AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ; ಸರ್ಕಾರದ ವಿರುದ್ಧ ರೈತರ ಆಕ್ರೋಶ

ಮಂಡ್ಯದ ರೈತರಿಗೆ ಕಳೆದ 5 ತಿಂಗಳಿಂದ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಆಗಿಲ್ಲ. ಹೀಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಪ್ರೋತ್ಸಾಹ ಧನ ನಂಬಿಕೊಂಡ ರೈತರಿಗೆ ಸರ್ಕಾರ ಬರೆ ಎಳೆದಿದೆ ಎಂದು ಸರ್ಕಾರದ ವಿರುದ್ಧ ರೈತರು, ಕನ್ನಡ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ; ಸರ್ಕಾರದ ವಿರುದ್ಧ ರೈತರ ಆಕ್ರೋಶ
ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ
ಪ್ರಶಾಂತ್​ ಬಿ.
| Edited By: |

Updated on: Jun 13, 2024 | 10:03 AM

Share

ಮಂಡ್ಯ, ಜೂನ್.13: ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ (Congress) ಉಪಯೋಗಿಸಿದ್ದ ಪಂಚ ಗ್ಯಾರಂಟಿ ಯೋಜನೆ ಎಫೆಕ್ಟ್​ನಿಂದಾಗಿ ಮಂಡ್ಯ (Mandya Farmers) ಜಿಲ್ಲೆಯ ಅನ್ನದಾತರು ಸಂಕಷ್ಟ ಎದುರಿಸುವಂತಾಗಿದೆ. ಹೈನುಗಾರಿಕೆ ನಂಬಿಕೊಂಡ ರೈತರಿಗೆ ಕಳೆದ ಐದು ತಿಂಗಳಿಂದ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಆಗದ ಸಮಸ್ಯೆಯಾಗಿದೆ. ಹೈನುಗಾರಿಕೆ ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರ ಕ್ಷೀರಸಿರಿ ಯೋಜನೆ ಅಡಿ ಪ್ರತಿ ಲೀಟರ್​ಗೆ ಐದು ರೂ ಪ್ರೋತ್ಸಾಹ ಧನ ನೀಡುತ್ತಿತ್ತು. ಆದರೆ ಇದುವರೆಗೆ ಐದು ತಿಂಗಳ ಪ್ರೋತ್ಸಾಹ ಧನ ರೈತರ ಕೈಗೆ ಸಿಕ್ಕಿಲ್ಲ. ಹೀಗಾಗಿ ರೈತರು ಅಸಮಾಧಾನ ಹೊರ ಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ಮನ್ ಮುನ್(ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ) ವ್ಯಾಪ್ತಿಯಲ್ಲಿ 67 ಕೋಟಿ 91 ಲಕ್ಷ ರೂ ಬಾಕಿ ಇದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳ ಪ್ರೋತ್ಸಾಹ ಧನ ಬಾಕಿ ಇದೆ. ವಾರದ ಹಿಂದೆ ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಪ್ರೋತ್ಸಾಹ ಧನವನ್ನು ಸರ್ಕಾರ ಬಿಡುಗಡೆ ಮಾಡಿತ್ತು. ಸದ್ಯ ಈಗ ಇನ್ನೂ 5 ತಿಂಗಳ ಪ್ರೋತ್ಸಾಹ ಧನ ಬಾಕಿ ಇದೆ. ಜಿಲ್ಲೆಯಲ್ಲಿ 98 ಸಾವಿರ ರೈತ ಫಲಾನುಭವಿಗಳು ಇದ್ದಾರೆ. ಮೇ ತಿಂಗಳ ಪ್ರೋತ್ಸಾಹ ಧನ ಸೇರಿದರೆ 80 ಕೋಟಿ ಹಣ ಬಾಕಿ ಇದೆ. ಪ್ರತಿ ತಿಂಗಳು ಕ್ಷೀರ ಸಿರಿ ಪೋರ್ಟಲ್ ಮೂಲಕ ಮನ್ ಮುಲ್ ಮಾಹಿತಿ ನೀಡುತ್ತಿದೆ. ಪ್ರೋತ್ಸಾಹ ಧನ ನಂಬಿಕೊಂಡ ರೈತರಿಗೆ ಸರ್ಕಾರ ಬರೆ ಎಳೆದಿದೆ ಎಂದು ಸರ್ಕಾರದ ವಿರುದ್ಧ ರೈತರು, ಕನ್ನಡ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ಇದನ್ನೂ ಓದಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆ: 699 ಮರ ಕಡಿಯುವುದಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಸರ್ಕಾರ ತಾನು ಘೋಷಣೆ ಮಾಡಿದ ಗ್ಯಾರಂಟಿಗಳಿಗೆ ಹಣ ಹೊಂದಿಸುತ್ತಿದೆ. ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹಾಲಿನ ಪ್ರೋತ್ಸಾಹ ಹಣದಿಂದ ದನಗಳಿಗೆ ಮೇವು ಪೂರೈಕೆಗೆ ಅನುಕೂಲ ಆಗುತ್ತಿತ್ತು ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ. ಮಂಡ್ಯ ಒಂದೇ ಅಲ್ಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೆಲ ತಿಂಗಳಿಂದ ಹಾಲಿನ ಪ್ರೋತ್ಸಾಹ ಧನವನ್ನು ರೈತರಿಗೆ ನೀಡಲಾಗುತ್ತಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ