AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬತ್ತಿದ ಕಾವೇರಿ: ಧಾರ್ಮಿಕ ವಿಧಿ ವಿಧಾನ ನೆರವೇರಿಸಿ ನದಿಯಲ್ಲಿ ಮುಳುಗಲಾಗದೆ ತಲೆ ಮೇಲೆ ಚಂಬು ನೀರು ಹಾಕಿಕೊಳ್ಳುತ್ತಿರುವ ಜನ

ಕಾವೇರಿ ನದಿಯಲ್ಲಿ ನೀರಿನ ಕೊರತೆ ಕಂಡು ಬಂದಿದ್ದು ನದಿ ಈಗ ತಳಮಟ್ಟ ಸೇರಿದೆ. ಇದು ಇಲ್ಲಿ ನಡೆವ ಅಸ್ತಿವಿಸರ್ಜನೆ, ಪಿಂಡ ಪ್ರಧಾನಗಳಂತಹ ಧಾರ್ಮಿಕ ಕಾರ್ಯಗಳ ಮೇಲೂ ಪರಿಣಾಮ ಬೀರಿದೆ.

ಬತ್ತಿದ ಕಾವೇರಿ: ಧಾರ್ಮಿಕ ವಿಧಿ ವಿಧಾನ ನೆರವೇರಿಸಿ ನದಿಯಲ್ಲಿ ಮುಳುಗಲಾಗದೆ ತಲೆ ಮೇಲೆ ಚಂಬು ನೀರು ಹಾಕಿಕೊಳ್ಳುತ್ತಿರುವ ಜನ
ಶ್ರೀರಂಗಪಟ್ಟಣದಲ್ಲಿ ಕಂಡು ಬಂದ ದೃಶ್ಯ
ಪ್ರಶಾಂತ್​ ಬಿ.
| Edited By: |

Updated on: Jul 19, 2023 | 12:01 PM

Share

ಮಂಡ್ಯ, ಜುಲೈ 14: ಈ ಬಾರಿ ರಾಜ್ಯದಲ್ಲಿ ನಿರೀಕ್ಷೆ ಮಟ್ಟದಲ್ಲಿ ಮುಂಗಾರು(Monsoon) ಮಳೆಯಾಗುತ್ತಿಲ್ಲ. ರಾಜ್ಯದ ಬಹುತೇಕ ಡ್ಯಾಂಗಳು(Karnataka Dams) ಖಾಲಿ ಖಾಲಿಯಾಗಿಯೇ ಇವೆ. ಮಂಡ್ಯ ಜಿಲ್ಲೆಯ ಕೆಆರ್​ಎಸ್ ಡ್ಯಾಂನಲ್ಲಿ(KRS Dam) ಇಂದಿಗೆ 89 ಅಡಿ ನೀರು ಸಂಗ್ರಹ ಇದೆ. ಡ್ಯಾಂ ಗೆ 1711 ಕ್ಯೂಸೆಕ್ ನೀರು ಒಳ ಹರಿವಿದ್ರೆ, ಕೇವಲ 349 ಕ್ಯೂಸೆಕ್ ನೀರು ಹೊರ ಹರಿವಿದೆ. ಕೆಆರ್​ಎಸ್ ಡ್ರಾಂನಲ್ಲಿ ನೀರು ಕಡಿಮೆಯಾಗಿರೋದು ಜಿಲ್ಲೆಯ ರೈತರ ಬದುಕಿನ ಮೇಲಷ್ಟೆ ಪರಿಣಾಮ ಬೀರಿಲ್ಲ. ಜೊತೆಗೆ ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ಧಾರ್ಮಿಕ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದೆ.

ಕಾವೇರಿ ನದಿಯಲ್ಲಿ ನೀರಿನ ಕೊರತೆ ಕಂಡು ಬಂದಿದ್ದು ನದಿ ಈಗ ತಳಮಟ್ಟ ಸೇರಿದೆ. ಇದು ಇಲ್ಲಿ ನಡೆವ ಅಸ್ತಿವಿಸರ್ಜನೆ, ಪಿಂಡ ಪ್ರಧಾನಗಳಂತಹ ಧಾರ್ಮಿಕ ಕಾರ್ಯಗಳ ಮೇಲೂ ಪರಿಣಾಮ ಬೀರಿದೆ. ಯಾವಾಗಲೂ ಜನರಿಂದ ತುಂಬಿ ತುಳುಕುತ್ತಿದ್ದ ಪಶ್ಚಿಮ ವಾಹಿನಿಯಲ್ಲಿ ಇಂದು ಜನರೇ ಇಲ್ಲದಂತಾಗಿದೆ. ಇದ್ದರೂ ಕೇವಲ ಬೆರಳೆಣಿಕೆಯಷ್ಟು ಜನ ಮಾತ್ರ ಪಿಂಡ ಪ್ರಧಾನ ಮಾಡೋದು ಅಸ್ತಿ ವಿಸರ್ಜನೆ ಮಾಡೋದನ್ನ ಮಾಡ್ತಿದ್ದಾರೆ. ಧಾರ್ಮಿಕ ಕಾರ್ಯಗಳಿಗೆ ಹೆಸರುವಾಸಿಯಾದ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಜನರ ಸಂಖ್ಯೆ ಕುಸಿದಿದೆ. ಧಾರ್ಮಿಕ ಕಾರ್ಯಗಳಿಗೆ ಬರುವ ಜನರು ಸ್ನಾನ ಮಾಡಲು ನದಿಯಲ್ಲಿ ನೀರಿನ ಕೊರತೆ ಎದುರಾಗಿದೆ. ಇರುವ ಕಡಿಮೆ ನೀರಿನಲ್ಲೇ ತಮ್ಮವರ ಹೆಸರಿನಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನ ನೆರವೇರಿಸಿ ತಲೆ ಮೇಲೆ ಚಂಬಿನಿಂದ ನೀರು ಹಾಕೊಳ್ತಿದ್ದಾರೆ.

ಇದನ್ನೂ ಓದಿ: Karnataka Dam Water Level: ಜು.19ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಪಿಂಡ ಪ್ರಧಾನ ಮಾಡಿ ನೀರಲ್ಲಿ ಮುಳುಗಲಾಗದೆ ಹಾಗೇ ತೆರಳುತ್ತಿರುವ ಜನ

ಇನ್ನೂ ಕೆಲವರು ಪಿಂಡ ಪ್ರಧಾನ ನೆರವೇರಿಸಿ ನದಿಯಲ್ಲಿ ಮುಳುಗಲಾಗದೆ ಹಾಗೇ ತೆರಳುತ್ತಿದ್ದಾರೆ. ಪಶ್ಚಿಮವಾಹಿನಿಯಲ್ಲಿ ಅಸ್ತಿ ವಿಸರ್ಜನೆ ಮಾಡಿದ್ರೆ, ಪಿಂಡ ಪ್ರಧಾನ ಮಾಡಿದ್ರೆ ಮನುಷ್ಯನಿಗೆ ಮುಕ್ತಿ ಸಿಗುತ್ತೆ ಅನ್ನೋದು ನಂಬಿಕೆ. ಹೀಗಾಗಿಯೇ ಇಲ್ಲಿ ರಾಜ್ಯದ ಜನರಷ್ಟೇ ಅಲ್ಲದೇ ಹೊರ ರಾಜ್ಯದ ಜನರೂ ಬಂದು ತೀರಿ ಹೋಗಿರೊ ತಮ್ಮ ಮನೆಯ ಸದಸ್ಯರ ಹೆಸರಿನಲ್ಲಿ ಧಾರ್ಮಿಕ‌ ಕಾರ್ಯ ನಡೆಸಿ ಹೋಗ್ತಾರೆ. ಮಹಾತ್ಮಗಾಂಧಿ, ಇಂದಿರಾಗಾಂಧಿ ಸೇರಿದಂತೆ ದೇಶದ ಅನೇಕ ಗಣ್ಯರ ಅಸ್ತಿವಿಸರ್ಜನೆ ಮಾಡಿರೋ ಸ್ಥಳ ಇದಾಗಿದೆ.

ಮಂಡ್ಯ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ