AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ; ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ ಹಿನ್ನೆಲೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪ್ರವಾಸಿ ತಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ; ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಮುತ್ತತ್ತಿ
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು|

Updated on: Jul 27, 2024 | 10:02 AM

Share

ಮಂಡ್ಯ, ಜುಲೈ.27: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ (Karnataka Rain) ಹಿನ್ನೆಲೆ ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ (Muthathi) ಪ್ರವಾಸಿ ತಾಣದಲ್ಲಿ ಅಪಾಯ ಹೆಚ್ಚಾಗಿತ್ತು. ಸದ್ಯ ಈಗ ಮಳವಳ್ಳಿ ತಹಶೀಲ್ದರ್ ಕೆ.ಎನ್. ಲೋಕೇಶ್ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಸಿ ತಾಣ ಮುತ್ತತ್ತಿ ಕಾವೇರಿ‌ ನದಿ ತಟದಲ್ಲಿ ಇದೆ. ಈ ಪ್ರವಾಸಿ ತಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈಗಾಗಲೇ ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ 30 ಮಂದಿ ಮೃತಪಟ್ಟಿರುವ ಬಗ್ಗೆ ವರದಿಗಳಾಗಿವೆ.

ಮಳವಳ್ಳಿ ತಾಲೂಕು, ಹಲಗೂರು ಹೋಬಳಿಯ ಮುತ್ತತ್ತಿ ರಸ್ತೆಯ ಗಾಣಾಳು ಜಲಪಾತದ ಬಳಿ ಸಾವಿನ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಕೆಆರ್‌ಎಸ್‌ ಅಣೆಕಟ್ಟೆ ಭರ್ತಿಯಾದ ಹಿನ್ನೆಲೆಯಲ್ಲಿ 50 ಸಾವಿರ ಕ್ಯುಸೆಕ್‌ವರೆಗೂ ನೀರನ್ನು ನದಿಗೆ ಬಿಡುತ್ತಿರುವ ಕಾರಣ, ಕಾವೇರಿ ನದಿ ದಂಡೆಯಲ್ಲಿ ಬರುವ ಪ್ರವಾಸಿ ತಾಣಗಳಿಗೆ ಪೊಲೀಸ್‌ ಮತ್ತು ಗೃಹ ರಕ್ಷಕ ಸಿಬ್ಬಂದಿ ನಿಯೋಜಿಸಿ, ಪ್ರವಾಸಿಗರನ್ನು ನಿಯಂತ್ರಿಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ನವಿ ಮುಂಬೈನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಹಲವಾರು ಮಂದಿ ಸಿಲುಕಿರುವ ಶಂಕೆ

ಮತ್ತೊಂದೆಡೆ ರಂಗನತಿಟ್ಟು ಪಕ್ಷಿಧಾಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಬೋಟಿಂಗ್ ವ್ಯವಸ್ಥೆ ಬಂದ್ ಮಾಡಲಾಗಿದ್ದು, ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಹೇಮಾವತಿ ನದಿ ಅಬ್ಬರದಿಂದಾಗಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯ ಚಿಕ್ಕಮಂದಗೆರೆಯಲ್ಲಿ ನೂರಾರು ಎಕರೆ ಜಮೀನು ಜಲಾವೃತವಾಗಿವೆ.

ಕಬಿನಿ, KRS​ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಿಂದ ಕೊಳ್ಳೆಗಾಲ ತಾಲೂಕಿನ ಹಂಪಾಪುರ, ಮುಳ್ಳೂರು, ಹಳೇ ಅಣಗಳ್ಳಿ, ದಾಸನಪುರ ಸೇರಿ 9 ಗ್ರಾಮಗಳಲ್ಲಿ ನೆರೆ ಭೀತಿ ಸೃಷ್ಟಿಯಾಗಿದೆ. ಇನ್ನು ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೊಳೆ ನರಸೀಪುರ ಪಟ್ಟಣದ ಕುವೆಂಪು ಬಡಾವಣೆಗೆ ನೀರು ನುಗ್ಗಿದ್ದು, 30ಕ್ಕೂ ಹೆಚ್ಚು ಮನೆಗಳು 3ಅಡಿಗೂ ಹೆಚ್ಚು ಮುಳುಗಡೆಯಾಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್