AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಪಿ ಚುನಾವಣೆಗೆ ಸ್ಪರ್ಧಿಸಿದ್ದ ಇಬ್ಬರು ಸುಮಲತಾ ಸೇರಿದಂತೆ ಮಂಡ್ಯ ಜಿಲ್ಲೆಯ 7 ಅಭ್ಯರ್ಥಿಗಳು ಅನರ್ಹ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರ​ ವಿರುದ್ಧ ಸ್ಪರ್ಧಿಸಿದ್ದ ಸುಮಲತಾ ಎಂಬ ಹೆಸರಿನ ಇಬ್ಬರು ಅಭ್ಯರ್ಥಿಗಳನ್ನು ಚುನಾವಣಾ ಆಯೋಗ ಅನರ್ಹಗೊಳಿಸಿದೆ.

ಎಂಪಿ ಚುನಾವಣೆಗೆ ಸ್ಪರ್ಧಿಸಿದ್ದ ಇಬ್ಬರು ಸುಮಲತಾ ಸೇರಿದಂತೆ ಮಂಡ್ಯ ಜಿಲ್ಲೆಯ 7 ಅಭ್ಯರ್ಥಿಗಳು ಅನರ್ಹ
ಚುನಾವಣಾ ಆಯೋಗ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 11, 2023 | 3:26 PM

Share

ಮಂಡ್ಯ: ಕಳೆದ ಲೋಕಸಭಾ ಚುನಾವಣೆಯ (Lok sabha Election) ಸಂದರ್ಭದಲ್ಲಿ ದೇಶದ ಚಿತ್ತ ಮಂಡ್ಯ ಲೋಕಸಭಾ ಕ್ಷೇತ್ರದತ್ತ (Mandya Lok sabha Constituency) ನೆಟ್ಟಿತ್ತು. ಮಾಜಿ ಸಂಸದ, ದಿವಂಗತ ನಟ ಅಂಬರೀಶ್​ ಅವರ ಪತ್ನಿ, ಸುಮಲತಾ ಅಂಬರೀಶ್ (Sumalatha Ambarish)​ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು. ಈ ವೇಳೆ ಎದುರಾಳಿಯಾಗಿ ಜೆಡಿಎಸ್​ನಿಂದ (JDS) ನಿಖಿಲ್​ ಕುಮಾರಸ್ವಾಮಿ (Nikhil Kumarswamy) ಸ್ಪರ್ಧಿಸಿದ್ದರು. ಇವರಿಬ್ಬರ ಫೈಟ್​ ಹೈ ವೋಲ್ಟೇಜ್​ನಿಂದ ಕೂಡಿತ್ತು. ಸಂಸದೆ ಸುಮಲತಾ ಅಂಬರೀಶ್ ಅವರ​ ವಿರುದ್ಧ ಪ್ರತಿಸ್ಪರ್ಧಿಯಾಗಿ ಸುಮಲತಾ ಎಂಬ ಹೆಸರಿನ ಇನ್ನಿಬ್ಬರು ಸ್ಪರ್ಧೆ ಮಾಡಿದ್ದರು. ಇದರ ಹಿಂದೆ ಜೆಡಿಎಸ್​​ನ ಹುನ್ನಾರವಿತ್ತು. ಮತಗಳು ವಿಭಜನೆಯಾಗಾಲಿ, ಜನರಲ್ಲಿ ಗೊಂದಲ ಮೂಡಲಿ ಎಂದು ಜೆಡಿಎಸ್​ ಸುಮಲತಾ ಎಂಬ ಹೆಸರಿನ ಇಬ್ಬರು ಅಭ್ಯರ್ಥಿಗಳನ್ನು ಪಕ್ಷೇತರವಾಗಿ ನಿಲ್ಲಿಸಿದೆ ಎಂದು ಆರೋಪ ಕೇಳಿಬಂದಿತ್ತು. ಇದು ಚುನಾವಣೆಯಲ್ಲಿ ಜೆಡಿಎಸ್​ ಉರುಳಿಸಿದ ದಾಳವಾಗಿತ್ತು. ಈಗ ಚುನಾವಣಾ ಆಯೋಗ ಸುಮಲತಾ ಎಂಬ ಹೆಸರಿನ ಇಬ್ಬರು ಅಭ್ಯರ್ಥಿಗಳಿಗಳನ್ನು ಅನರ್ಹಗೊಳಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಖರ್ಚು ವೆಚ್ಚದ ಬಗ್ಗೆ ಸರಿಯಾದ ದಾಖಲಾತಿ ಸಲ್ಲಿಸದ ಹಿನ್ನೆಲೆ ಇಬ್ಬರು ಸುಮಲತಾ ಸೇರಿದಂತೆ ಮಂಡ್ಯ ಜಿಲ್ಲೆಯ 7 ಅಭ್ಯರ್ಥಿಗಳನ್ನ ಡಿಸ್​ಕ್ವಾಲಿಫೈ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಸುದೀಪ್​, ಸುಮಲತಾ ಬಿಜೆಪಿ ಪರ ವಹಿಸಿದ ಬಳಿಕ ಯಶ್​ ನಿಲುವೇನು? ಜನರಲ್ಲಿ ಮೂಡಿದೆ ಪ್ರಶ್ನೆ

ಅನರ್ಹಗೊಂಡ ಮಂಡ್ಯದ 7 ಸ್ಪರ್ಧಿಗಳು

ಅರವಿಂದ ಪ್ರೇಮಾನಂದ, ಎನ್​.ಸಿ ಪುಟ್ಟೆಗೌಡ, ಸುಮಲತಾ ಟಿ.ಎಮ್​​ ಹೊಸುರು, ಎಮ್​. ಸುಮಲತಾ, ಎಸ್​​.ಹೆಚ್​. ಲಿಂಗೇಗೌಡ್​, ಕೆ.ಆರ್​. ಶಿವಮಾದೇಗೌಡ, ಬಿಎಸ್​ ಗೌಡ.

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:25 pm, Tue, 11 April 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ