಯ

ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ತಮಿಳುನಾಡಿನ ಓಂ ಶಕ್ತಿಗೆ ಹೋಗಿ ವಾಪಸಾದ ನಗರದ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಶಿವಮೊಗ್ಗ, ಮಂಡ್ಯದಲ್ಲಿ ಕೊರೊನಾ ಹೆಚ್ಚಳ; ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ರೇಣುಕಾಚಾರ್ಯ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Jan 09, 2022 | 3:52 PM

Share

ಮಂಡ್ಯ: ಓಂ ಶಕ್ತಿ ಯಾತ್ರೆ ಮುಗಿಸಿ ಬಂದಿದ್ದ ತಾಲೂಕಿನ ಭಕ್ತರನ್ನು ಕೊವಿಡ್19 (Covid19) ಪರೀಕ್ಷೆ ಮಾಡಿಸಿ ಕೊವಿಡ್​ ಸೆಂಟರ್​ನಲ್ಲಿ ಇರಿಸಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಕೊವಿಡ್ ಸೆಂಟರ್​ನಲ್ಲಿ 500ಕ್ಕು ಹೆಚ್ಚು ಭಕ್ತರನ್ನು ಟೆಸ್ಟ್​ ಮಾಡಲಾಗಿದೆ. ಈ ಮಧ್ಯೆ, ಕೊವಿಡ್​ ಸೆಂಟರ್​​ನಲ್ಲಿ ಇರುವ ಸೋಂಕಿತರು (Coronavirus) ಭಜನೆ ಮಾಡಿದ್ದಾರೆ.

ಮಂಡ್ಯ ಪೊಲೀಸರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಂದು ಮತ್ತೆ ಒಬ್ಬರು ಸಬ್ ಇನ್ಸ್ಪೆಕ್ಟರ್ ಹಾಗೂ 5 ಮಂದಿ ಪೋಲೀಸರಿಗೆ ಕೊರೊನಾ ಸೋಂಕು ದೃಢವಾಗಿದೆ. ಮದ್ದೂರು ತಾಲ್ಲೂಕಿನ ಕೆಸ್ತೂರು ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. ನಿನ್ನೆ ಮಂಡ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಹೋಂ ಐಸೋಲೇಷನ್ ನಲ್ಲಿ ಇದ್ದಾರೆ.

ಎಸ್​ಪಿ ಎನ್. ಯತೀಶ್, ಎಎಸ್​ಪಿ ಧನಂಜಯ್, ಮಂಡ್ಯ ಡಿವೈಎಸ್​​ಪಿ ಮಂಜುನಾಥ್, ನಾಗಮಂಗಲ, ಮಳವಳ್ಳಿ ಡಿವೈಎಸ್​ಪಿ, ನಾಗಮಂಗಲ ಗ್ರಾಮಾಂತರ ಸಿಪಿಐ, ಬೆಳ್ಳೂರು ಪಿಎಸ್​ಐ ಸೇರಿದಂತೆ ಹಲವರು ಹೋಂ ಐಸೋಲೇಷನ್​ನಲ್ಲಿ ಇದ್ದಾರೆ. ಹಿರಿಯ ಅಧಿಕಾರಿಗಳಿಗೆ ಕೊರೋನಾ ಸೋಂಕು ಧೃಡಪಟ್ಟ ಹಿನ್ನೆಲೆ ಕೆಸ್ತೂರು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲು ಗ್ರಾಮಸ್ಥರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ದೃಢ ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ತಮಿಳುನಾಡಿನ ಓಂ ಶಕ್ತಿಗೆ ಹೋಗಿ ವಾಪಸಾದ ನಗರದ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಜನವರಿ 5ರಂದು 5,000ಕ್ಕೂ ಹೆಚ್ಚು ಜನರು ಯಾತ್ರೆಯಿಂದ ಬಂದಿದ್ದರು.

ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿದ ಎಂ.ಪಿ.ರೇಣುಕಾಚಾರ್ಯ ವೀಕೆಂಡ್​ ಕರ್ಫ್ಯೂ ಜಾರಿ ಇದ್ರೂ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕ್ರಿಕೆಟ್​ ಟೂರ್ನಿಗೆ ಚಾಲನೆ ನೀಡಿದ್ದಾರೆ. ಹೊನ್ನಾಳಿ ತಾಲೂಕಿನ ಘಂಟ್ಯಾಪುರದಲ್ಲಿ ಕ್ರಿಕೆಟ್​ ಟೂರ್ನಿಗೆ ಚಾಲನೆ ಕೊಟ್ಟಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರೂ ಆಗಿರುವ ರೇಣುಕಾಚಾರ್ಯ ವೀಕೆಂಡ್​ ಕರ್ಫ್ಯೂ ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ! ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.10.21ಕ್ಕೆ ಏರಿಕೆ

ಇದನ್ನೂ ಓದಿ: ಹಾಸನ: ಕೊರೊನಾ ಸೋಂಕು ಉಲ್ಬಣ; 23 ಪೊಲೀಸರಿಗೆ ಕೊರೊನಾ ಸೋಂಕು ದೃಢ

Published On - 3:52 pm, Sun, 9 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ