AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಪಿ ಚುನಾವಣೆಗೆ ಸ್ಪರ್ಧಿಸಿದ್ದ ಇಬ್ಬರು ಸುಮಲತಾ ಸೇರಿದಂತೆ ಮಂಡ್ಯ ಜಿಲ್ಲೆಯ 7 ಅಭ್ಯರ್ಥಿಗಳು ಅನರ್ಹ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರ​ ವಿರುದ್ಧ ಸ್ಪರ್ಧಿಸಿದ್ದ ಸುಮಲತಾ ಎಂಬ ಹೆಸರಿನ ಇಬ್ಬರು ಅಭ್ಯರ್ಥಿಗಳನ್ನು ಚುನಾವಣಾ ಆಯೋಗ ಅನರ್ಹಗೊಳಿಸಿದೆ.

ಎಂಪಿ ಚುನಾವಣೆಗೆ ಸ್ಪರ್ಧಿಸಿದ್ದ ಇಬ್ಬರು ಸುಮಲತಾ ಸೇರಿದಂತೆ ಮಂಡ್ಯ ಜಿಲ್ಲೆಯ 7 ಅಭ್ಯರ್ಥಿಗಳು ಅನರ್ಹ
ಚುನಾವಣಾ ಆಯೋಗ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 11, 2023 | 3:26 PM

Share

ಮಂಡ್ಯ: ಕಳೆದ ಲೋಕಸಭಾ ಚುನಾವಣೆಯ (Lok sabha Election) ಸಂದರ್ಭದಲ್ಲಿ ದೇಶದ ಚಿತ್ತ ಮಂಡ್ಯ ಲೋಕಸಭಾ ಕ್ಷೇತ್ರದತ್ತ (Mandya Lok sabha Constituency) ನೆಟ್ಟಿತ್ತು. ಮಾಜಿ ಸಂಸದ, ದಿವಂಗತ ನಟ ಅಂಬರೀಶ್​ ಅವರ ಪತ್ನಿ, ಸುಮಲತಾ ಅಂಬರೀಶ್ (Sumalatha Ambarish)​ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು. ಈ ವೇಳೆ ಎದುರಾಳಿಯಾಗಿ ಜೆಡಿಎಸ್​ನಿಂದ (JDS) ನಿಖಿಲ್​ ಕುಮಾರಸ್ವಾಮಿ (Nikhil Kumarswamy) ಸ್ಪರ್ಧಿಸಿದ್ದರು. ಇವರಿಬ್ಬರ ಫೈಟ್​ ಹೈ ವೋಲ್ಟೇಜ್​ನಿಂದ ಕೂಡಿತ್ತು. ಸಂಸದೆ ಸುಮಲತಾ ಅಂಬರೀಶ್ ಅವರ​ ವಿರುದ್ಧ ಪ್ರತಿಸ್ಪರ್ಧಿಯಾಗಿ ಸುಮಲತಾ ಎಂಬ ಹೆಸರಿನ ಇನ್ನಿಬ್ಬರು ಸ್ಪರ್ಧೆ ಮಾಡಿದ್ದರು. ಇದರ ಹಿಂದೆ ಜೆಡಿಎಸ್​​ನ ಹುನ್ನಾರವಿತ್ತು. ಮತಗಳು ವಿಭಜನೆಯಾಗಾಲಿ, ಜನರಲ್ಲಿ ಗೊಂದಲ ಮೂಡಲಿ ಎಂದು ಜೆಡಿಎಸ್​ ಸುಮಲತಾ ಎಂಬ ಹೆಸರಿನ ಇಬ್ಬರು ಅಭ್ಯರ್ಥಿಗಳನ್ನು ಪಕ್ಷೇತರವಾಗಿ ನಿಲ್ಲಿಸಿದೆ ಎಂದು ಆರೋಪ ಕೇಳಿಬಂದಿತ್ತು. ಇದು ಚುನಾವಣೆಯಲ್ಲಿ ಜೆಡಿಎಸ್​ ಉರುಳಿಸಿದ ದಾಳವಾಗಿತ್ತು. ಈಗ ಚುನಾವಣಾ ಆಯೋಗ ಸುಮಲತಾ ಎಂಬ ಹೆಸರಿನ ಇಬ್ಬರು ಅಭ್ಯರ್ಥಿಗಳಿಗಳನ್ನು ಅನರ್ಹಗೊಳಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಖರ್ಚು ವೆಚ್ಚದ ಬಗ್ಗೆ ಸರಿಯಾದ ದಾಖಲಾತಿ ಸಲ್ಲಿಸದ ಹಿನ್ನೆಲೆ ಇಬ್ಬರು ಸುಮಲತಾ ಸೇರಿದಂತೆ ಮಂಡ್ಯ ಜಿಲ್ಲೆಯ 7 ಅಭ್ಯರ್ಥಿಗಳನ್ನ ಡಿಸ್​ಕ್ವಾಲಿಫೈ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಸುದೀಪ್​, ಸುಮಲತಾ ಬಿಜೆಪಿ ಪರ ವಹಿಸಿದ ಬಳಿಕ ಯಶ್​ ನಿಲುವೇನು? ಜನರಲ್ಲಿ ಮೂಡಿದೆ ಪ್ರಶ್ನೆ

ಅನರ್ಹಗೊಂಡ ಮಂಡ್ಯದ 7 ಸ್ಪರ್ಧಿಗಳು

ಅರವಿಂದ ಪ್ರೇಮಾನಂದ, ಎನ್​.ಸಿ ಪುಟ್ಟೆಗೌಡ, ಸುಮಲತಾ ಟಿ.ಎಮ್​​ ಹೊಸುರು, ಎಮ್​. ಸುಮಲತಾ, ಎಸ್​​.ಹೆಚ್​. ಲಿಂಗೇಗೌಡ್​, ಕೆ.ಆರ್​. ಶಿವಮಾದೇಗೌಡ, ಬಿಎಸ್​ ಗೌಡ.

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:25 pm, Tue, 11 April 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್