AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾಗೆ ಪ್ರಧಾನಿಯಾಗಲು ಕಲಾಂ ಆಹ್ವಾನಿಸಿದ್ದರು; ಬೇಡ ಎಂದು‌ ಸೋನಿಯಾ ನಿರಾಕರಿಸಿದ್ದರು: ಡಿಕೆ ಶಿವಕುಮಾರ್

ಆರ್ಥಿಕ ತಜ್ಞರಿಗೆ ಪ್ರಧಾನಿ ಹುದ್ದೆ ನೀಡಲು ಬಯಸಿದ್ದರು. ಆ ವೇಳೆ ಮನಮೋಹನ್ ಸಿಂಗ್​ರನ್ನು ಪ್ರಧಾನಿ ಮಾಡಿದರು. ಪಂಚಾಯತ್​ರಾಜ್ ವ್ಯವಸ್ಥೆಗೆ ಕಾಂಗ್ರೆಸ್ ಕೊಡುಗೆ ಅಪಾರ ಎಂದು ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಸೋಮವಾರ ಹೇಳಿಕೆ ನೀಡಿದ್ದಾರೆ.

ಸೋನಿಯಾಗೆ ಪ್ರಧಾನಿಯಾಗಲು ಕಲಾಂ ಆಹ್ವಾನಿಸಿದ್ದರು; ಬೇಡ ಎಂದು‌ ಸೋನಿಯಾ ನಿರಾಕರಿಸಿದ್ದರು: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
TV9 Web
| Edited By: |

Updated on: Dec 06, 2021 | 6:12 PM

Share

ಮಂಡ್ಯ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಪ್ರಧಾನಿಯಾಗಲು ಕಲಾಂ ಆಹ್ವಾನಿಸಿದ್ದರು. ಪ್ರಧಾನಿ ಹುದ್ದೆ ಬೇಡ ಎಂದು‌ ಸೋನಿಯಾ ನಿರಾಕರಿಸಿದ್ದರು. ಈ ದೇಶಕ್ಕಾಗಿ ನನ್ನ ಅತ್ತೆ, ಗಂಡನ್ನು ಕಳೆದುಕೊಂಡಿದ್ದೇನೆ ಎಂದಿದ್ದರು. ಆರ್ಥಿಕ ತಜ್ಞರಿಗೆ ಪ್ರಧಾನಿ ಹುದ್ದೆ ನೀಡಲು ಬಯಸಿದ್ದರು. ಆ ವೇಳೆ ಮನಮೋಹನ್ ಸಿಂಗ್​ರನ್ನು ಪ್ರಧಾನಿ ಮಾಡಿದರು. ಪಂಚಾಯತ್​ರಾಜ್ ವ್ಯವಸ್ಥೆಗೆ ಕಾಂಗ್ರೆಸ್ ಕೊಡುಗೆ ಅಪಾರ ಎಂದು ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಸೋಮವಾರ ಹೇಳಿಕೆ ನೀಡಿದ್ದಾರೆ.

ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡುತ್ತೇವೆ. ಜನವರಿ ಮೊದಲ ವಾರದಲ್ಲಿ ಕಾಂಗ್ರೆಸ್​ ಪಕ್ಷದಿಂದ ಪಾದಯಾತ್ರೆ ಮಾಡುತ್ತೇವೆ. ಮೇಕೆದಾಟು ಬಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡ್ತೇವೆ. ಯೋಜನೆ ಜಾರಿಗೆ ಆಗ್ರಹಿಸಿ 10ರಿಂದ 15 ದಿನ ಪಾದಯಾತ್ರೆ ನಡೆಯಲಿದೆ. ಮಂಡ್ಯ, ಮೈಸೂರು, ಹಾಸನ ಜಿಲ್ಲೆಯ ರೈತರಿಗೆ ಅನುಕೂಲ ಆಗಲಿದೆ. ಪರಿಷತ್​ ಚುನಾವಣೆ ನಂತರ ಪಾದಯಾತ್ರೆಗೆ ದಿನಾಂಕ ಪ್ರಕಟ ಮಾಡುತ್ತೇವೆ ಎಂದು ಡಿ‌.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ಉಸಿರು ನಿಲ್ಲಿಸಬೇಕಾದರೆ ಚುನಾವಣೆ ಗೆಲ್ಲಬೇಕು ಎಂಬ ಯಡಿಯೂರಪ್ಪ ಹೇಳಿಕೆಗೆ ಡಿ‌.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪಗೆ ಒಳ್ಳೆಯದಾಗಲಿ. ಕುತ್ತಿಗೆ ಹಿಸುಕಿಬಿಟ್ಟು ಉಸಿರು ನಿಲ್ಲಿಸುತ್ತೇನೆ ಅಂದ್ರೆ ಹೇಗೆ. ಬಿಜೆಪಿಯವರಿಗೆ ಯಾರು ಬೇಕಾದರೂ ಬೆಂಬಲ ನೀಡಲಿ. ನಾವು ನೀತಿ, ಸಿದ್ಧಾಂತದ ಮೇಲೆ ಚುನಾವಣೆ ಮಾಡುತ್ತಿದ್ದೇವೆ. ಕುಮಾರಸ್ವಾಮಿ ಅಭಿಪ್ರಾಯ ಇಂದು ಒಂದು ಇರುತ್ತದೆ, ನಾಳೆ ಒಂದಿರುತ್ತೆ, ನಾಡಿದ್ದು ಮತ್ತೊಂದು ಇರುತ್ತದೆ. ಹೆಚ್​ಡಿಕೆ ಹೇಳಿಕೆ ಗಂಭೀರವಾಗಿ ಪರಿಗಣಿಸುವುದು ಬೇಡ. ಜೆಡಿಎಸ್​ನವರು ಯಾರಿಗಾದರೂ ಸಹಕಾರ ನೀಡಲಿ ಎಂದು ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಜೈಲಿಗೆ ಯಾಕೆ ಹೋದೆ ಅಂದ್ರೆ ನೀವು ಕಳಿಸಿದ್ರಿ ನಾನು ಹೋದೆ; ಈಶ್ವರಪ್ಪ ಪ್ರಶ್ನೆಗೆ ಡಿಕೆ ಶಿವಕುಮಾರ್ ತಿರುಗೇಟು

ಇದನ್ನೂ ಓದಿ: ನನ್ನ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದು ನಿಂತ್ರು: ಬಿಬಿ ಚಿಮ್ಮನಕಟ್ಟಿ ಭಾಷಣ; ಸಿದ್ದರಾಮಯ್ಯಗೆ ಮುಜುಗರ!

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ