AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬತ್ತಿದ ಕಾವೇರಿ: ಧಾರ್ಮಿಕ ವಿಧಿ ವಿಧಾನ ನೆರವೇರಿಸಿ ನದಿಯಲ್ಲಿ ಮುಳುಗಲಾಗದೆ ತಲೆ ಮೇಲೆ ಚಂಬು ನೀರು ಹಾಕಿಕೊಳ್ಳುತ್ತಿರುವ ಜನ

ಕಾವೇರಿ ನದಿಯಲ್ಲಿ ನೀರಿನ ಕೊರತೆ ಕಂಡು ಬಂದಿದ್ದು ನದಿ ಈಗ ತಳಮಟ್ಟ ಸೇರಿದೆ. ಇದು ಇಲ್ಲಿ ನಡೆವ ಅಸ್ತಿವಿಸರ್ಜನೆ, ಪಿಂಡ ಪ್ರಧಾನಗಳಂತಹ ಧಾರ್ಮಿಕ ಕಾರ್ಯಗಳ ಮೇಲೂ ಪರಿಣಾಮ ಬೀರಿದೆ.

ಬತ್ತಿದ ಕಾವೇರಿ: ಧಾರ್ಮಿಕ ವಿಧಿ ವಿಧಾನ ನೆರವೇರಿಸಿ ನದಿಯಲ್ಲಿ ಮುಳುಗಲಾಗದೆ ತಲೆ ಮೇಲೆ ಚಂಬು ನೀರು ಹಾಕಿಕೊಳ್ಳುತ್ತಿರುವ ಜನ
ಶ್ರೀರಂಗಪಟ್ಟಣದಲ್ಲಿ ಕಂಡು ಬಂದ ದೃಶ್ಯ
ಪ್ರಶಾಂತ್​ ಬಿ.
| Edited By: ಆಯೇಷಾ ಬಾನು|

Updated on: Jul 19, 2023 | 12:01 PM

Share

ಮಂಡ್ಯ, ಜುಲೈ 14: ಈ ಬಾರಿ ರಾಜ್ಯದಲ್ಲಿ ನಿರೀಕ್ಷೆ ಮಟ್ಟದಲ್ಲಿ ಮುಂಗಾರು(Monsoon) ಮಳೆಯಾಗುತ್ತಿಲ್ಲ. ರಾಜ್ಯದ ಬಹುತೇಕ ಡ್ಯಾಂಗಳು(Karnataka Dams) ಖಾಲಿ ಖಾಲಿಯಾಗಿಯೇ ಇವೆ. ಮಂಡ್ಯ ಜಿಲ್ಲೆಯ ಕೆಆರ್​ಎಸ್ ಡ್ಯಾಂನಲ್ಲಿ(KRS Dam) ಇಂದಿಗೆ 89 ಅಡಿ ನೀರು ಸಂಗ್ರಹ ಇದೆ. ಡ್ಯಾಂ ಗೆ 1711 ಕ್ಯೂಸೆಕ್ ನೀರು ಒಳ ಹರಿವಿದ್ರೆ, ಕೇವಲ 349 ಕ್ಯೂಸೆಕ್ ನೀರು ಹೊರ ಹರಿವಿದೆ. ಕೆಆರ್​ಎಸ್ ಡ್ರಾಂನಲ್ಲಿ ನೀರು ಕಡಿಮೆಯಾಗಿರೋದು ಜಿಲ್ಲೆಯ ರೈತರ ಬದುಕಿನ ಮೇಲಷ್ಟೆ ಪರಿಣಾಮ ಬೀರಿಲ್ಲ. ಜೊತೆಗೆ ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ಧಾರ್ಮಿಕ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದೆ.

ಕಾವೇರಿ ನದಿಯಲ್ಲಿ ನೀರಿನ ಕೊರತೆ ಕಂಡು ಬಂದಿದ್ದು ನದಿ ಈಗ ತಳಮಟ್ಟ ಸೇರಿದೆ. ಇದು ಇಲ್ಲಿ ನಡೆವ ಅಸ್ತಿವಿಸರ್ಜನೆ, ಪಿಂಡ ಪ್ರಧಾನಗಳಂತಹ ಧಾರ್ಮಿಕ ಕಾರ್ಯಗಳ ಮೇಲೂ ಪರಿಣಾಮ ಬೀರಿದೆ. ಯಾವಾಗಲೂ ಜನರಿಂದ ತುಂಬಿ ತುಳುಕುತ್ತಿದ್ದ ಪಶ್ಚಿಮ ವಾಹಿನಿಯಲ್ಲಿ ಇಂದು ಜನರೇ ಇಲ್ಲದಂತಾಗಿದೆ. ಇದ್ದರೂ ಕೇವಲ ಬೆರಳೆಣಿಕೆಯಷ್ಟು ಜನ ಮಾತ್ರ ಪಿಂಡ ಪ್ರಧಾನ ಮಾಡೋದು ಅಸ್ತಿ ವಿಸರ್ಜನೆ ಮಾಡೋದನ್ನ ಮಾಡ್ತಿದ್ದಾರೆ. ಧಾರ್ಮಿಕ ಕಾರ್ಯಗಳಿಗೆ ಹೆಸರುವಾಸಿಯಾದ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಜನರ ಸಂಖ್ಯೆ ಕುಸಿದಿದೆ. ಧಾರ್ಮಿಕ ಕಾರ್ಯಗಳಿಗೆ ಬರುವ ಜನರು ಸ್ನಾನ ಮಾಡಲು ನದಿಯಲ್ಲಿ ನೀರಿನ ಕೊರತೆ ಎದುರಾಗಿದೆ. ಇರುವ ಕಡಿಮೆ ನೀರಿನಲ್ಲೇ ತಮ್ಮವರ ಹೆಸರಿನಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನ ನೆರವೇರಿಸಿ ತಲೆ ಮೇಲೆ ಚಂಬಿನಿಂದ ನೀರು ಹಾಕೊಳ್ತಿದ್ದಾರೆ.

ಇದನ್ನೂ ಓದಿ: Karnataka Dam Water Level: ಜು.19ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಪಿಂಡ ಪ್ರಧಾನ ಮಾಡಿ ನೀರಲ್ಲಿ ಮುಳುಗಲಾಗದೆ ಹಾಗೇ ತೆರಳುತ್ತಿರುವ ಜನ

ಇನ್ನೂ ಕೆಲವರು ಪಿಂಡ ಪ್ರಧಾನ ನೆರವೇರಿಸಿ ನದಿಯಲ್ಲಿ ಮುಳುಗಲಾಗದೆ ಹಾಗೇ ತೆರಳುತ್ತಿದ್ದಾರೆ. ಪಶ್ಚಿಮವಾಹಿನಿಯಲ್ಲಿ ಅಸ್ತಿ ವಿಸರ್ಜನೆ ಮಾಡಿದ್ರೆ, ಪಿಂಡ ಪ್ರಧಾನ ಮಾಡಿದ್ರೆ ಮನುಷ್ಯನಿಗೆ ಮುಕ್ತಿ ಸಿಗುತ್ತೆ ಅನ್ನೋದು ನಂಬಿಕೆ. ಹೀಗಾಗಿಯೇ ಇಲ್ಲಿ ರಾಜ್ಯದ ಜನರಷ್ಟೇ ಅಲ್ಲದೇ ಹೊರ ರಾಜ್ಯದ ಜನರೂ ಬಂದು ತೀರಿ ಹೋಗಿರೊ ತಮ್ಮ ಮನೆಯ ಸದಸ್ಯರ ಹೆಸರಿನಲ್ಲಿ ಧಾರ್ಮಿಕ‌ ಕಾರ್ಯ ನಡೆಸಿ ಹೋಗ್ತಾರೆ. ಮಹಾತ್ಮಗಾಂಧಿ, ಇಂದಿರಾಗಾಂಧಿ ಸೇರಿದಂತೆ ದೇಶದ ಅನೇಕ ಗಣ್ಯರ ಅಸ್ತಿವಿಸರ್ಜನೆ ಮಾಡಿರೋ ಸ್ಥಳ ಇದಾಗಿದೆ.

ಮಂಡ್ಯ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ