AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ; ಯಾವುದೇ ಕಾರಣಕ್ಕೂ ಶಾಲೆಗಳನ್ನು ಮುಚ್ಚಲ್ಲ: ಬಿ.ಸಿ ನಾಗೇಶ್ ಸ್ಪಷ್ಟನೆ

ನಾವು ಮಕ್ಕಳ ಮೇಲೆ ಒತ್ತಡ ಹೇರಿಲ್ಲ. ಮಕ್ಕಳಿಗೆ ಬಾಳೆ ಹಣ್ಣು ಕೂಡ ಕೊಡ್ತಿದ್ದೇವೆ‌. ಪ್ರೊಟೀನ್ ಯುಕ್ತ ಪದಾರ್ಥ ಆಯ್ಕೆ ಮಾಡ್ತಿದ್ದೇವೆ. ತಜ್ಞರು ಒಪ್ಪಿಕೊಂಡರೆ ಮುಂದಿನ ದಿನಗಳಲ್ಲಿ ಜಾರಿ ಮಾಡ್ತೇವೆ ಎಂದು ಮಂಡ್ಯದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ; ಯಾವುದೇ ಕಾರಣಕ್ಕೂ ಶಾಲೆಗಳನ್ನು ಮುಚ್ಚಲ್ಲ: ಬಿ.ಸಿ ನಾಗೇಶ್ ಸ್ಪಷ್ಟನೆ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 11, 2021 | 6:31 PM

Share

ಮಂಡ್ಯ: ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ. ಮಕ್ಕಳು ಅಪೌಷ್ಟಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ. ಮಕ್ಕಳ ಮೇಲೆ, ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಸರ್ಕಾರ ಈ ಯೋಜನೆ ಜಾರಿ ಮಾಡಿದೆ. ಪ್ರೊಟೀನ್​ಗಾಗಿ ಮೊಟ್ಟೆ ನೀಡಲಾಗುತ್ತಿದೆ. ತಜ್ಞರು ಸಹ ಹೀಗೆ ಸಲಹೆ ನೀಡಿದ್ದಾರೆ. ನಾವು ಮಕ್ಕಳ ಮೇಲೆ ಒತ್ತಡ ಹೇರಿಲ್ಲ. ಮಕ್ಕಳಿಗೆ ಬಾಳೆ ಹಣ್ಣು ಕೂಡ ಕೊಡ್ತಿದ್ದೇವೆ‌. ಪ್ರೊಟೀನ್ ಯುಕ್ತ ಪದಾರ್ಥ ಆಯ್ಕೆ ಮಾಡ್ತಿದ್ದೇವೆ. ತಜ್ಞರು ಒಪ್ಪಿಕೊಂಡರೆ ಮುಂದಿನ ದಿನಗಳಲ್ಲಿ ಜಾರಿ ಮಾಡ್ತೇವೆ ಎಂದು ಮಂಡ್ಯದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಕೆಲವೇ ದಿನಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗುತ್ತದೆ. ಅನೇಕ ವರ್ಷಗಳಿಂದ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ‌. 15 ಸಾವಿರ ಪೋಸ್ಟ್ ಪೂರ್ಣ ಮಾಡಲಾಗುತ್ತದೆ. ಕೆಲವೆ ದಿನಗಳ ನೋಟಿಫಿಕೇಷನ್ ಮಾಡಲಾಗುತ್ತದೆ. ಶಾಲಾ ಕೊಠಡಿಗಳ ಕೊರತೆ ಇದೆ, ಸರಿಪಡಿಸುತ್ತೇವೆ. ಮುಂದಿನ ವರ್ಷ ಅಕಾಡೆಮಿ ಕೇರ್ ಒಳಗಡೆ NET ಅನುಷ್ಟಾನಕ್ಕೆ ತರುವ ಕೆಲಸ ಮಾಡ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳನ್ನ ಮುಚ್ಚಲ್ಲ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ.

ಕೊರೊನಾ ಕುರಿತು ಗಂಭೀರ ಸ್ಥಿತಿ ಬಂದಿಲ್ಲ. 1 ಕೋಟಿ 20 ಲಕ್ಷ ಮಕ್ಕಳಲ್ಲಿ 102 ಮಕ್ಕಳಿಗೆ ಮಾತ್ರ ಸೋಂಕಿದೆ. ಯಾವುದೇ ರೀತಿಯ ಉದಾಸೀನ ಮಾಡದೆ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಸಿಟಿವ್ ಬಂದಿರುವುದು ರೆಸಿಡೆನ್ಸಿ ಶಾಲೆಗಳಲ್ಲಿ. ಒಪನ್ ಶಾಲೆಗಳಲ್ಲಿ ಯಾವುದೇ ಮಕ್ಕಳಿಗೆ ಪಾಸಿಟಿವ್ ಬಂದಿಲ್ಲ. ಡಬಲ್ ಡಿಜಿಟ್ ಯಾವುದೇ ಜಿಲ್ಲೆಯಲ್ಲಿ ವರದಿಯಾಗಿಲ್ಲ. ಪಾಸಿಟಿವ್ ಬಂದ ಮಕ್ಕಳು ಆರೋಗ್ಯಕರವಾಗಿದ್ದಾರೆ. ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಮುಚ್ಚಲ್ಲ. ಪಿಯುಸಿ ಮಿಡ್ ಟರ್ಮ್ ಎಕ್ಸಾಂ ತುಂಬಾ ಚೆನ್ನಾಗಿ ನಡೆಯುತ್ತಿದೆ. ವಿದ್ಯಾರ್ಥಿಗಳು ಆಸಕ್ತರಿದ್ದಾರೆ, ಎಲ್ಲಾ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಂಡು ಶಾಲೆ ನಡೆಸುತ್ತೇವೆ ಎಂದು ನಾಗೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೊಟ್ಟೆ ಬದಲು ತಾಯಿ ಕೈಗೆ ದುಡ್ಡು ಕೊಟ್ಟರೆ ಇನ್ನೂ ಚೆನ್ನಾಗಿ ಆಹಾರ ಹಾಕಬಹುದು: ಶೋಭಾ ಕರಂದ್ಲಾಜೆ

ಇದನ್ನೂ ಓದಿ: Health Tips: ಮೊಟ್ಟೆಗಿಂತಲೂ ಹೆಚ್ಚು ಪ್ರೋಟೀನ್ ಇರುವ 5 ಸಸ್ಯಾಹಾರಿ ಆಹಾರಗಳಿವು

Published On - 5:37 pm, Sat, 11 December 21

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್