AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ; ಸರ್ಕಾರದ ವಿರುದ್ಧ ರೈತರ ಆಕ್ರೋಶ

ಮಂಡ್ಯದ ರೈತರಿಗೆ ಕಳೆದ 5 ತಿಂಗಳಿಂದ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಆಗಿಲ್ಲ. ಹೀಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಪ್ರೋತ್ಸಾಹ ಧನ ನಂಬಿಕೊಂಡ ರೈತರಿಗೆ ಸರ್ಕಾರ ಬರೆ ಎಳೆದಿದೆ ಎಂದು ಸರ್ಕಾರದ ವಿರುದ್ಧ ರೈತರು, ಕನ್ನಡ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ; ಸರ್ಕಾರದ ವಿರುದ್ಧ ರೈತರ ಆಕ್ರೋಶ
ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on: Jun 13, 2024 | 10:03 AM

ಮಂಡ್ಯ, ಜೂನ್.13: ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ (Congress) ಉಪಯೋಗಿಸಿದ್ದ ಪಂಚ ಗ್ಯಾರಂಟಿ ಯೋಜನೆ ಎಫೆಕ್ಟ್​ನಿಂದಾಗಿ ಮಂಡ್ಯ (Mandya Farmers) ಜಿಲ್ಲೆಯ ಅನ್ನದಾತರು ಸಂಕಷ್ಟ ಎದುರಿಸುವಂತಾಗಿದೆ. ಹೈನುಗಾರಿಕೆ ನಂಬಿಕೊಂಡ ರೈತರಿಗೆ ಕಳೆದ ಐದು ತಿಂಗಳಿಂದ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಆಗದ ಸಮಸ್ಯೆಯಾಗಿದೆ. ಹೈನುಗಾರಿಕೆ ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರ ಕ್ಷೀರಸಿರಿ ಯೋಜನೆ ಅಡಿ ಪ್ರತಿ ಲೀಟರ್​ಗೆ ಐದು ರೂ ಪ್ರೋತ್ಸಾಹ ಧನ ನೀಡುತ್ತಿತ್ತು. ಆದರೆ ಇದುವರೆಗೆ ಐದು ತಿಂಗಳ ಪ್ರೋತ್ಸಾಹ ಧನ ರೈತರ ಕೈಗೆ ಸಿಕ್ಕಿಲ್ಲ. ಹೀಗಾಗಿ ರೈತರು ಅಸಮಾಧಾನ ಹೊರ ಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ಮನ್ ಮುನ್(ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ) ವ್ಯಾಪ್ತಿಯಲ್ಲಿ 67 ಕೋಟಿ 91 ಲಕ್ಷ ರೂ ಬಾಕಿ ಇದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳ ಪ್ರೋತ್ಸಾಹ ಧನ ಬಾಕಿ ಇದೆ. ವಾರದ ಹಿಂದೆ ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಪ್ರೋತ್ಸಾಹ ಧನವನ್ನು ಸರ್ಕಾರ ಬಿಡುಗಡೆ ಮಾಡಿತ್ತು. ಸದ್ಯ ಈಗ ಇನ್ನೂ 5 ತಿಂಗಳ ಪ್ರೋತ್ಸಾಹ ಧನ ಬಾಕಿ ಇದೆ. ಜಿಲ್ಲೆಯಲ್ಲಿ 98 ಸಾವಿರ ರೈತ ಫಲಾನುಭವಿಗಳು ಇದ್ದಾರೆ. ಮೇ ತಿಂಗಳ ಪ್ರೋತ್ಸಾಹ ಧನ ಸೇರಿದರೆ 80 ಕೋಟಿ ಹಣ ಬಾಕಿ ಇದೆ. ಪ್ರತಿ ತಿಂಗಳು ಕ್ಷೀರ ಸಿರಿ ಪೋರ್ಟಲ್ ಮೂಲಕ ಮನ್ ಮುಲ್ ಮಾಹಿತಿ ನೀಡುತ್ತಿದೆ. ಪ್ರೋತ್ಸಾಹ ಧನ ನಂಬಿಕೊಂಡ ರೈತರಿಗೆ ಸರ್ಕಾರ ಬರೆ ಎಳೆದಿದೆ ಎಂದು ಸರ್ಕಾರದ ವಿರುದ್ಧ ರೈತರು, ಕನ್ನಡ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ಇದನ್ನೂ ಓದಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆ: 699 ಮರ ಕಡಿಯುವುದಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಸರ್ಕಾರ ತಾನು ಘೋಷಣೆ ಮಾಡಿದ ಗ್ಯಾರಂಟಿಗಳಿಗೆ ಹಣ ಹೊಂದಿಸುತ್ತಿದೆ. ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹಾಲಿನ ಪ್ರೋತ್ಸಾಹ ಹಣದಿಂದ ದನಗಳಿಗೆ ಮೇವು ಪೂರೈಕೆಗೆ ಅನುಕೂಲ ಆಗುತ್ತಿತ್ತು ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ. ಮಂಡ್ಯ ಒಂದೇ ಅಲ್ಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೆಲ ತಿಂಗಳಿಂದ ಹಾಲಿನ ಪ್ರೋತ್ಸಾಹ ಧನವನ್ನು ರೈತರಿಗೆ ನೀಡಲಾಗುತ್ತಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್