AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಕಾನ್ಸ್‌ಟೇಬಲ್‌; ಪಡೆದ ಹಣವೇಷ್ಟು?

ಲಂಚ (bribe) ಸ್ವೀಕರಿಸುವಾಗ ಅಬಕಾರಿ ಕಾನ್ಸ್‌ಟೇಬಲ್‌ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ  (Lokayukta) ಬಲೆಗೆ ಬಿದ್ದ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ಅಬಕಾರಿ ಕಚೇರಿಯಲ್ಲಿ ನಡೆದಿದೆ. ಇನ್ನು ಲೋಕಾಯುಕ್ತ ದಾಳಿ ವೇಳೆ ಅಬಕಾರಿ ಇನ್ಸ್​ಪೆಕ್ಟರ್‌​​ ಗೀತಾ ಪರಾರಿಯಾಗಿದ್ದಾರೆ.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಕಾನ್ಸ್‌ಟೇಬಲ್‌; ಪಡೆದ ಹಣವೇಷ್ಟು?
ಮಂಡ್ಯ ಲೋಕಾಯುಕ್ತ ದಾಳಿ
ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 06, 2023 | 6:35 PM

Share

ಮಂಡ್ಯ, ಅ.06: ಲಂಚ (bribe) ಸ್ವೀಕರಿಸುವಾಗ ಅಬಕಾರಿ ಕಾನ್ಸ್‌ಟೇಬಲ್‌ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ  (Lokayukta) ಬಲೆಗೆ ಬಿದ್ದ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ಅಬಕಾರಿ ಕಚೇರಿಯಲ್ಲಿ ನಡೆದಿದೆ. ಇನ್ನು ಲೋಕಾಯುಕ್ತ ದಾಳಿ ವೇಳೆ ಅಬಕಾರಿ ಇನ್ಸ್​ಪೆಕ್ಟರ್‌​​ ಗೀತಾ ಪರಾರಿಯಾಗಿದ್ದಾರೆ. ಅಬಕಾರಿ ಪೇದೆ ದೇವರಾಜು ಬಲೆಗೆ ಬಿದ್ದ ಅಧಿಕಾರಿ. ಇತ ಸುರೇಶ್ ಎಂಬಾತನಿಂದ 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಮಂಡ್ಯ ಲೋಕಾಯುಕ್ತ ಎಸ್​ಪಿ ಸಜೀತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.  ಚಾರ್ಜ್‌ಶೀಟ್​ನಲ್ಲಿ ಜಮೀನು ಮಾಲೀಕನ ಹೆಸರು ಕೈಬಿಡಲು ಸುರೇಶ್‌ ಬಳಿ ಇನ್ಸ್​ಪೆಕ್ಟರ್‌ ಗೀತಾ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.  ಗೀತಾ ಅವರ ಸೂಚನೆಯಂತೆ ಪೇದೆ ದೇವರಾಜು ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದ SDA ಸುನೀಲ್​ ಕುಮಾರ್ ಲೋಕಾ ಬಲೆಗೆ

ಇನ್ನು ಬೀದರ್ ಜಿಲ್ಲೆಯಲ್ಲೂ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. ಹೌದು, ಹುಮ್ನಾಬಾದ್ ತಾಲೂಕಿನ ಹುಡುಗಿ ಗ್ರಾಮದ ಪ್ರಾಥಮಿಕ ಕೇಂದ್ರದ ಎಸ್​ಡಿಎ ಅಧಿಕಾರಿ ಆಗಿ ಕೆಲಸ ಮಾಡುತ್ತಿದ್ದ ಸುನೀಲ್ ಕುಮಾರ್ ಎಂಬಾತ, ಹೆಲ್ತ್​​ ಇನ್ಸ್​ಪೆಕ್ಟರ್​ ಸಂಬಳ ಮಂಜೂರು ಮಾಡಲು 20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಅದನ್ನು ಪಡೆಯುವಾಗ ಲೋಕಾಯುಕ್ತ ಡಿವೈಎಸ್​ಪಿ ಎನ್.ಎಂ.ಓಲೇಕಾರ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿದಾಗ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ:ಟಿವಿ9 ವರದಿ ಫಲಶ್ರುತಿ: ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ನ್ಯಾಯಾಧೀಶರು ಹಾಗೂ ಲೋಕಾಯುಕ್ತ ಅಧಿಕಾರಿಗಳ ಭೇಟಿ!

ಇನ್ನು ಕಳೆದ ತಿಂಗಳು ಒಂದು ಲಕ್ಷ ಲಂಚ ಸ್ವೀಕರಿಸುವಾಗ ಬೀದರ್​ ಜಿಲ್ಲೆಯ ಬಸವಕಲ್ಯಾಣ ತಹಶೀಲ್ದಾರ್​ ​ ಶಿವಾನಂದ ಬಿರಾದಾರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿತ್ತು. ಇವರು ಕೊಹಿನೂರು ನಾಡಕಚೇರಿ ಉಪ ತಹಶೀಲ್ದಾರ್ ಆಗಿದ್ದು, ಮುಚ್ಚಿಳಮ ಗ್ರಾಮದ ರೈತ ಸುಧೀರ್​ ಎಂಬುವವರು ಜಮೀನು ಪಹಣಿ ಕೊಡುವಂತೆ ಕೇಳಿದ್ದರು. ಈ ಹಿನ್ನಲೆ ಉಪ ತಹಶೀಲ್ದಾರ್​ 1 ಲಕ್ಷ ರೂಪಾಯಿಗೆ ಲಂಚಕ್ಕೆ ಬೇಡಿಕೆ‌ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತ DySP ಎನ್​ಎಂ ಓಲೇಕಾರ್ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗಿದ್ದು, ಲಂಚ ಸ್ವೀಕರಿಸುವಾಗ ಶಿವಾನಂದ ಅವರು ಸಿಕ್ಕಿಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More