AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾಗೆ ಪ್ರಧಾನಿಯಾಗಲು ಕಲಾಂ ಆಹ್ವಾನಿಸಿದ್ದರು; ಬೇಡ ಎಂದು‌ ಸೋನಿಯಾ ನಿರಾಕರಿಸಿದ್ದರು: ಡಿಕೆ ಶಿವಕುಮಾರ್

ಆರ್ಥಿಕ ತಜ್ಞರಿಗೆ ಪ್ರಧಾನಿ ಹುದ್ದೆ ನೀಡಲು ಬಯಸಿದ್ದರು. ಆ ವೇಳೆ ಮನಮೋಹನ್ ಸಿಂಗ್​ರನ್ನು ಪ್ರಧಾನಿ ಮಾಡಿದರು. ಪಂಚಾಯತ್​ರಾಜ್ ವ್ಯವಸ್ಥೆಗೆ ಕಾಂಗ್ರೆಸ್ ಕೊಡುಗೆ ಅಪಾರ ಎಂದು ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಸೋಮವಾರ ಹೇಳಿಕೆ ನೀಡಿದ್ದಾರೆ.

ಸೋನಿಯಾಗೆ ಪ್ರಧಾನಿಯಾಗಲು ಕಲಾಂ ಆಹ್ವಾನಿಸಿದ್ದರು; ಬೇಡ ಎಂದು‌ ಸೋನಿಯಾ ನಿರಾಕರಿಸಿದ್ದರು: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
TV9 Web
| Edited By: |

Updated on: Dec 06, 2021 | 6:12 PM

Share

ಮಂಡ್ಯ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಪ್ರಧಾನಿಯಾಗಲು ಕಲಾಂ ಆಹ್ವಾನಿಸಿದ್ದರು. ಪ್ರಧಾನಿ ಹುದ್ದೆ ಬೇಡ ಎಂದು‌ ಸೋನಿಯಾ ನಿರಾಕರಿಸಿದ್ದರು. ಈ ದೇಶಕ್ಕಾಗಿ ನನ್ನ ಅತ್ತೆ, ಗಂಡನ್ನು ಕಳೆದುಕೊಂಡಿದ್ದೇನೆ ಎಂದಿದ್ದರು. ಆರ್ಥಿಕ ತಜ್ಞರಿಗೆ ಪ್ರಧಾನಿ ಹುದ್ದೆ ನೀಡಲು ಬಯಸಿದ್ದರು. ಆ ವೇಳೆ ಮನಮೋಹನ್ ಸಿಂಗ್​ರನ್ನು ಪ್ರಧಾನಿ ಮಾಡಿದರು. ಪಂಚಾಯತ್​ರಾಜ್ ವ್ಯವಸ್ಥೆಗೆ ಕಾಂಗ್ರೆಸ್ ಕೊಡುಗೆ ಅಪಾರ ಎಂದು ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಸೋಮವಾರ ಹೇಳಿಕೆ ನೀಡಿದ್ದಾರೆ.

ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡುತ್ತೇವೆ. ಜನವರಿ ಮೊದಲ ವಾರದಲ್ಲಿ ಕಾಂಗ್ರೆಸ್​ ಪಕ್ಷದಿಂದ ಪಾದಯಾತ್ರೆ ಮಾಡುತ್ತೇವೆ. ಮೇಕೆದಾಟು ಬಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡ್ತೇವೆ. ಯೋಜನೆ ಜಾರಿಗೆ ಆಗ್ರಹಿಸಿ 10ರಿಂದ 15 ದಿನ ಪಾದಯಾತ್ರೆ ನಡೆಯಲಿದೆ. ಮಂಡ್ಯ, ಮೈಸೂರು, ಹಾಸನ ಜಿಲ್ಲೆಯ ರೈತರಿಗೆ ಅನುಕೂಲ ಆಗಲಿದೆ. ಪರಿಷತ್​ ಚುನಾವಣೆ ನಂತರ ಪಾದಯಾತ್ರೆಗೆ ದಿನಾಂಕ ಪ್ರಕಟ ಮಾಡುತ್ತೇವೆ ಎಂದು ಡಿ‌.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ಉಸಿರು ನಿಲ್ಲಿಸಬೇಕಾದರೆ ಚುನಾವಣೆ ಗೆಲ್ಲಬೇಕು ಎಂಬ ಯಡಿಯೂರಪ್ಪ ಹೇಳಿಕೆಗೆ ಡಿ‌.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪಗೆ ಒಳ್ಳೆಯದಾಗಲಿ. ಕುತ್ತಿಗೆ ಹಿಸುಕಿಬಿಟ್ಟು ಉಸಿರು ನಿಲ್ಲಿಸುತ್ತೇನೆ ಅಂದ್ರೆ ಹೇಗೆ. ಬಿಜೆಪಿಯವರಿಗೆ ಯಾರು ಬೇಕಾದರೂ ಬೆಂಬಲ ನೀಡಲಿ. ನಾವು ನೀತಿ, ಸಿದ್ಧಾಂತದ ಮೇಲೆ ಚುನಾವಣೆ ಮಾಡುತ್ತಿದ್ದೇವೆ. ಕುಮಾರಸ್ವಾಮಿ ಅಭಿಪ್ರಾಯ ಇಂದು ಒಂದು ಇರುತ್ತದೆ, ನಾಳೆ ಒಂದಿರುತ್ತೆ, ನಾಡಿದ್ದು ಮತ್ತೊಂದು ಇರುತ್ತದೆ. ಹೆಚ್​ಡಿಕೆ ಹೇಳಿಕೆ ಗಂಭೀರವಾಗಿ ಪರಿಗಣಿಸುವುದು ಬೇಡ. ಜೆಡಿಎಸ್​ನವರು ಯಾರಿಗಾದರೂ ಸಹಕಾರ ನೀಡಲಿ ಎಂದು ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಜೈಲಿಗೆ ಯಾಕೆ ಹೋದೆ ಅಂದ್ರೆ ನೀವು ಕಳಿಸಿದ್ರಿ ನಾನು ಹೋದೆ; ಈಶ್ವರಪ್ಪ ಪ್ರಶ್ನೆಗೆ ಡಿಕೆ ಶಿವಕುಮಾರ್ ತಿರುಗೇಟು

ಇದನ್ನೂ ಓದಿ: ನನ್ನ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದು ನಿಂತ್ರು: ಬಿಬಿ ಚಿಮ್ಮನಕಟ್ಟಿ ಭಾಷಣ; ಸಿದ್ದರಾಮಯ್ಯಗೆ ಮುಜುಗರ!

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ